ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ 2025ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಇದು 10 ಪ್ರಮುಖ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸಿದೆ. ಕೃಷಿ ವಲಯವನ್ನು ಬಜೆಟ್ನಲ್ಲಿ ಮೊದಲ ಮಹತ್ವದ ಎಂಜಿನ್ ಎಂದು ಅವರು ವಿವರಿಸಿದರು.
ಪಿಎಂ ಧನಧಾನ್ಯ ಕೃಷಿ ಯೋಜನೆ 100 ಕಡಿಮೆ ಉತ್ಪಾದಕತೆ ಹೊಂದಿರುವ ಜಿಲ್ಲೆಗಳನ್ನು ಒಳಗೊಂಡಿರುತ್ತದೆ. ಈ ಯೋಜನೆ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದರ ಜೊತೆಗೆ, ಪಂಚಾಯತ್ ಮಟ್ಟದಲ್ಲಿ ಸಂಗ್ರಹಣಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿ 1.7 ಕೋಟಿ ರೈತರು ಲಾಭ ಪಡೆಯಲಿದ್ದಾರೆ. ರಾಜ್ಯ ಸರ್ಕಾರಗಳ ಜೊತೆಗೆ ಈ ಯೋಜನೆಯನ್ನು ಜಾರಿಗೆ ತರಲಾಗುವುದು.
ಈ ಕಾರ್ಯಕ್ರಮದಲ್ಲಿ ಜಾಗತಿಕ ಕೃಷಿ ಪದ್ಧತಿಗಳನ್ನು ಅಳವಡಿಸಲು ಒತ್ತು ನೀಡಲಾಗುವುದು. ದ್ವಿದಳ ಧಾನ್ಯಗಳ ಉತ್ಪಾದನೆಯನ್ನು ಪ್ರೋತ್ಸಾಹಿಸಲು ಉದ್ದು, ತೊಗರಿ ಮತ್ತು ಮಸೂರ್ ಬೆಳೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.ಇದನ್ನು ಓದಿ –ಕ್ಷಮೆಯಿರದ ತಪ್ಪುಗಳ ಚಕ್ರವ್ಯೂಹದೊಳಗೆ….
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಅನ್ನು ಇಂದು ಮಂಡಿಸಲಾಗಿದೆ.
More Stories
ಒಂದು ವರ್ಷದ ಒಳಗೆ ಮುಜರಾಯಿ ದೇವಾಲಯಗಳ ಆಸ್ತಿ ಇಂಡೀಕರಣ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ: ಬೈಕ್ ಸವಾರರಿಗೆ ನಿಷೇಧ!
ಏಕದಿನ ಕ್ರಿಕೆಟ್ಗೆ ಸ್ಟೀವ್ ಸ್ಮಿತ್ ವಿದಾಯ: ಆಸ್ಟ್ರೇಲಿಯಾ ಬ್ಯಾಟಿಂಗ್ ದಿಗ್ಗಜನ ನಿವೃತ್ತಿ ಘೋಷಣೆ