2020ರ ಏಪ್ರಿಲ್ 24ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ವಾಮಿತ್ವ ಯೋಜನೆಯನ್ನು ಪರಿಚಯಿಸಿದ್ದಾರೆ. ಈಗ ಆ ಯೋಜನೆಯ ಮೂಲಕ ಹಳ್ಳಿಗಳಲ್ಲಿರುವ ಜನರಿಗೆ ಆಸ್ತಿ ಕಾರ್ಡ್ ವಿತರಿಸಲು ಮುಂದಾಗಿದ್ದಾರೆ. ಪ್ರಾರಂಭಿಕ ಹಂತವಾಗಿ ದೇಶದ 763 ಹಳ್ಳಿಗಳ 1,32,000 ಭೂ ಮಾಲೀಕರಿಗೆ ಕಾರ್ಡ್ ನೀಡಲು ನಿರ್ಧರಿಸಿದೆ ಕೇಂದ್ರ ಸರ್ಕಾರ.
ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ವರ್ಷಗಳಿಂದ ವಾಸ ಮಾಡಿರುವ ತಮ್ಮ ಜಾಗದ ದಾಖಲೆ ಹೊಂದಿರದವರಿಗೆ ಪಂಚಾಯತ್ ರಾಜ್ ಸಚಿವಾಲಯದ ಮೂಲಕ ಹಕ್ಕುಪತ್ರ ನೀಡುವ ನೂತನ ಚಿಂತನೆಯ ಯೋಜನೆ ಇದಾಗಿದೆ.
ಈಗ ಹಕ್ಕು ಪತ್ರಗಳನ್ನು ಆಸ್ತಿ ಕಾರ್ಡ್ ಮೂಲಕ ನೀಡುವ ಚಿಂತನೆ ನಡೆಸಲಾಗುತ್ತಿದೆ ಎಂದು ಇಂದು ನಡೆದ ಆನ್ಲೈನ್ ಕಾನ್ಫರೆನ್ಸ್ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ಮೋದಿ ಹೇಳಿದರು.
ಆಸ್ತಿಪತ್ರ ಅಥವಾ ಆಸ್ತಿಕಾರ್ಡ್ ಹೊಂದಿದ ಮಾಲೀಕರು ಇನ್ನು ಮುಂದೆ ಸರಳವಾಗಿ ಬ್ಯಾಂಕುಗಳಲ್ಲಿ ಅಥವಾ ಇತರೆ ಹಣಕಾಸು ಸಂಸ್ಥೆಗಳಲ್ಲಿ ಸಾಲವನ್ನು ಪಡೆಯಬಹುದಾಗಿದೆ. ಆಸ್ತಿಪತ್ರಗಳನ್ನು ವಿತರಣೆ ಮಾಡುವಾಗ ಪಂಚಾಯತ್ ರಾಜ್ ಸಚಿವಾಲಯದ ಅಧಿಕಾರಿಗಳು, ರಾಜ್ಯ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
ಪ್ರತೀ ಆಸ್ತಿಯನ್ನು ನೂತನ ತಂತ್ರಜ್ಞಾನವನ್ನು ಬಳಸಿ, ಡ್ರೋನ್ ಮೂಲಕ ಮ್ಯಾಪಿಂಗ್ ಸಹ ಮಾಡಲಾಗುವುದು. ಹಾಗೂ ಆಸ್ತಿ ಕಾರ್ಡ್ಗಳ ಭೌತಿಕ ಕಾರ್ಡ್ಗಳನ್ನು ವಿತರಿಸುವದಲ್ಲದೇ ಮಾಲೀಕರ ಮೊಬೈಲ್ ಸಂಖ್ಯೆಗೆ ಲಿಂಕ್ ಒಂದನ್ನು ಕಳಿಸಲಾಗುತ್ತದೆ. ಈ ಲಿಂಕ್ ಮೂಲಕವೂ ಆಸ್ತಿಕಾರ್ಡ್ಗಳನ್ನು ಡೌನ್ಲೊಡ್ ಮಾಡಿಕೊಳ್ಳಬಹುದಾಗಿದೆ.
ಅಕ್ಷಯ ತೃತೀಯ ಹಿಂದುಗಳಿಗೆ ಅತ್ಯಂತ ಮಂಗಳಕರ ದಿನವೆಂದು ಪರಿಗಣಿಸಲಾಗಿದೆ, ಅಕ್ಷಯ ಎಂದರೆ ಶಾಶ್ವತ ಎಂದರ್ಥ! ಸ್ನೇಹಾ ಆನಂದ್ 🌻 ಈ… Read More
ಮಡಿಕೇರಿ :ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಅಮಾನುಷ ಕೃತ್ಯ ನಡೆದಿದ್ದು, ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಭೀಕರ ಹತ್ಯೆ ನಡೆದಿದೆ. ಮೀನಾ… Read More
ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ… Read More
ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣ ಸೋಮವಾರದವರೆಗೆ… Read More
ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
This website uses cookies.
Leave a Comment