ಪ್ರಚೋದಿಸುತ್ತಲೇ ಇರುತ್ತೇನೆ,
ದ್ವೇಷದ ದಳ್ಳುರಿ ನಶಿಸಿ,
ಪ್ರೀತಿಯ ಒರತೆ ಚಿಮ್ಮುವವರೆಗೂ….
ಪ್ರಚೋದಿಸುತ್ತಲೇ ಇರುತ್ತೇನೆ,
ಮನುಷ್ಯರಲ್ಲಿ ಮಾನವೀಯತೆಯ ಬೆಳಕು ಮೂಡುವವರೆಗೂ,…..
ಪ್ರಚೋದಿಸುತ್ತಲೇ ಇರುತ್ತೇನೆ,
ಮೌಢ್ಯದ ವಿರುದ್ಧ ವೈಚಾರಿಕ ಪ್ರಜ್ಞೆ ಬೆಳಗುವವರೆಗೂ,……..
ಪ್ರಚೋದಿಸುತ್ತಲೇ ಇರುತ್ತೇನೆ,
ಹಿಂಸೆಯ ವಿರುದ್ಧ ಅಹಿಂಸೆ ಜಯ ಸಾಧಿಸುವವರೆಗೂ,…..
ಪ್ರಚೋದಿಸುತ್ತಲೇ ಇರುತ್ತೇನೆ,
ಸುಳ್ಳಿನ ವಿರುದ್ಧ ಸತ್ಯ ಗೆಲ್ಲುವವರೆಗೂ,….
ಪ್ರಚೋದಿಸುತ್ತಲೇ ಇರುತ್ತೇನೆ ಮುಖವಾಡಗಳು ಬಯಲಾಗಿ ಸಹಜತೆ ಕಾಣುವವರೆಗೂ,…..
ಪ್ರಚೋದಿಸುತ್ತಲೇ ಇರುತ್ತೇನೆ,
ಜಾತಿಯ ಅಸಮಾನತೆ ತೊಲಗುವವರೆಗೂ,…..
ಪ್ರಚೋದಿಸುತ್ತಲೇ ಇರುತ್ತೇನೆ,
ಕುತಂತ್ರಿಗಳ ಮುಖವಾಡ ಬಯಲಾಗುವವರೆಗೂ,…….
ಪ್ರಚೋದಿಸುತ್ತಲೇ ಇರುತ್ತೇನೆ,
ಶೋಷಿತರ ದೌರ್ಜನ್ಯ ನಿಲ್ಲುವವರೆಗೂ……..
ಪ್ರಚೋದಿಸುತ್ತಲೇ ಇರುತ್ತೇನೆ,
ಜೀವನಮಟ್ಟ ಸುಧಾರಣೆಯ ಆಗುವವರೆಗೂ,…….
ಪ್ರಚೋದಿಸುತ್ತಲೇ ಇರುತ್ತೇನೆ,
ಯೋಚಿಸುವ ಮನಸ್ಸುಗಳು ವಿಶಾಲವಾಗುವವರೆಗೂ,….
ಪ್ರಚೋದಿಸುತ್ತಲೇ ಇರುತ್ತೇನೆ,
ಜನರ ಕಣ್ಣುಗಳಲ್ಲಿ ನೆಮ್ಮದಿಯ ಆಶಾಕಿರಣ ಕಾಣುವವರೆಗೂ,…
ಪ್ರಚೋದಿಸುತ್ತಲೇ ಇರುತ್ತೇನೆ,
ಹೃದಯಗಳು ಬೆಸೆಯುವವರೆಗೂ,…
ಪ್ರಚೋದಿಸುವುದು,
ಏನು ಯೋಚನೆ ಮಾಡಬೇಕೆಂದಲ್ಲ,
ಹೇಗೆ ಯೋಚನೆ ಮಾಡಬೇಕೆಂದು…..
ಅಂದರೆ,
ಒಂದು ವಿಷಯವನ್ನು ಸಮಗ್ರ ದೃಷ್ಟಿಕೋನದಿಂದ ಹೇಗೆ ನೋಡಬೇಕೆಂದು,
ಅದರ ಒಳಿತು ಕೆಡುಕುಗಳ ಸಂಪೂರ್ಣ ಪರಿಣಾಮವನ್ನು ಅರ್ಥಮಾಡಿಕೊಳ್ಳಬೇಕೆಂದು,
ಸ್ವಲ್ಪ ಆಸಕ್ತಿ, ಸ್ವಲ್ಪ ಸಹನೆ, ಸ್ವಲ್ಪ ಸಹಾನುಭೂತಿ, ಸ್ವಲ್ಪ ತಾಳ್ಮೆ, ಸ್ವಲ್ಪ ಬುದ್ಧಿವಂತಿಕೆ, ಸ್ವಲ್ಪ ಒಳ್ಳೆಯತನ, ಸ್ವಲ್ಪ ಪ್ರೀತಿ ವಿಶ್ವಾಸ ಕರುಣೆ, ಸ್ವಲ್ಪ ಅಧ್ಯಯನ, ಸ್ವಲ್ಪ ಸ್ಥಿರ ಪ್ರಜ್ಞತೆ, ಸ್ವಲ್ಪ ವಾಸ್ತವಿಕತೆ…
ಹೀಗೆ ಎಲ್ಲಾ ಆಯಾಮಗಳ ಅವಲೋಕನ…..
ನಮ್ಮ ಸ್ವಾತಂತ್ರ್ಯ ಉಳಿಸಿಕೊಂಡು, ಇತರರ ಸ್ವಾತಂತ್ರ್ಯ ಗೌರವಿಸುತ್ತಾ….
ಪ್ರಚೋದಿಸುತ್ತಲೇ ಇರುತ್ತೇನೆ,
ಕೊನೆಯ ಉಸಿರೆಳೆಯುವವರೆಗೂ……
ಬರೆಯುವ ಕೈಗಳು ಸ್ತಬ್ಧವಾಗುವವರೆಗೂ………
ಪ್ರಚೋದನೆ ಸ್ವಾರ್ಥಕ್ಕಾಗಿಯಲ್ಲ,
ಸಮಾಜದ ಸುಧಾರಣೆಗಾಗಿ…..
ವಿವೇಕಾನಂದ. ಹೆಚ್.ಕೆ.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment