ಪಾಂಡವ ಕ್ರೀಡಾಂಗಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಪುಟ್ಟರಾಜು ಅವರು,ಕನ್ನಡ ಚಿತ್ರರಂಗ ಕಂಡ ಮೇರು ನಟ ಪುನೀತ್ ರಾಜ್ಕುಮಾರ್ ಅವರನ್ನು ಸ್ಮರಿಸುವ ಭಾಗವಾಗಿ ಅದ್ದೂರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.ಮೇಲುಕೋಟೆಯಲ್ಲಿ ಕೆಳಕ್ಕೆ ಉರುಳಿದ ಭಾರಿ ಗಾತ್ರದ ಮರ – ಮೂವರು ವಿದ್ಯಾರ್ಥಿಗಳಿಗೆ ಗಾಯ
ಪುನೀತೋತ್ಸವ ಕಾರ್ಯಕ್ರಮದಲ್ಲಿ ಡಾ. ರಾಜ್ ಕುಟುಂಬದ ಅಶ್ವಿನಿ ಪುನೀತ್ ರಾಜ್ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.
ಮೂರು ದಿನಗಳ ಕಾಲ ಅಪ್ಪು ನೆನಪಲ್ಲಿ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ.ಕನ್ನಡ ಚಿತ್ರರಂಗದ ಖ್ಯಾತ ನಟ, ನಟಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವುದಿಲ್ಲ.
ನೂರಕ್ಕೆ ನೂರರಷ್ಟು ಕುಮಾರಸ್ವಾಮಿ ಸಿಎಂ ಆಗುವುದು ಖಚಿತ. ಜೆಡಿಎಸ್ ಸ್ವತಂತ್ರವಾಗಿ ಅಧಿಕಾರ ಹಿಡಿಯಲಿದೆ ಎಂದರು.
ಜೆಡಿಎಸ್ ಬಿಟ್ಟು ಹೋದವರೆಲ್ಲಾ ಮತ್ತೆ ಪಕ್ಷಕ್ಕೆ ವಾಪಾಸ್ ಬರುತ್ತಾರೆ.
ಕಳೆದ ಬಾರಿ ಕೆಆರ್ ಪೇಟೆಯಲ್ಲಿ ದುಡ್ಡಿನ ಪ್ರಭಾವಿದಿಂದ ಸೋಲಾಗಿತ್ತು.
ಆದರೆ ಈ ಬಾರಿ ಸಮರ್ಥ ಅಭ್ಯರ್ಥಿಗಳಿದ್ದಾರೆ, ಸಾಕಷ್ಟು ಅಂತರದಿಂದ ಗೆಲ್ತೇವೆ.ಜಿಲ್ಲೆಯಲ್ಲಿ ಈ ಬಾರಿಯೂ 7ಕ್ಕೆ 7 ಸ್ಥಾನಗಳಲ್ಲಿ ಜೆಡಿಎಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಪುರಸಭೆ ಅಧ್ಯಕ್ಷೆ ಅರ್ಚನಾ ಚಂದ್ರು, ಸದಸ್ಯರಾದ ಬಿ.ವೈ.ಬಾಬು,ಶಿವಣ್ಣ,ಇಮ್ರಾನ್, ಶಿವಕುಮಾರ್, ಚಂದ್ರು, ತಾಲ್ಲೂಕು ಕಸಾಪ ಅಧ್ಯಕ್ಷ ಮೇನಾಗರ ಪ್ರಕಾಶ್ ಉಪಸ್ಥಿತರಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು