ನಾನು ಚಿಕ್ಕ ಮಗುವಾಗಿರುವಾಗ ಅಮ್ಮ ಎಲ್ಲರಿಗೂ ಹೇಳುತ್ತಿದ್ದಳು,
” ನನ್ನ ಮಗು ಸುರಸುಂದರಾಂಗ – ರಾಜಕುಮಾರ ” ಎಂದು.
ಆದರೆ,
ಪಕ್ಕದ ಮನೆ ಆಂಟಿ ನಾನು ಕೋತಿಮರಿ ತರಾ ಇದ್ದೇನೆ ಎಂದು ಯಾರಿಗೋ ಹೇಳುತ್ತಿದ್ದುದು ಕೇಳಿಸಿತು.
ಶಾಲೆಗೆ ಹೋಗುವಾಗ ಅಪ್ಪ ಎಲ್ಲರಿಗೂ ಹೇಳುತ್ತಿದ್ದರು,
” ನನ್ನ ಮಗ ತುಂಬಾ ಬುದ್ಧಿವಂತ – ಚಾಣಾಕ್ಷ ” ಎಂದು
ಆದರೆ,
ಶಾಲೆಯಲ್ಲಿ ಟೀಚರುಗಳು ಹೇಳುತ್ತಿದ್ದರು, ನೀನು ದಡ್ಡ – ಅಯೋಗ್ಯ, ಎದೆ ಸೀಳಿದರು ನಾಲ್ಕಕ್ಷರ ಬರೆಯಲು ಸರಿಯಾಗಿ ಬರುವುದಿಲ್ಲ ಎಂದು.
ಮನೆಯಲ್ಲಿ ನಾನು ಆಗಾಗ ಸಿನಿಮಾ ಹಾಡುಗಳನ್ನು ಹಾಡುತ್ತಿದ್ದರೆ, ನನ್ನ ಅಜ್ಜಿ ” ನನ್ನ ಮೊಮ್ಮಗ ಥೇಟ್ S.P. ಬಾಲಸುಬ್ರಮಣ್ಯಂರಂತೆ ಹಾಡುತ್ತಾನೆ ” ಎನ್ನುತ್ತಿದ್ದರು,
ಆದರೆ,
ಅದೇ ಹಾಡನ್ನು ಸ್ನೇಹಿತರ ಮುಂದೆ ಹಾಡಿದರೆ ಏಯ್ ನಿಲ್ಸೋ ಕತ್ತೆ ಕೂಗಿದರೂ ಇದಕ್ಕಿಂತ ಮಧುರವಾಗಿರುತ್ತದೆ ಎನ್ನುತ್ತಿದ್ದರು.
ಮನೆಯಲ್ಲಿ ನಡೆದ ಘಟನೆಗಳನ್ನು ನಾನು ನೋಡಿದ ರೀತಿಯಲ್ಲಿಯೇ ಸತ್ಯವಾಗಿ ಹೇಳಿದಾಗ ಅಜ್ಜ “
ನನ್ನ ಮೊಮ್ಮಗ ಸತ್ಯ ಹರಿಶ್ಚಂದ್ರ ” ಎನ್ನುತ್ತಿದ್ದರು,
ಆದರೆ,
ಅದೇ ರೀತಿ ಆಟದ ಮೈದಾನದಲ್ಲಿ ನಡೆದ ಹೊಡೆದಾಟಗಳನ್ನು ಪ್ರಿನ್ಸಿಪಾಲರ ಬಳಿ ಅಷ್ಟೇ ಸತ್ಯವಾಗಿ ಹೇಳಿದಾಗ ನನ್ನ ಜೊತೆಗಾರರು ಇವನೊಬ್ಬ ನಾರದ – ಪಿಂಪ್ ನನ್ಮಗ ಗುರು ಎನ್ನುತ್ತಿದ್ದರು.
ಕಾಲೇಜಿನ ನಾಟಕದಲ್ಲಿ ಹೆಣ್ಣು ಪಾತ್ರ ಮಾಡಿ ಪ್ರಥಮ ಬಹುಮಾನ ಗಳಿಸಿದಾಗ ತೀರ್ಪುಗಾರರು ” ಅದ್ಭುತ ನಟ ” ಎಂದರು.
ಆದರೆ,
ನನ್ನ ಸಹಪಾಠಿಗಳು ಇವನೊಬ್ಬ ಚಕ್ಕ – ಹೆಣ್ಣಿಗ ಎಂದು ಜರಿದರು.
ಲಂಚಕೊಟ್ಟು ಕೆಲಸಕ್ಕೆ ಸೇರುವುದಿಲ್ಲ ಎಂದು ಪ್ರಾಮಾಣಿಕವಾಗಿ ವರ್ಷಗಟ್ಟಲೆ ಅಲೆಯುವಾಗ ನನ್ನ ಸುತ್ತಲಿನವರು ಬಫೂನ್ ನಂತೆ ನೋಡಿದರು.
ಆದರೆ,
ಲಂಚಕೊಟ್ಟು ಒಳ್ಳೆಯ ಕೆಲಸಕ್ಕೆ ಸೇರಿದಾಗ ಅದೇ ಜನ ಶಹಬಾಸ್ ಎಂದರು.
ವರದಕ್ಷಿಣೆ ಇಲ್ಲದೆ ಮದುವೆಯಾಗುತ್ತೇನೆ ಎಂದಾಗ ಸಂಬಂಧಿಕರು ಇವನಿಗೇನೋ ಐಬು ಎಂದು ಹೆಣ್ಣು ಕೊಡಲು ನಿರಾಕರಿಸಿದರು.
ಆದರೆ,
ಇಷ್ಟಿಷ್ಟು ಹಣ, ಒಡವೆ, ಸೈಟು ಬೇಕು ಎಂದು ಬೇಡಿಕೆ ಇಟ್ಟಾಗ ಅದನ್ನೆಲ್ಲಾ ನೀಡಿ ಭರ್ಜರಿಯಾಗಿ ಮದುವೆ ಮಾಡಿ ಕೊಟ್ಟರು.
ಆಫೀಸಿನಲ್ಲಿ ಎಲ್ಲರೂ ನನ್ನನ್ನು ಬುದ್ದಿವ೦ತ – Hard worker ಎಂದು ಹೊಗಳುವರು,
ಆದರೆ,
ನನ್ನ ಪತ್ನಿ ಮನೆಯಲ್ಲಿ ನನ್ನನ್ನು ಸಾಮಾನ್ಯ ಜ್ಞಾನ ಇಲ್ಲದ ಪೆದ್ದ – ಸೋಂಬೇರಿ ಎಂದು ಹಿಯಾಳಿಸುವಳು.
ನಿನ್ನನ್ನು ಕಟ್ಟಿಕೊಂಡ ನಾನು ದುರಾದೃಷ್ಟವಂತಳು.
ಒಂದು ಸ್ವಲ್ಪವೂ ರಸಿಕತೆಯಿಲ್ಲ ಎಂದು ಮನೆಯಲ್ಲಿ ಪತ್ನಿ ಕೊರಗುವಳು.
ಆದರೆ,
ನನ್ನ ಮಾತಿನ ಮೋಡಿ – ಜೋಕ್ ಗಳಿಗೆ ಸಂತೋಷಪಡುವ ನನ್ನ ಸಹೋದ್ಯೋಗಿಗಳು ನಿನ್ನನ್ನು ಪಡೆದ ನಿನ್ನ ಹೆಂಡತಿ ಅದೃಷ್ಡವಂತಳು ಎನ್ನುವರು.
ಒಂದು ಸಣ್ಣ ಸಹಾಯಕ್ಕಾಗಿ ಪಕ್ಕದ ಮನೆಯವರು ನನ್ನನ್ನು ದೇವರಂತಾ ಮನುಷ್ಯ ಎನ್ನುವರು.
ಆದರೆ,
ಒಂದು ಸಣ್ಣ ಜಗಳ ದಿಂದ ಎದುರು ಮನೆಯವರು ಇವನೊಬ್ಬ ಖದೀಮ ಮಹಾ ವಂಚಕ ಎನ್ನುವರು.
ಯಪ್ಪಾ, ………….
ಇವುಗಳ ಮಧ್ಯೆ ನನಗೆ ನಾನು ಯಾರೆಂದು ನನಗೇ ಅರಿವಾಗುತ್ತಿಲ್ಲ.
ಅದರ ಹುಡುಕಾಟದಲ್ಲಿ ನಾನು…………….
ವಿವೇಕಾನದ. ಹೆಚ್.ಕೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment