ಜನವರಿ 1ರಿಂದ 10ನೇ ತರಗತಿ ಹಾಗೂ 12ನೇ ತರಗತಿ ಆರಂಭಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಸಿರು ನಿಶಾನೆ ತೋರಿದರು.
6, 7, 8, 9 ನೇ ತರಗತಿಗಳಿಗೆ ವಿದ್ಯಾಗಮ ತರಗತಿಗಳು ಆರಂಭವಾಗುತ್ತವೆ.
ಕೊನೆಗೂ ರಾಜ್ಯದಲ್ಲಿ ಶಾಲಾ -ಕಾಲೇಜುಗಳ ಪುನರಾರಂಭದ ಬಗ್ಗೆ ಮುಹೂರ್ತ ಜನವರಿ 1ಕ್ಕೆ ಫಿಕ್ಸ್ ಮಾಡಲಾಗಿದೆ.
ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜನವರಿ 1ರಿಂದ 10 ಮತ್ತು 12ನೇ ತರಗತಿ ಆರಂಭಿಸ ಲಾಗುತ್ತಿದೆ. ಜನವರಿ 1ರಿಂದ 6 ರಿಂದ 9ನೇ ತರಗತಿ ವಿದ್ಯಾರ್ಥಿಳಿಗೆ ವಿದ್ಯಾಗಮ ಕಾರ್ಯಕ್ರಮದ ಮೂಲಕ ಶೈಕ್ಷಣಿಕ ಚಟುವಟಿಕೆ ಮುಂದುವರೆಸಲು ನಿರ್ಧರಿಸಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.
ಸಿಎಂ ಸಭೆಯ ನಂತರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಮಾತನಾಡಿ, 2021 ಜನವರಿ 1ರಿಂದ ಶಾಲಾ-ಕಾಲೇಜು ಆರಂಭಿಸಲಾಗುತ್ತಿದೆ. ಆರಂಭದಲ್ಲಿ 10 ಮತ್ತು 12ನೇ ತರಗತಿ ಶಾಲೆಗಳು ಪುನರಾರಂಭಿಸಲಾಗುತ್ತಿದೆ ಎಂದರು.
ವಿದ್ಯಾರ್ಥಿಗಳಿಗೆ ಕೊರೋನಾ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿದೆ. ಆನ್ ಲೈನ್ ಹಾಗೂ ಆಫ್ ಲೈನ್ ತರಗತಿಗಳಿಗೆ ವಿದ್ಯಾರ್ಥಿಗಳಿಗೆ ಹಾಜರಾಗುವ ಅವಕಾಶವನ್ನೂ ಕೂಡ ನೀಡಲಾಗಿದೆ ಎಂದರು.
ಮಹತ್ವದ ನಿರ್ಧಾರಗಳು
- ತರಗತಿ ಬರುವುದು ಕಡ್ಡಾಯವಲ್ಲ
- ಸೋಂಕಿನ ಲಕ್ಷಣಗಳು ಇದ್ದರೆ ಮಾತ್ರ ಕೊರೋನಾ ಟೆಸ್ಟ್.
- ಪೋಷಕರ ಅನುಮತಿ ಪತ್ರ ಬೇಕು.
- ವಾರದಲ್ಲಿ ಮೂರನೇ ದಿನ ವಿದ್ಯಾಗಮ ತರಗತಿಗಳು.
- ವಿದ್ಯಾಗಮ ತರಗತಿಗಳಿಗೆ ಕೇವಲ 15 ಮಕ್ಕಳಿಗೆ ಮಾತ್ರ ಅವಕಾಶ
- ವಿದ್ಯಾರ್ಥಿಗಳಿಗೆ ದಾಖಲಾತಿ ಕಡ್ಡಾಯವಲ್ಲ.
- ಮಕ್ಕಳನ್ನು ತರಗತಿಗೆ ಕಳಿಸಬೇಕು ಎಂಬ ಒತ್ತಾಯವಿಲ್ಲ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ