ಅ. 9 ರಿಂದ ಆರಂಭವಾಗುವ ಶೀರಂಗಪಟ್ಟಣ ದಸರಾವನ್ನು ಉದ್ಘಾಟಿಸುವಂತೆ ಆದಿ ಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಸಿ. ನಾರಾಯಣ ಗೌಡರವರು ಬುಧವಾರ ಅಧಿಕೃತವಾಗಿ ಆಹ್ವಾನ ನೀಡಿದರು.
ನಾಗಮಂಗಲದ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಸಚಿವರು ಶಾಲು ಹೊದಿಸಿ, ಫಲ ತಾಂಬೂಲ ನೀಡಿ ಗೌರವಿಸಿದರು. ಆನೆಯ ಕಲಾಕೃತಿಯ ಸ್ಮರಣಿಕೆ ನೀಡಿ ದಸರಾ ಉದ್ಘಾಟನೆಗೆ ಶ್ರೀಗಳನ್ನು ಆಹ್ವಾನಿಸಿದರು.
ಸ್ವಾಮೀಜಿಯವರಿಗೆ ದಸರಾ ಆಹ್ವಾನ ಪತ್ರಿಕೆ ನೀಡಿ, ಶ್ರೀಗಳಿಂದ ಶ್ರೀರಂಗಪಟ್ಟಣ ದಸರಾ ಪೋಸ್ಟರ್ ನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ನಾಡಿನ ಸಂಸ್ಕೃತಿಯ ಸಂಕೇತವಾಗಿರುವಂತಹ ದಸರಾವು ನಮ್ಮ ಶ್ರೀರಂಗಪಟ್ಟಣದಲ್ಲಿ ನಡೆಯುತ್ತದೆ. ಮೈಸೂರು ದಸರಾದ ರೀತಿಯಲ್ಲಿ ಮುಂಚೆ ಮೂಲವಾಗಿ ಪ್ರಾರಂಭವಾಗಿದ್ದು ನಮ್ಮ ಶ್ರೀರಂಗಪಟ್ಟಣದಲ್ಲಿ. ಅ. 9 ರಂದು ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ನಮ್ಮ ಹಿರಿಯರು ಅತ್ಯುತ್ತಮವಾದ ಸಂಸ್ಕೃತಿಯನ್ನು ನಮ್ಮ ನಾಡಿಗೆ ಬಿಟ್ಟು ಹೋಗಿದ್ದಾರೆ, ಆ ಸಂಸ್ಕೃತಿಯನ್ನು ಮುಂದಿನ ಪರಂಪರೆಗೆ ಬಡಿಸಿ-ಉಣಿಸಿ, ಆಚರಿಸಿಕೊಂಡು- ಉಳಿಸಿಕೊಂಡು ಹೋಗುವಂತದ್ದು ನಮ್ಮ ಪರಂಪರಾಗತ ಸಂಸ್ಕೃತಿ ಎಂದರು.
ನಂತರ ಮಾತನಾಡಿದ ಸಚಿವರು ಮೈಸೂರು ದಸರಾದ ಮೂಲ ನೆಲೆ ಶ್ರೀರಂಗಪಟ್ಟಣ, ಕಳೆದ ಎರಡು ವರ್ಷಗಳಿಂದ ಮಹಾಮಾರಿ ಕೊರೋನಾದಿಂದ ಶ್ರೀರಂಗಪಟ್ಟಣ ದಸರಾವನ್ನು ಸರಿಯಾಗಿ ಆಚರಿಸಲು ಆಗಿರಲಿಲ್ಲ, ಆದರೆ ಈ ಬಾರಿ ಅರ್ಥಪೂರ್ಣವಾಗಿ ಮತ್ತು ಸಾಂಪ್ರದಾಯಿಕವಾಗಿ ದಸರಾವನ್ನು ಆಚರಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ತಾವುಗಳು ಆಗಮಿಸಿ ಈ ಬಾರಿಯ ದಸರಾವನ್ನು ಉದ್ಘಾಟಿಸಿ, ಜಂಬೂಸವಾರಿಗೆ ಚಾಲನೆ ನೀಡಿ ಎಂದು ಶ್ರೀ ಗಳನ್ನು ಅಧಿಕೃತವಾಗಿ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ನಾಗಮಂಗಲ ಶಾಸಕರಾದ ಸುರೇಶ್ ಗೌಡ, ಜಿಲ್ಲಾಧಿಕಾರಿ ಎಸ್. ಅಶ್ವತಿ, ಪಾಂಡವಪುರ ಉಪವಿಭಾಗಧಿಕಾರಿ ಶಿವನಂದಮೂರ್ತಿ, ಶ್ರೀರಂಗಪಟ್ಟಣ ತಹಶೀಲ್ದಾರ್ ಶ್ವೇತಾ ಎನ್ ರವೀಂದ್ರ, ನಾಗಮಂಗಲ ತಹಶೀಲ್ದಾರ್ ಕುಂ ಇ್ ಅಹಮ್ಮದ್, ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment