ಮೈಸೂರಿನಲ್ಲಿ ಆ. 24 ರಂದು ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಐವರು ಆರೋಪಿಗಳ ವೈದ್ಯಕೀಯ ತಪಾಸಣೆ ಇಂದು ಅಜ್ಞಾತ ಸ್ಥಳದಲ್ಲಿ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ವಿಶೇಷ ತಜ್ಞರ ತಂಡ ಮೈಸೂರಿಗೆ ಬಂದಿದೆ.
ಈ ಮಧ್ಯೆ ಘಟನೆ ನಡೆದ ನಂತರ ಸಂತ್ರಸ್ತೆ ದಾಖಲಾಗಿದ್ದ ಆಸ್ಪತ್ರೆಯಿಂದ ಸಂತ್ರಸ್ತೆ ಡಿಎನ್ಎ ಸ್ಯಾಂಪಲ್ ಅನ್ನು ಸಂಗ್ರಹಿಸಲಾಗಿದೆ ಎಂದು ವರದಿಗಳು ಹೇಳಿವೆ.
ಸಾಮಾನ್ಯವಾಗಿ ಸರ್ಕಾರಿ ಆಸ್ಪತ್ರೆಯ ವೈದ್ಯರಿಂದ ಸ್ಯಾಂಪಲ್ ಸಂಗ್ರಹಿಸಲಾಗುತ್ತದೆ. ಆದರೆ ಈ ಸಾಮೂಹಿಕ ಅತ್ಯಾಚಾರ ಘಟನೆಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಖಾಸಗಿ ಆಸ್ಪತ್ರೆಯಿಂದ ಡಿಎನ್ಎ ಸಂಗ್ರಹಿಸಲಾಗಿದೆ ಎಂದು ತಿಳಿಸಿವೆ.
ಮೈಸೂರಿನಿಂದ ಪೋಷಕರೊಂದಿಗೆ ಮುಂಬೈಗೆ ತೆರಳಿರುವ ಸಂತ್ರಸ್ತೆ ಇನ್ನೂ ಪೊಲೀಸರಿಗೆ ಹೇಳಿಕೆ ನೀಡಲು ಮುಂದೆ ಬಂದಿಲ್ಲ ಎಂದು ಮೂಲಗಳು ಹೇಳಿವೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ