ಚೀನಾ ದೇಶದ ಶಾಂಘೈನಗರದಲ್ಲಿ ಕೋವಿಡ್ ತೀವ್ರ ಹೆಚ್ಚಳವಾಗಿ ಹಿರಿಯ ನಾಗರಿಕರ ಸರಣಿ ಸಾವುಗಳು ಸಂಭವಿಸುತ್ತಿದೆ. ಈ ಬೆನ್ನಲ್ಲೇ ಭಾರತದಲ್ಲೇ 5 ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗಿ ನಾಲ್ಕನೇ ಅಲೆಯ ಮುನ್ಸೂಚನೆ ನೀಡಿದಂತಾಗಿದೆ.
ಚೀನಾ, ಅಮೆರಿಕ ಮತ್ತು ಯೂರೋಪ್ನ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏರಿಕೆಯಾಗಿದೆ.
ಕೊರೊನಾ ವೈರಸ್ನ ರೂಪಾಂತರ ತಳಿಯಾದ ಓಮೈಕ್ರಾನ್ನ ಉಪ ತಳಿಯಾದ XE ತಳಿಯೂ ಸಹ ಭಾರತದಲ್ಲಿ 2 ಪ್ರಕರಣಗಳು ವರದಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಕೇಂದ್ರ ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ದೇಶದ ಕೇರಳ, ಹರಿಯಾಣ, ಮಹಾರಾಷ್ಟ್ರ ದೆಹಲಿ ಹಾಗೂ ಮಿಜೋರಾಂಗಳಲ್ಲಿ ಕೋವಿಡ್ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿವೆ. ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ತ್ವರಿತ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರವು ಆಯಾ ರಾಜ್ಯ ಸರ್ಕಾರಗಳಿಗೆ ಸೂಚಿಸಿ ಪತ್ರ ಬರೆದಿದೆ.
ಕೋವಿಡ್ ಹೆಚ್ಚಳದ ಬಗ್ಗೆ ನಿಗಾ ವಹಿಸಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿರುವ ಪ್ರದೇಶಗಳಲ್ಲಿ ನಿಯಂತ್ರಣಾ ಕ್ರಮ ಕೈಗೊಳ್ಳಬೇಕು ಎಂದೂ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ