Trending

Ind vs Eng : ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ

ವಿಶಾಖಪಟ್ಟಣ : Ind vs Eng ನಡುವಿನ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಪ್ರತಿಭಾನ್ವಿತ ಬ್ಯಾಟರ್ ಯಶಸ್ವಿ ಜೈಸ್ವಾಲ್ 151 ಎಸೆತಗಳನ್ನು ಎದುರಿಸಿ ಆಕರ್ಷಕ ಶತಕದೊಂದಿಗೆ ಟೀಂ ಇಂಡಿಯಾ, ಮೊದಲ ದಿನದಾಟದಲ್ಲೇ ಬೃಹತ್ ಮೊತ್ತದತ್ತ ತಲುಪಿದ.

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು.

ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ 17.3 ಓವರ್‌ಗಳಲ್ಲಿ 40 ರನ್‌ಗಳ ಜತೆಯಾಟವಾಡಿದರು.

41 ಎಸೆತಗಳನ್ನು ಎದುರಿಸಿ 14 ರನ್ ಗಳಿಸಿದ ನಾಯಕ ರೋಹಿತ್ ಶರ್ಮಾ , ಶೋಯೆಬ್ ಬಷೀರ್‌ ಬೌಲಿಂಗ್‌ನಲ್ಲಿ ಓಲಿ ಪೋಪ್‌ಗೆ ವಿಕೆಟ್ ಒಪ್ಪಿಸಿದರು.

ಯಶಸ್ವಿ ಜೈಸ್ವಾಲ್ ಆಕರ್ಷಕ ಶತಕ :

ಯಶಸ್ವಿ ಜೈಸ್ವಾಲ್ , ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಶುಭ್‌ಮನ್ ಗಿಲ್ ಜೊತೆಯಾಗಿ ಆಕರ್ಷಕ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು.

ಜೈಸ್ವಾಲ್ ಮೊದಲ ದಿನದಿಂದಲೇ ತಿರುವು ಪಡೆಯುವ ಮುನ್ಸೂಚನೆ ನೀಡುತ್ತಿರುವ ಪಿಚ್‌ನಲ್ಲಿ ತಮ್ಮ ಬ್ಯಾಟಿಂಗ್ ಪ್ರತಿಭೆ ಅನಾವರಣ ಮಾಡಿ , ಟೆಸ್ಟ್ ವೃತ್ತಿಜೀವನದ ಎರಡನೇ ಟೆಸ್ಟ್ ಶತಕ ಸಿಡಿಸಿ ಸಂಭ್ರಮಿಸಿದರು.

ಜೈಸ್ವಾಲ್ ಕೇವಲ 151 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 3 ಮುಗಿಲೆತ್ತರದ ಸಿಕ್ಸರ್ ನೆರವಿನಿಂದ ಮೂರಂಕಿ ಮೊತ್ತ ದಾಖಲಿಸಲು ಯಶಸ್ವಿಯಾದರು.ಬಿಎಂಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ – ಸ್ಥಳದಲ್ಲೇ ವಿದ್ಯಾರ್ಥಿನಿ ಸಾವು

ಟೀಂ ಇಂಡಿಯಾ 50 ಓವರ್ ಅಂತ್ಯದ ವೇಳೆಗೆ ಕೇವಲ 2 ವಿಕೆಟ್ ಕಳೆದುಕೊಂಡು 175 ರನ್ ಬಾರಿಸಿದ್ದು, ಜೈಸ್ವಾಲ್ 104 ಹಾಗೂ ಶ್ರೇಯಸ್ ಅಯ್ಯರ್ 23 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.

Team Newsnap
Leave a Comment

Recent Posts

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024