ಭಾರತ-ಚೀನಾ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಎರಡೂ ದೇಶಗಳ ಸೇನೆ ಎಲ್ಎಸಿಯಲ್ಲಿ ಸೈನ್ಯ ಜಮಾವಣೆಯಾಗುತ್ತಿದೆ. ಈಗ ಶಾಂತಿ ಮಾತುಕತೆಗಾಗಿ ಉಭಯ ದೇಶಗಳು ಮುಂದಾಗಿ, ಗೌಪ್ಯ ಚರ್ಚೆಯಲ್ಲಿ ತೊಡಗಿವೆ.
ಬ್ಲೂಮ್ ಬರ್ಗ್ ಇಂಡಿಯಾ ಎಕಾನಾಮಿಕ್ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ವಿದೇಶಾಂಗ ಸಚಿವ ಎಸ್. ಜೈಶಂಕರ್, ಪೂರ್ವ ಲಡಾಖ್ನಲ್ಲಿ ಉಭಯ ದೇಶಗಳ ಸೇನೆ ಜಮಾವಣೆಯಿಂದಾಗಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವುದನ್ನು ಒಪ್ಪಿಕೊಂಡರು. ಇದೇ ವೇಳೆ ಗೌಪ್ಯ ಚರ್ಚೆಯ ಬಗ್ಗೆ ಮಾತನಾಡಿದ ‘ಈಗಲೇ ಗೌಪ್ಯ ಚರ್ಚೆಯ ಮಾಹಿತಿಯನ್ನು ಬಿಟ್ಟುಕೊಡಲಾಗುವದಿಲ್ಲ. ಅಲ್ಲದೇ ಚರ್ಚೆಯ ಫಲಿತಾಂಶದ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ’ ಎಂದರು.
‘ನಮ್ಮ ಗಡಿಯಲ್ಲಿ ನಾವು, ಅವರ ಗಡಿಯಲ್ಲಿ ಅವರು ಸೇನೆಯನ್ನು ಜಮಾವಣೆ ಮಾಡಿದ್ದೇವಾದರೂ, ಎರಡೂ ದೇಶಗಳು ಸಮಾನ ಅಂತರವನ್ನು ಕಾಯ್ದುಕೊಂಡಿವೆ. 1993ರಲ್ಲಿ ಭಾರತ-ಚೀನಾ ಶಾಂತಿ ಒಪ್ಪಂದದ ನಂತರ ಎರಡೂ ದೇಶಗಳ ನಡುವೆ ಉತ್ತಮ ಬಾಂಧವ್ಯ ಏರ್ಪಟ್ಟಿತ್ತು. ಆದರೆ ಒಪ್ಪಂದದ ನಿಯಮಗಳನ್ನು ಮುರಿದಾಗ ಶಾಂತಿ-ಸೌಹಾರ್ದತೆಯಲ್ಲಿ ವಿರಸವುಂಟಾಗುತ್ತದೆ’ ಎಂದು ಅವರು ಪರೋಕ್ಷವಾಗಿ ಚೀನಾದ ನಡೆಯನ್ನು ವಿರೋಧಿಸಿದರು.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment