ಗಣರಾಜ್ಯಗಳ ಒಕ್ಕೂಟ ಈ ನಮ್ಮ ಭಾರತ…………….
ಸುರಿವ ಬೆವರು ಟವಲಿನಲ್ಲಿ ಒರೆಸಿಕೊಂಡು ಪಂಚೆ ಎತ್ತಿ ಕಟ್ಟಿ ಸೈಕಲ್ ತುಳಿಯುತ್ತಾ ಸಾಗುವ ತಮಿಳಿನವ…….
ದಟ್ಟ ಮೀಸೆಯ ದಪ್ಪ ಶರೀರದ ಗಡುಸು ಧ್ವನಿಯ ಕುಡುಗೋಲಿಡಿದು ಕುರುಚಲು ದಾರಿಯಲ್ಲಿ ನಡೆಯುತ್ತಿರುವ ತೆಲುಗಿನವ……..
ಬಿಳಿ ಸೀರೆಯುಟ್ಟು ಕಡುಕಪ್ಪು ತಲೆಗೂದಲ ರಾಶಿಯ, ಹಣೆಗೆ ಕುಂಕುಮ ತಲೆಗೆ ಹೂಮುಡಿದ ಮಾಲೆಯಾಳಿ ಕುಟ್ಟಿ…….
ತಲೆಗೆ ರುಮಾಲು ಸುತ್ತಿ ಜೋಳದ ರಾಶಿಯ ನಡುವೆ ಕುಕ್ಕರಗಾಲಿನಲ್ಲಿ ಕುಳಿತು ಕಳೆ ಕೀಳುತ್ತಿರುವ ಕನ್ನಡಿಗ,…………
ಸೇಬಿನಂತ ಕೆನ್ನೆಯ, ಹಿಮದ ರಾಶಿಯನ್ನೇ ಮೈಮೇಲೆ ಆವರಿಸಿಕೊಂಡಂತ್ತಿರುವ ತಣ್ಣನೆಯ ನಗುವಿನ ಕಾಶ್ಮೀರಿ ಸುಂದರಿ…….
ತಲೆಗೆ ಬಣ್ಣದ ಟೋಪಿ ಹಾಕಿ, ಕೈಯಲ್ಲಿ ಆಕಳು ಹಿಡಿದು ಸಂಜೆಗತ್ತಲಲ್ಲಿ ಬಿರಬಿರನೆ ಹೆಜ್ಜೆಯಾಕುತ್ತಾ ಸಾಗುವ ಗಂಡನ ಹಿಂದೆ, ರಂಗುರಂಗಾದ ಲಂಗ ದಾವಣಿ ಹಾಕಿ, ಕಿವಿ ಮೂಗುಗಳಿಗೆ ಮುತ್ತಿನ ಒಡವೆಗಳನ್ನು ತೊಟ್ಟು ತಲೆಯ ಮೇಲೆ ಸೌದೆ ಹೊತ್ತು ಸಾಗುವ ಈಶಾನ್ಯದ ಸಿಕ್ಕಿಂ ನಾಗಾಲ್ಯಾಂಡ್ ತ್ರಿಪುರ ಮಿಜೋರಾಂ ಅರುಣಾಚಲ ಮೇಘಾಲಯ ಮಣಿಪುರಿಗಳು……..
ಬೆನ್ನಿಗೆ ಮಗುವನ್ನು ಕಟ್ಟಿಕೊಂಡು, ಸೊಂಟಕ್ಕೆ ಚೀಲ ಸಿಕ್ಕಿಸಿಕೊಂಡು ಬೆಳಗಿನ ಚಳಿಯಲ್ಲಿ ಚಹಾ ತೋಟದ ಎಲೆ ಬಿಡಿಸುತ್ತಿರುವ ಅಸ್ಸಾಮಿಗಳು………
ಟ್ರ್ಯಾಕ್ ಸೂಟ್ ಹಾಕಿಕೊಂಡು ಮೈದಾನದಲ್ಲಿ ದೂರ ದೂರ ಓಡುವ, ಅಖಾಡದಲ್ಲಿ ಕಚ್ಚೆ ಕಟ್ಟಿಕೊಂಡು ಕುಸ್ತಿ ಅಭ್ಯಾಸ ಮಾಡುವ, ಹುರಿ ಮೀಸೆಯ ಹರಿಯಾಣಾದವರು……..
ರೋಟಿ ಸುಡುತ್ತಾ ಕೋಳಿ ಬೇಯಿಸುತ್ತಾ ದುಪ್ಪಟದಲ್ಲಿ ಮೂಗನ್ನು ಒರೆಸಿಕೊಳ್ಳುತ್ತಿರುವ ಹೆಂಡತಿಯನ್ನು ಮಾತನಾಡಿಸುತ್ತಾ ಮರಕ್ಕೆ ದಾರದಲ್ಲಿ ಕಟ್ಟಿರುವ ಜೋಕಾಲಿಯಲ್ಲಿ ಮಗುವನ್ನು ತೂಗುತ್ತಿರುವ ರಾಜಸ್ಥಾನಿ……..
ಸುತ್ತಲೂ ಹಾಕಿರುವ ಬೆಂಕಿಯ ಕೆಂಡದಲ್ಲಿ ಮೈ ಬಿಸಿ ಮಾಡಿಕೊಳ್ಳುತ್ತಾ ಬೀಡಿ ಸೇದುತ್ತಾ ಹಾದಿಯಲ್ಲಿ ಹೋಗುವವರಿಗೆಲ್ಲಾ ಜೈ ಶ್ರೀರಾಮ್ ಹೇಳುತ್ತಾ ತನ್ನ ಮಾರಾಟದ ಬೊಂಬೆಗಳನ್ನು ಗಾಡಿಗೆ ಕಟ್ಟುತ್ತಿರುವ ಉತ್ತರ ಪ್ರದೇಶದವ………
ವಿಧವಿಧವಾದ ಬಟ್ಟೆಗಳನ್ನು ಒಪ್ಪವಾಗಿ ಜೋಡಿಸಲು ಸಹಾಯಕಿಗೆ ಹೇಳುತ್ತಾ ಕ್ಯಾಷ್ ಕೌಂಟರಿನಲ್ಲಿ ಹಣದ ಪೆಟ್ಟಿಗೆಗೆ ಪೂಜೆ ಮಾಡುತ್ತಾ ಭಕ್ತಿಯಿಂದ ಕೈ ಮುಗಿಯುತ್ತಿರುವ ಗುಜರಾತಿನವ………
ಎತ್ತಿನ ಗಾಡಿಯಲ್ಲಿ ಕಬ್ಬಿನ ರಾಶಿಯನ್ನು ಕಟ್ಟಿ ಸುಡು ಬಿಸಿಲಿನಲ್ಲಿ ದನಗಳನ್ನು ಚಾವಟಿಯಿಂದ ಹೊಡೆಯುತ್ತಾ ಕಾರ್ಖಾನೆಗೆ ಹೋಗುತ್ತಿರುವ ಮರಾಠಿಯವ……
ಸಿಹಿ ತಿನಿಸುಗಳನ್ನು ಲಗುಬುಗೆಯಿಂದ ಬಂದ ಗಿರಾಕಿಗಳಿಗೆ ಕೊಡುತ್ತಾ ಇನ್ನೊಂದಿಷ್ಟು ಚಂಪಾಕಲಿ ರಸಗುಲ್ಲಾಗಳನ್ನು ತಯಾರಿ ಮಾಡುವಂತೆ ಜೋರಾಗಿ ಕೂಗುತ್ತಾ ಇರುವ ಬೆಂಗಾಲಿ ಬಾಬು…….
ಸೂಟು ಬೂಟು ತೊಟ್ಟು ವಿದೇಶಿ ಪ್ರವಾಸಿಗರಿಗೆ ಪ್ರಖ್ಯಾತ ಮತ್ತು ಐತಿಹಾಸಿಕ ಚರ್ಚುಗಳು ಬೀಚುಗಳು ಹೋಟೆಲುಗಳ ಬಗ್ಗೆ ಮಾಹಿತಿ ನೀಡುತ್ತಿರುವ ಗೋವಾದ ಪ್ರವಾಸಿ ಮಾರ್ಗದರ್ಶಕ………..
ಸೂರ್ಯಾಸ್ತದ ಸಮಯದಲ್ಲಿ ಮೀನು ಹಿಡಿಯುವ ದೋಣಿಯೊಂದಿಗೆ ದಡ ಸೇರಿ ಹೆಂಡತಿ ಮಕ್ಕಳೊಂದಿಗೆ ಅಂದು ಬಲೆಗೆ ಬಿದ್ದ ವಿವಿಧ ಜಾತಿಯ ಮೀನುಗಳನ್ನು ಆರಿಸಿ ಚೀಲಕ್ಕೆ ತುಂಬುತ್ತಿರುವ ಒರಿಸ್ಸಾದವ.
ಆಗ ತಾನೆ ಬೆಳಗಿನ ನಮಾಜು ಮುಗಿಸಿ ತನ್ನ ಸ್ವಂತದ ಟೆಂಪೋ ಟ್ರಾವಲರ್ ಗಾಡಿಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಒಪ್ಪಂದದ ಪ್ರಕಾರ ಆಗ್ರಾದ ತಾಜ್ ಮಹಲ್ ತೋರಿಸಲು ಗಡಿಬಿಡಿಯಿಂದ ಗಾಡಿ ಒರೆಸುತ್ತಿರುವ ದೆಹಲಿಯವ.
ತಮ್ಮ ಜನರ ಮೇಲೆ ಆಗಿಂದಾಗ್ಗೆ ನಡೆಯುತ್ತಿರುವ ದೌರ್ಜನ್ಯಕ್ಕಾಗಿ ದುಷ್ಟ ಭೂ ಮಾಲೀಕರ ಮೇಲೆ ಹಲ್ಲೆ ಮಾಡಲು ಒಂದಷ್ಟು ಯುವಕರಿಗೆ ಪ್ರಚೋದನೆ ಕೊಡುತ್ತಿರುವ ಛತ್ತೀ ಸ್ ಗಡ್ ದವ
ಕೃಪಾಣ ಧರಿಸಿ ಕೈಯಲ್ಲಿ ಖಡ್ಗ ಹಿಡಿದು ಭಾಂಗ್ರಾ ನೃತ್ಯ ಮಾಡುತ್ತಾ ಅಮೃತಸರದ ಸ್ವರ್ಣ ದೇಗುಲದ ಮುಂದೆ ಜನರನ್ನು ರಂಜಿಸುತ್ತಿರುವ ಪಂಜಾಬಿ..
ಹೊಸ ಮಾದರಿಯ ಬಂದೂಕುಗಳನ್ನು ಪರಿಶೀಲಿಸುತ್ತಾ ಅದನ್ನು ಕೊಳ್ಳಲು ಬರುವ ಗಿರಾಕಿಗಳ ಏಜೆಂಟ್ ಗಳಿಗೆ ಮೊಬೈಲ್ ನಲ್ಲಿ ಅದರ ಮಾಹಿತಿ ಕೊಡುತ್ತಾ ಖುಷಿಯಿಂದಿರುವ ಜಾರ್ಖಂಡ್ ನವ.
ಕಾಡಿನ ಗಾಂಭೀರ್ಯ ಸಮುದ್ರದ ರೌದ್ರೌವತೆಯ ಮಡಿಲಲ್ಲಿ ತನ್ನದೇ ಬದುಕು ಸಾಗಿಸುತ್ತಿರುವ ಅಂಡಮಾನ್ ನಿಕೋಬಾರ್ ದ್ವೀಪಗಳವರು.
ಅರವಿಂದ ಆಶ್ರಮದ ನೀರವ ಮೌನದಲ್ಲಿ ಆಧ್ಯಾತ್ಮಿಕ ಪುಸ್ತಕಗಳನ್ನು ಓದುತ್ತಾ ವಿಶ್ರಾಂತ ಜೀವನ ನಡೆಸುತ್ತಿರುವ ಪುದುಚೇರಿಯವ..
ರಾಜಕೀಯದ ತವಕ ತಲ್ಲಣ ವಂಚನೆಗಳನ್ನು ಮೆಲುಕು ಹಾಕುತ್ತಾ ತನ್ನ ಭವಿಷ್ಯದ ಬಗ್ಗೆ ಚಿಂತಾಕ್ರಾಂತನಾಗಿ ಕೆಲಸ ಹುಡುಕುತ್ತಾ ಬೇರೆ ರಾಜ್ಯಕ್ಕೆ ವಲಸೆ ಹೋಗಲು ರೈಲು ಗಾಡಿ ಹತ್ತುತ್ತಿರುವ ಬಿಹಾರಿ.
ಸೌಂದರ್ಯವೇ ಮೈವೆತ್ತಂತ ಗಿರಿ ಶಿಖರಗಳ – ಯಾತ್ರಾ ಸ್ಥಳಗಳ ನೆಲದಲ್ಲಿ ವಾತಾವರಣದ ಏರಿಳಿತಗಳ ನಡುವೆ ನೆಮ್ಮದಿಯಿ ಬದುಕಿಗೆ ತಡಕಾಡುತ್ತಿರುವ ಉತ್ತರ ಕಾಂಡದವ..
ಎಷ್ಟೊಂದು ವಿಸ್ಮಯಗಳ ಅದ್ಭುತ ಅವರ್ಣನೀಯ ವೈವಿಧ್ಯಮಯ ದೇಶ ನಮ್ಮ ಈ ಭಾರತ.
ಕೇವಲ ಚುನಾವಣಾ ರಾಜಕೀಯದ ಅಧಿಕಾರಕ್ಕಾಗಿ ಇದನ್ನು ಹಾಳು ಮಾಡದೆ ದೇಶದ ಘನತೆಯನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರದು.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment