ಮೆಲ್ಬರ್ನ್ ನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ದ್ವಿತೀಯ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ 103.1 ಓವರ್ಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು 200 ರನ್ ಗಳಿಸಿತು.
ಭಾರತ ಗೆಲ್ಲಲು ಕೇವಲ 70 ರನ್ ಬೇಕಾಗಿತ್ತು. ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ 2 ವಿಕೆಟ್ ನಷ್ಟಕ್ಕೆ 70 ರನ್ ಗಳಿಸಿ 8 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ.
ನಾಲ್ಕು ಪಂದ್ಯಗಳ ಈ ಟೆಸ್ಟ್ ಸರಣಿಯಲ್ಲಿ 1-1ರಿಂದ ಸಮಬಲಗೊಂಡಿದೆ.
ದ್ವಿತೀಯ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ, ಮ್ಯಾಥ್ಯೂ ವೇಡ್ 40, ಮಾರ್ನಸ್ ಲ್ಯಬುಶೇನ್ 28, ಸ್ಟೀವ್ ಸ್ಮಿತ್ 8, ಟ್ರಾವಿಸ್ ಹೆಡ್ 17, ಕ್ಯಮರಾನ್ ಗ್ರೀನ್ 45, ಪ್ಯಾಟ್ ಮಮಿನ್ಸ್ 22, ಮಿಚೆಲ್ ಸ್ಟಾರ್ಕ್ 14, ಜೋಶ್ ಹ್ಯಾಝಲ್ವುಡ್ 10 ರನ್ನೊಂದಿಗೆ 103.1 ಓವರ್ಗೆ ಎಲ್ಲಾ ವಿಕೆಟ್ ಕಳೆದುಕೊಂಡು 200 ರನ್ ಬಾರಿಸಿತ್ತು.
ದ್ವಿತೀಯ ಇನ್ನಿಂಗ್ಸ್ನಲ್ಲಿ ಭಾರತದ ಪರ ಮಯಾಂಕ್ ಅಗರ್ವಾಲ್ 5, ಶುಬ್ಮನ್ ಗಿಲ್ ಅಜೇಯ 35, ಚೇತೇಶ್ವರ್ ಪೂಜಾರ 3, ನಾಯಕ ಅಜಿಂಕ್ಯ ರಹಾನೆ ಅಜೇಯ 27 ರನ್ ಬಾರಿಸಿದರು. ಭಾರತ 15.5 ಓವರ್ಗೆ 2 ವಿಕೆಟ್ ನಷ್ಟಕ್ಕೆ 70 ರನ್ ಬಾರಿಸಿ ಸುಲಭದ ಗೆಲುವು ದಾಖಲಿಸಿತು. ಭಾರತದ ಪರ ಜಸ್ಪ್ರೀತ್ ಬೂಮ್ರಾ 4+2, ರವೀಂದ್ರ ಜಡೇಜಾ 2+1, ಆರ್ ಅಶ್ವಿನ್ 3+2, ಮೊಹಮ್ಮದ್ ಸಿರಾಜ್ 3+2 ವಿಕೆಟ್ ಪಡೆದರೆ, ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ 3+1, ಪ್ಯಾಟ್ ಕಮಿನ್ಸ್ 2+1, ಜೋಶ್ ಹ್ಯಾಝಲ್ವುಡ್ 1, ನೇಥನ್ ಲಿಯಾನ್ 3 ವಿಕೆಟ್ನೊಂದಿಗೆ ಗಮನ ಸೆಳೆದರು.
ಪಂದ್ಯ ಶ್ರೇಷ್ಠ ಪ್ರಶಸ್ತಿ- ಅಜಿಂಕ್ಯ ರಹಾನೆ
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment