ಪ್ಯಾಲೆಸ್ತೀನ್‌ ಕಚೇರಿ ಒಳಗಡೆಯೇ ಭಾರತೀಯ ರಾಯಭಾರಿ ನಿಗೂಢ ಸಾವು

Team Newsnap
1 Min Read

ಪ್ಯಾಲೆಸ್ತೀನ್‌ನಲ್ಲಿದ್ದ ಭಾರತೀಯ ರಾಯಭಾರಿ ಮುಕುಲ್ ಆರ್ಯ ಅವರು ರಾಮಲ್ಲಾದಲ್ಲಿರುವ ರಾಯಭಾರ ಕಚೇರಿಯಲ್ಲಿ ಭಾನುವಾರ ನಿಗೂಢವಾಗಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

ಆರ್ಯ ರಾಯಭಾರ ಕಚೇರಿಯೊಳಗೆ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ.

ಅವರ ಸಾವಿನ ಬಗ್ಗೆ ಪ್ಯಾಲೇಸ್ಟಿನಿಯನ್ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ ಪ್ಯಾಲೆಸ್ಟೈನ್‌ ಮಾಧ್ಯಮಗಳು ವರದಿ ಮಾಡಿವೆ.

ಆರ್ಯ ನಿಧನಕ್ಕೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮೂಲಕ ಆಘಾತ ವ್ಯಕ್ತಪಡಿಸಿದ್ದಾರೆ. “ರಾಮಲ್ಲಾದಲ್ಲಿ ಭಾರತದ ಪ್ರತಿನಿಧಿಯಾದ ಮುಕುಲ್ ಆರ್ಯ ನಿಧನದ ಬಗ್ಗೆ ತಿಳಿದು ತೀವ್ರ ಆಘಾತವಾಗಿದೆ. ಅವರು ಪ್ರತಿಭಾವಂತ ಅಧಿಕಾರಿಯಾಗಿದ್ದರು” ಎಂದು ಹೇಳಿದ್ದಾರೆ

2008ನೇ ಬ್ಯಾಚಿನ ಐಎಫ್‌ಎಸ್‌ ಅಧಿಕಾರಿಯಾಗಿದ್ದ ಆರ್ಯ ವಿದೇಶಾಂಗ ವ್ಯವಹಾರ ಸಚಿವಾಲಯದ ಅಧಿಕಾರಿಯಾಗಿ, ಯುನೆಸ್ಕೋ ಭಾರತ ನಿಯೋಗದ ಕಾಯಂ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

Share This Article
Leave a comment