Main News

ಗಡಿಯಲ್ಲಿ ಉಕ್ರೇನ್ ಸೈನಿಕರಿಂದ ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಉಕ್ರೇನ್​​​ನಲ್ಲಿ ರಷ್ಯಾ ಪಡೆಗಳು ಉಕ್ರೇನ್​​​ನ ಒಂದೊಂದೇ ನಗರಗಳನ್ನು ವಶಕ್ಕೆ ಪಡೆದುಕೊಳ್ತಿವೆ. ಭೀಕರ ಯುದ್ಧದಿಂದ ಉಕ್ರೇನ್​​​​ನಲ್ಲಿ ಸಿಲುಕಿಹಾಕಿಕೊಂಡಿರುವ ಭಾರತೀಯರ ಏರ್​​ಲಿಫ್ಟ್​​ಗೆ ಭಾರತ ಹರಸಾಹಸಪಡ್ತಿದೆ. ಇಷ್ಟೆಲ್ಲಾ ಆದ್ರೂ ಉಕ್ರೇನ್‌ನಲ್ಲಿರುವ ಭಾರತೀಯರು ನಿತ್ಯ ನರಕ ಅನುಭವಿಸ್ತಿದ್ದಾರೆ.

ಪೋಲೆಂಡ್​ ಗಡಿಯಲ್ಲಿ ಉಕ್ರೇನ್ ಸೈನಿಕರು ಭಾರತೀಯರ ಮೇಲೆ ಹಲ್ಲೆ ಮಾಡಲು ಮುಂದಾಗಿವೆ

ಉಕ್ರೇನ್ ನಿಂದ ಭಾರತೀಯರನ್ನು ಕರೆತರಲು ಪೋಲೆಂಡ್, ರೊಮೇನಿಯಾ ಮಾರ್ಗವಾಗಿ ವಿದ್ಯಾರ್ಥಿಗಳನ್ನು ಏರ್‌ಲಿಫ್ಟ್ ಮಾಡಲಾಗುತ್ತಿದೆ. ಇನ್ನು ಪೋಲೆಡ್ ದೇಶ ಕೂಡಾ ಯಾವುದೇ ವೀಸಾ ಕೇಳದೇ ಭಾರತೀಯರನ್ನು ಏರ್‌ಲಿಫ್ಟ್ ಮಾಡಲು ಮುಂದಾಗಿದೆ.

ಉಕ್ರೇನ್‌ ತೊರೆಯಲು ಸಾವಿರಾರು ಜನ ಹವಣಿಸುತ್ತಿರೋದು ಭಾರತೀಯ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಅದೇನಂದ್ರೆ ಉಕ್ರೇನ್‌ನಿಂದ ಪೋಲೆಂಡ್‌ಗೆ ತೆರಳುತ್ತಿದ್ದ ಭಾರತೀಯ ವಿದ್ಯಾರ್ಥಿಗಳನ್ನು ಗಡಿಯಲ್ಲೇ ತಡೆಯಲಾಗಿದೆ.

ರೊಮೇನಿಯಾ ಗಡಿಯಲ್ಲಿ ಭಾರತೀಯರ ಪರದಾಟ
ಉಕ್ರೇನ್-ರೊಮೇನಿಯಾ ಗಡಿಯಲ್ಲಿ ಭಾರತೀಯರು ತಿನ್ನಲು ಆಹಾರ, ಕುಡಿಯಲು ನೀರಿಲ್ಲದೇ ಪರದಾಡುತ್ತಿದ್ದಾರೆ.

ಕಳೆದ ಮೂರು ದಿನಗಳಿಂದ -5 ಡಿಗ್ರಿ ಚಳಿಯಲ್ಲಿ ಗಡಿಯಲ್ಲೇ ಕಾಲ ಕಳೆಯುತ್ತಿದ್ದಾರೆ. ಇತ್ತ ಉಕ್ರೇನ್‌ನಲ್ಲಿ ಇರೋಕು ಆಗದೇ, ಅತ್ತ ರೊಮೇನಿಯಾವನ್ನು ಪ್ರವೇಶಿಸಲು ಆಗದೇ ಕಂಗಾಲಾಗಿ ಹೋಗಿದ್ದಾರೆ.
ಬಂಕರ್‌ಗಳಲ್ಲಿ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರು ಕಾರ್ಖೀವ್ ನಗರದ ಮೆಟ್ರೋ ನಿಲ್ದಾಣದ ಬಂಕರ್‌ಗಳಲ್ಲಿ ಆಶ್ರಯ ಪಡೆದಿರುವ ಕರ್ನಾಟಕದ 250ಕ್ಕೂ ‌ಅಧಿಕ ವಿದ್ಯಾರ್ಥಿಗಳು ನರಕಯಾತನೆ ಅನುಭವಿಸ್ತಿದ್ದಾರೆ. ಕಳೆದ ಮೂರು ದಿನಗಳಿಂದ‌ ಆಹಾರ, ಕುಡಿಯುವ ನೀರು ಶುದ್ಧ ಗಾಳಿ ದೊರೆಯದೇ ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ವಿದ್ಯಾರ್ಥಿನಿಯರಿಗೆ ತೀವ್ರ ಆರೋಗ್ಯ ಸಮಸ್ಯೆಗಳು ಎದುರಿಸುತ್ತಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ

ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More

April 27, 2024

14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ

ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More

April 27, 2024