ಅಂತಾರಾಷ್ಟ್ರೀಯ

ಭಾರತೀಯ ವೈಭವ್ ತನೇಜಾ ಟೆಸ್ಲಾ CFO – ಬೆಂಗಳೂರಿನ ನಂಟು

ನ್ಯೂಯಾರ್ಕ್‌: ಭಾರತೀಯ ವೈಭವ್ ತನೇಜಾ ಅವರನ್ನು ಟೆಸ್ಲಾ ಕಂಪನಿಯ ಮುಖ್ಯ ಹಣಕಾಸು ಅಧಿಕಾರಿಯಾಗಿ ಎಲಾನ್‌ ಮಸ್ಕ್‌ ಒಡೆತನದ ಎಲೆಕ್ಟ್ರಿಕ್‌ ಕಾರು ಕಂಪನಿ ನೇಮಕ ಮಾಡಿದೆ.

ಕಳೆದ ನಾಲ್ಕು ವರ್ಷಗಳಿಂದ ಟೆಸ್ಲಾದ ಮಾಸ್ಟರ್ ಆಫ್ ಕಾಯಿನ್ ಮತ್ತು ಹಣಕಾಸು ಮುಖ್ಯಸ್ಥ ಕಿರ್‌ಹಾರ್ನ್ನಂತರ ವೈಭವ್ ತನೇಜಾ (45)ಅವರನ್ನು ನೇಮಿಸಲಾಗಿದೆ.

ಚಾರ್ಟರ್ಡ್ ಅಕೌಂಟೆಂಟ್ ತನೇಜಾ ಅವರು ಮಾರ್ಚ್ 2019 ರಿಂದ ಟೆಸ್ಲಾದಲ್ಲಿ ಮುಖ್ಯ ಲೆಕ್ಕಪತ್ರ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಫೆಬ್ರವರಿ 2017 ಮತ್ತು ಮೇ 2018 ರ ನಡುವೆ ಸಹಾಯಕ ಕಾರ್ಪೊರೇಟ್ ನಿಯಂತ್ರಕರಾಗಿ ಸೇವೆ ಸಲ್ಲಿಸಿದರು.

ಟೆಸ್ಲಾ ಸೇರಿದ್ದು ಹೇಗೆ?

ಅಮೆರಿಕದ ಸೌರ ಫಲಕ ಅಭಿವೃದ್ಧಿ ಪಡಿಸುವ ಸೋಲಾರ್‌ ಸಿಟಿ ಕಂಪನಿಯ ಹಣಕಾಸು ವಿಭಾಗದಲ್ಲಿ ವೈಭವ್ ತನೇಜಾ ಕೆಲಸ ಮಾಡುತ್ತಿದ್ದರು.

ಟೆಸ್ಲಾ 2016 ರಲ್ಲಿ ಈ ಸೋಲಾರ್‌ ಸಿಟಿ ಕಂಪನಿಯನ್ನು ಖರೀದಿಸಿತ್ತು. ಇದಕ್ಕೂ ಮೊದಲು ತನೇಜಾ ಅವರು ಜುಲೈ 1999 ಮತ್ತು ಮಾರ್ಚ್ 2016 ರ ನಡುವೆ ಪ್ರೈಸ್‌ವಾಟರ್‌ ಹೌಸ್‌ಕೂಪರ್ಸ್‌ನಲ್ಲಿ ಉದ್ಯೋಗಿಯಾಗಿದ್ದರು.

ಬೆಂಗಳೂರಿನ ನಂಟು :

ಭಾರತದಲ್ಲಿ ಕಂಪನಿ ಸ್ಥಾಪನೆ ಸಂಬಂಧ ಟೆಸ್ಲಾ ಕೇಂದ್ರ ಸರ್ಕಾರದ ಜೊತೆ ಕೆಲ ವರ್ಷಗಳಿಂದ ಮಾತುಕತೆ ನಡೆಸುತ್ತಿದೆ. ಇದಕ್ಕೆ ಪೂರಕ ಎಂಬಂತೆ 2021 ಜನವರಿಯಲ್ಲಿ ಟೆಸ್ಲಾ ಭಾರತದಲ್ಲಿ ಕಚೇರಿ ತೆರೆಯುವ ಸಂಬಂಧ ನೋಂದಣಿ ಮಾಡಿತ್ತು. ಟೆಸ್ಲಾ ಇಂಡಿಯಾ ಮೋಟಾರ್ಸ್‌ ಆಂಡ್‌ ಎನರ್ಜಿ ಪ್ರೈವೇಟ್‌ ಲಿಮಿಟೆಡ್‌ ಹೆಸರಿನಲ್ಲಿ ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿ ಕಂಪನಿಯನ್ನು ನೋಂದಣಿ ಮಾಡುವ ಜೊತೆಗೆ ಮೂರು ನಿರ್ದೇಶಕರನ್ನೂ ನೇಮಿಸಿತ್ತು. ಮೂರು ನಿರ್ದೇಶಕರ ಪೈಕಿ ವೈಭವ್ ತನೇಜಾ ಅವರ ಹೆಸರು ಇತ್ತು.ಹೃದಯಾಘಾತ -ಮುನ್ನೆಚ್ಚರಿಕಾ ಕ್ರಮ ಕಡ್ಡಾಯ : ಡಾ.ಸಿ.ಎನ್‌.ಮಂಜುನಾಥ್‌

ವೈಭವ್ ತನೇಜಾ ಜೊತೆ ವೆಂಕಟರಂಗಮ್‌ ಶ್ರೀರಾಮ್‌ ಮತ್ತು ಜಾನ್‌ ಫೆನ್‌ಸ್ಟಿನ್‌ ಅವರನ್ನು ಟೆಸ್ಲಾ ನಿರ್ದೇಶಕರನ್ನಾಗಿ ನೇಮಿಸಿತ್ತು.

Team Newsnap
Leave a Comment

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024