ಭಾರತೀಯ ಜನಸಾಮಾನ್ಯರ ಆಂತರ್ಯದಲ್ಲಿ ಅತಿಹೆಚ್ಚು ಅಡಕವಾಗಿರುವ ಮತ್ತು ಪರೋಕ್ಷವಾಗಿ ಪ್ರಕಟವಾಗುವ ಭಾವ ಯಾವುದು ?……….
ಪ್ರೀತಿ…….. ಉತ್ತಮ,
ದ್ವೇಷ…….. ಮಧ್ಯಮ,
ಕೋಪ…….. ಸ್ವಲ್ಪ ಹೆಚ್ಚು,
ಕಾಮ……ಸಮಾಧಾನಕರ,
ಕರುಣೆ…… ಪರವಾಗಿಲ್ಲ,
ತ್ಯಾಗ…….ಸುಮಾರಾಗಿದೆ,
ಧೈರ್ಯ……. ಕಡಿಮೆ,
ಅಹಂಕಾರ…. ಒಂದಷ್ಟುಇದೆ,
ತಾಳ್ಮೆ…… ಸ್ವಲ್ಪ ಕಡಿಮೆ,
ಸಹಕಾರ…. ಓ ಕೆ,
ಭಕ್ತಿ……..ಹೆಚ್ಚು,
ನಂಬಿಕೆ…. ಅಪಾರ,
ಹಾಸ್ಯ….. ಉತ್ತಮ,
ಆದರೆ,
ಇದನ್ನೆಲ್ಲಾ ಮೀರಿದ ಅತಿಹೆಚ್ಚು ಭಾವ ,
ನನಗೆ ತಿಳಿದಂತೆ
” ಅಸೂಯೆ “
ಬಹುಶಃ ನಮ್ಮ ರಕ್ತದಲ್ಲಿಯೇ ಅಡಕವಾಗಿರಬೇಕು ಎನಿಸುತ್ತದೆ.
ಮೇಲ್ನೋಟಕ್ಕೆ ಮತ್ತು ನೇರವಾಗಿ ಅದು ಗೋಚರಿಸದಿದ್ದರು ಪರೋಕ್ಷವಾಗಿ ಅದು ತುಂಬಿ ತುಳುಕುತ್ತಿರುತ್ತದೆ.
ಕೆಲವರಿಗೆ ಮುಖದ ಮೇಲೆಯೇ ಕಾಣಿಸಿದರೆ, ಮತ್ತೆ ಕೆಲವರ ನಗುವಿನಲ್ಲಿ ಕಾಣುತ್ತದೆ. ಮತ್ತೆ ಕೆಲವರಲ್ಲಿ ಅವರ ದೇಹ ಭಾಷೆಯಿಂದ, ಅವರ ನಡವಳಿಕೆಯಿಂದ, ಅಪರೂಪವಾಗಿ ಅವರ ಮಾತು ಮತ್ತು ಮೌನದಿಂದ, ಆಗಾಗ ಅವರ ಕಣ್ಣೋಟದಿಂದ, ಇದು ವ್ಯಕ್ತವಾಗುತ್ತದೆ.
ಅಸೂಯೆ ಅಥವಾ ಮಾತ್ಸರ್ಯ ನಮ್ಮ ಸುತ್ತಮುತ್ತಲಿನ ಮತ್ತು ಮುಖ್ಯವಾಗಿ ಹತ್ತಿರದ ವಿವಿಧ ಸಂಬಂಧಗಳ ನಡುವೆಯೇ ಹೆಚ್ಚು ಉಂಟಾಗುತ್ತದೆ. ಹೇಳಲೂ ಆಗದ ಅನುಭವಿಸಲೂ ಆಗದ ಈ ಮಾನಸಿಕತೆಯನ್ನು ಆಡು ಭಾಷೆಯಲ್ಲಿ ಹೊಟ್ಟೆ ಉರಿ ಎಂದು ಕರೆಯಲಾಗುತ್ತದೆ.
ಅಸೂಯೆಯಿಂದಾಗಿಯೇ ಭಾರತೀಯರ ಸಾಮಾಜಿಕ ಆರ್ಥಿಕ ಮತ್ತು ರಾಜಕೀಯ ವ್ಯವಸ್ಥೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಸಾಧ್ಯವಾಗುತ್ತಿಲ್ಲ. ಒಬ್ಬರಿಗೊಬ್ಬರು ಕಾಲು ಎಳೆದುಕೊಂಡು ಇನ್ನೂ ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗದೆ ಅನೇಕ ಪ್ರತಿಭೆಗಳು ನಾಶವಾಗುತ್ತಿವೆ.
ನನ್ನನ್ನೂ ಸೇರಿ ಈ ಅಸೂಯೆ ಎಂಬ ಸ್ಥಿತಿಯನ್ನು ಮೀರುವ ಆತ್ಮಸಾಕ್ಷಿಯ ಪ್ರಯತ್ನದ ಅವಶ್ಯಕತೆ ಇದೆ. ನಮ್ಮ ವೈಯಕ್ತಿಕ ಮತ್ತು ಸಮಾಜದ ಆರೋಗ್ಯದ ದೃಷ್ಟಿಯಿಂದ ಅಸೂಯೆ ಎಂಬ ಭಾವ ಕಡಿಮೆಯಾದಲ್ಲಿ ನಿಜಕ್ಕೂ ನಮ್ಮ ಪ್ರಬುದ್ದತೆಯ ಮಟ್ಟ ಸಹಜವಾಗಿಯೇ ಹೆಚ್ಚುತ್ತದೆ.
ಈ ಕ್ಷಣದಿಂದಲೇ ಆ ಪ್ರಯತ್ನ ಪ್ರಾರಂಭವಾಗಲಿ ಎಂದು ಆಶಿಸುತ್ತಾ…….
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
This website uses cookies.
Leave a Comment