Main News

ತನ್ನನ್ನು ತಾನೇ ಮದುವೆಯಾಗುವ ಯುವತಿ ಗೋವಾದಲ್ಲಿ ಹನಿಮೂನ್ ಅಂತೆ!

24 ವರ್ಷದ ಯುವತಿ ಇದೇ ಮೊದಲ ಬಾರಿಗೆ ತನ್ನನ್ನು ತಾನೇ ಜೂನ್ 11 ರಂದು ಮದುವೆ ಯಾಗುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾಳೆ.

ಹೌದು, ಗುಜರಾತ್‍ನ ವಡೋದರದ ಖಾಸಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಷಮಾ, ತನ್ನನ್ನು ತಾನೇ ವಿವಾಹವಾಗುತ್ತಿದ್ದಾಳೆ. ಅಲ್ಲದೇ ಮದುವೆಯ ಎಲ್ಲ ವಿಧಿ-ವಿಧಾನಗಳ ನಂತರ ಗೋವಾಗೆ ಹನಿಮೂನ್‍ಗೆ ಹಾರಲಿದ್ದಾಳೆ.

ಇದನ್ನು ಓದಿ – ಮಂಡ್ಯದ ಕೆಂಪೇಗೌಡ ಬಡಾವಣೆಯಲ್ಲಿ ದುರಂತ : 1 ವರ್ಷದ ಮಗು ಕಣ್ಣೆದುರೆ ನೇಣಿಗೆ ಶರಣಾದ ತಾಯಿ

ಈ ಕುರಿತಂತೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಕ್ಷಮಾ, ಇದು ಭಾರತದ ಮೊದಲ ಏಕವ್ಯಕ್ತಿ ವಿವಾಹವಾಗಲಿದೆ. ಭಾರತದಲ್ಲಿ ಇಲ್ಲಿಯವರೆಗೂ ಈ ರೀತಿ ಯಾರಾದರೂ ಮದುವೆಯಾಗಿದ್ದಾರಾ ಎಂದು ಪರಿಶೀಲಿಸಿದೆ. ಬಹುಶಃ ಈ ರೀತಿ ಮದುವೆಯಾಗುತ್ತಿರುವ ಮೊದಲ ವ್ಯಕ್ತಿ ನಾನಾಗೀರಬಹುದು. ನಾನು ಎಂದಿಗೂ ಮದುವೆಯಾಗುವುದಕ್ಕೆ ಬಯಸಿಲ್ಲ. ಆದರ ವಧು ಆಗಬೇಕೆಂಬ ಆಸೆ ಇತ್ತು. ಹೀಗಾಗಿ ನನ್ನನ್ನು ನಾನೇ ಮದುವೆಯಾಗಲು ನಿರ್ಧರಿಸಿದೆ ಎಂದು ಹೇಳಿದ್ದಾಳೆ.

ಸ್ವಯಂ-ವಿವಾಹವು ನಿಮಗೆ ನೀವೇ ಮಾಡಿಕೊಳ್ಳುವ ಕಮಿಟ್‍ಮೆಂಟ್ ಆಗಿದೆ ಮತ್ತು ನಿಮಗೆ ನೀವೇ ನೀಡುವ ಅಪಾರವಾದ ಪ್ರೀತಿಯುಳ್ಳದಾಗಿದೆ. ಇದು ಸ್ವಯಂ ಸ್ವೀಕಾರ ಕ್ರಿಯೆಯೂ ಆಗಿದೆ. ಜನರು ಪ್ರೀತಿ ಮಾಡುವವರನ್ನು ಮದುವೆಯಾಗುತ್ತಾರೆ. ನಾನು ನನ್ನನ್ನು ಪ್ರೀತಿಸುತ್ತೇನೆ. ಆದ್ದರಿಂದ ಈ ಮದುವೆಯಾಗುತ್ತಿದ್ದೇನೆ ಎಂದು ತಿಳಿಸಿದ್ದಾಳೆ. ಇದನ್ನು ಓದಿ – CET, NEET, JEE, ಪರೀಕ್ಷೆ ಬರೆಯುವ ಬಡ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ – ಸಿಎಂ ಬೊಮ್ಮಾಯಿ

kshama bindu

ಗೋವಾದಲ್ಲಿ 2 ವಾರ ಹನಿ ಮೂನ್

ಈ ಮದುವೆಗೆ ತನ್ನ ಪೋಷಕರು ಒಪ್ಪಿಗೆ ಸೂಚಿಸಿ, ಮದುವೆ ಸಿದ್ಧತೆ ನಡೆಸುವಂತೆ ಆಶೀರ್ವಾದ ಮಾಡಿದ್ದಾರೆ. ಗೋತ್ರಿಯ ದೇವಸ್ಥಾನದಲ್ಲಿ ನಡೆಯಲಿರುವ ವಿವಾಹಕ್ಕೆ ಕ್ಷಮಾ ಐದು ವ್ರತಗಳನ್ನು ಮದುವೆಯಾದ ಬಳಿಕ ಎರಡು ವಾರಗಳ ಕಾಲ ಹನಿಮೂನ್‍ಗೆ ಗೋವಾಕ್ಕೆ ಹೋಗಲಿದ್ದಾಳೆ.

ಕಲ್ಪನೆ ಎಲ್ಲಿಂದ ಹುಟ್ಟುತು

ಪ್ರತಿಯೊಬ್ಬ ಮಹಿಳೆ ವಧುವಾಗಲು ಬಯಸುತ್ತಾಳೆ ಆದರೆ ಹೆಂಡತಿಯಾಗಬಾರದು ಎಂದು ವೆಬ್ ಸರಣಿಯಲ್ಲಿ ನಟಿಯೊಬ್ಬರು ಹೇಳುವುದನ್ನು ಕೇಳಿದ್ದೇನೆ ಎಂದು ಕ್ಷಮಾ ಹೇಳುತ್ತಾರೆ. “ಮತ್ತು, ಅದರ ನಂತರ, ನನ್ನನ್ನೇ ಮದುವೆಯಾಗುವ ನನ್ನ ಆಲೋಚನೆಗಳು ಮತ್ತೆ ಹೊತ್ತಿಕೊಂಡವು,” ಕ್ಷಮಾ ಅವರು ಎಂಎಸ್ ವಿಶ್ವವಿದ್ಯಾಲಯದಿಂದ ಸಮಾಜಶಾಸ್ತ್ರದಲ್ಲಿ ಪದವಿ ಪಡೆದರು ಮತ್ತು ಈಗ ಖಾಸಗಿ ಹೊರಗುತ್ತಿಗೆ ಮಾನವ ಸಂಪನ್ಮೂಲದಲ್ಲಿ ಕೆಲಸ ಮಾಡುತ್ತಿದ್ದಾರೆ

Team Newsnap
Leave a Comment

Recent Posts

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024