Main News

ಚಂದ್ರನ ಅಂಗಳಕ್ಕೆ ಇಳಿದ ಭಾರತದ ವಿಕ್ರಮ್ ಲ್ಯಾಂಡರ್ – ಭಾರತಕ್ಕೆ ಸಂಭ್ರಮದ ದಿನ

ಬೆಂಗಳೂರು : ಕೊನೆಗೂ ಚಂದ್ರಲೋಕಕ್ಕೆ ಭಾರತ ಹೆಜ್ಜೆ ಇಟ್ಟಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಹೆಜ್ಜೆ ಇಟ್ಟ ಪ್ರಜ್ಞಾನ್​​ ರೋವರ್ ಬರೋಬ್ಬರಿ 40 ದಿನದ ಸುದೀರ್ಘ ಪಯಣದ ಬಳಿಕ ಸುರೀಕ್ಷಿತವಾಗಿ ಲ್ಯಾಂಡ್ ಆಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸಾಕ್ಷಿಯಾಗಿದ್ದರು ಬಹುನಿರೀಕ್ಷಿತ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಇಳಿದಿದೆ.

ಪ್ರಜ್ಞಾನ್​​ ರೋವರ್ ಹೊತ್ತ ಈ ವಿಕ್ರಮ್ ಲ್ಯಾಂಡರ್ ಬರೋಬ್ಬರಿ 40 ದಿನಗಳ ಸುದೀರ್ಘ ಪಯಣದ ನಂತರ ದಕ್ಷಿಣ ಧ್ರುವದ ಮೇಲೆ ಯಾವುದೇ ಅಡೆತಡೆ ಇಲ್ಲದೆ ನಿಧಾನವಾಗಿ ಲ್ಯಾಂಡ್​​ ಆಗುವ ಮೂಲಕ ಇತಿಹಾಸ ನಿರ್ಮಿಸಿದೆ. ಗಗನಯಾತ್ರಿಯಾಗುವುದು ಹೇಗೆ ( How to become Astronaut )

ಈ ಕ್ಷಣವನ್ನು ಇಡೀ ಜಗತ್ತೇ ಕಣ್ತುಂಬಿಕೊಂಡಿದೆ. ಇಂದು ಭಾರತಕ್ಕೆ ಐತಿಹಾಸಿಕ ದಿನ. ಈ ಹೆಮ್ಮೆಯ ದಿನಕ್ಕಾಗಿ ಇಡೀ ದೇಶ‌‌ವೇ ಕಾಯುತ್ತಿತ್ತು. ಚಂದ್ರಯಾನ 3 ಯಶಸ್ವಿಯಾಗಲಿ‌ ಎಂದು ಇಡೀ ಭಾರತ ಪ್ರಾರ್ಥನೆ ಮಾಡಿತ್ತು. ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ.

ಇದುವರೆಗೂ ಚಂದ್ರನ ಅಂಗಳಕ್ಕೆ ರಷ್ಯಾ, ಅಮೆರಿಕ ಮತ್ತು ಚೀನಾ ಮಾತ್ರ ರೋವರ್​ ಕಳುಹಿಸಿತ್ತು. ಆದರೆ, ಚಂದ್ರನ ದಕ್ಷಿಣ ಧ್ರುವಕ್ಕೆ ಯಾವ ರಾಷ್ಟ್ರವೂ ಕಾಲಿಟ್ಟಿರಲಿಲ್ಲ. ಈಗ ಚಂದ್ರನ ದಕ್ಷಿಣ ಧ್ರುವಕ್ಕೆ ಕಾಲಿಟ್ಟ ಮೊದಲ ರಾಷ್ಟ್ರ ಎನ್ನುವ ಖ್ಯಾತಿಗೆ ಭಾರತ ಪಾತ್ರವಾಗಿದೆ.

ಚಂದ್ರನ ಅಂಗಳಕ್ಕೆ ಇಳಿದ ಭಾರತದ ವಿಕ್ರಮ್ ಲ್ಯಾಂಡರ್ – ಭಾರತಕ್ಕೆ ಸಂಭ್ರಮದ ದಿನ – India’s Vikram lander lands on the moon – a day of celebration for India #ISRO #DRDO #Chandryaan3 #Chandryaanupdate #kannada #news #india #bengaluru #vikramlander #pragyanrover

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024