ತುಳು ಭಾಷೆ ವಿಮಾನದಲ್ಲಿ ಮಾರ್ದನಿಸಿದೆ. ಅದೂ ಕೂಡ ವಿಮಾನದ ಪೈಲಟ್ ಬಾಯಲ್ಲಿ. ಇದೀಗ ಪೈಲಟ್ನ ತುಳು ಪ್ರಕಟಣೆಯ ವೀಡಿಯೋ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವೈರಲ್ ಆಗುತ್ತಿದೆ.
ಇಂಡಿಗೋ ವಿಮಾನ ಶುಕ್ರವಾರ ರಾತ್ರಿ ಎಂಟು ಗಂಟೆಗೆ ಮುಂಬೈನಿಂದ ಮಂಗಳೂರಿಗೆ ಹೊರಟಿತ್ತು. ಈ ವೇಳೆ ಪೈಲಟ್ ಇಂಗ್ಲಿಷ್ ಬದಲಿಗೆ ತುಳುವಿನಲ್ಲಿ ಅನೌನ್ಸ್ಮೆಂಟ್ ಕೊಟ್ಟಿದ್ದಾರೆ.
ವಿಮಾನದಲ್ಲಿ ಇಂಗ್ಲಿಷ್, ಹಿಂದಿ ಅಥವಾ ಸ್ಥಳೀಯ ರಾಜ್ಯ ಭಾಷೆಯಲ್ಲಿ ಮಾತ್ರ ವಿಮಾನ ಹೊರಡುವಾಗ ಮತ್ತು ಇಳಿಯುವಾಗ ಪ್ರಯಾಣಿಕರಿಗೆ ಸೂಚನೆ ರವಾನಿಸುವ ಪದ್ಧತಿ ಇದೆ. ಈ ನಡುವೆ ಮುಂಬೈನಿಂದ ಮಂಗಳೂರಿಗೆ ಹೊರಟಿದ್ದ ವಿಮಾನದಲ್ಲಿ ಕರಾವಳಿ ಕರ್ನಾಟಕದ ಜನ ಹೆಚ್ಚಿರುವುದನ್ನು ಗಮನಿಸಿದ ಪೈಲಟ್ ‘ಮಾತೆರೆಗ್ಲಾ ಸೊಲ್ಮೆಲು’ ಎನ್ನುತ್ತಾ ತುಳುವಿನಲ್ಲಿ ಮಾತು ಆರಂಭಿಸಿ ಅಗತ್ಯ ಸೂಚನೆಯನ್ನು ನೀಡಿದ್ದಾರೆ.
ಈ ವೀಡಿಯೋ ಇದೀಗ ಕರಾವಳಿಯಾದ್ಯಂತ ಗಮನಸೆಳೆಯುತ್ತಿದೆ.
ವಿಮಾನದಲ್ಲಿ ತುಳುವಿನಲ್ಲಿ ಅನೌನ್ಸ್ಮೆಂಟ್ ಮಾಡಿದ ಪೈಲಟ್ ಪ್ರದೀಪ್ ಪದ್ಮಶಾಲಿ ಮೂಲತಃ ಉಡುಪಿಯವರು ಮುಂಬೈನಲ್ಲಿ ಪೈಲಟ್ ವೃತ್ತಿ ನಿರ್ವಹಿಸುತ್ತಿದ್ದಾರೆ. ಇಂಡಿಗೋ ವಿಮಾನ ಪ್ರತಿದಿನ ಮುಂಬೈನಿಂದ ರಾತ್ರಿ 8 ಗಂಟೆಗೆ ಹೊರಡಿ ಮಂಗಳೂರಿಗೆ 9:30ಕ್ಕೆ ಮಂಗಳೂರಿಗೆ ತಲುಪುತ್ತದೆ. ಈ ವಿಮಾನ ಶುಕ್ರವಾರ ಹೊರಡುತ್ತಿದ್ದಂತೆ ಪ್ರದೀಪ್ ತಮ್ಮ ತುಳು ಭಾಷಾ ಪ್ರೇಮ ಮೆರೆದು ತುಳುವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಹಿರಿಯ ವ್ಯಕ್ತಿಗಳ ಅಂತರರಾಷ್ಟ್ರೀಯ ದಿನ ಪಾಲಕರು ಹಳ್ಳಿಯ ತಮ್ಮ ಹಳೆಯ ಮನೆಯಲ್ಲಿ ಮಕ್ಕಳ ಬರುವಿಕೆಗೆ, ಒ೦ದು ಫೋನ್ ಕರೆಗೆ, ಪತ್ರಕ್ಕೆ… Read More
ಬೆಂಗಳೂರು :ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡಿ ಸಂಕಷ್ಟ ಎದುರಾಗಿದೆ, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇಸಿಐಆರ್… Read More
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಜಾರಿ… Read More
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ವೇಗವಾಗಿ 27,000 ರನ್ ಗಳಿಸಿದ ಆಟಗಾರನಾಗಿ ವಿರಾಟ್ ಕೊಹ್ಲಿ ಹೆಗ್ಗಳಿಕೆಯು ತಮ್ಮಗೆ ತಕ್ಕಂತೆ ಹೊಸ ಮೆಟ್ಟಿಲುಗೆ… Read More
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಈ ಹಿನ್ನೆಲೆಯಲ್ಲಿ,… Read More
ದೆಹಲಿ: ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಕೆಯ ಬಗ್ಗೆ ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ವಿಚಾರಣೆಯನ್ನು… Read More
This website uses cookies.
Leave a Comment