ಕ್ರೀಡೆ

INDvsENG – ವಿಶಾಖಪಟ್ಟಣದಲ್ಲಿ ಭಾರತಕ್ಕೆ 106 ರನ್ ಗೆಲುವು

ವಿಶಾಖಪಟ್ಟಣದಲ್ಲಿ ನಡೆದ INDvsENG ಪಂದ್ಯದಲ್ಲಿ ಭಾರತ 106 ರನ್ ಅಂತರದ ಗೆಲುವು ಸಾಧಿಸಿದೆ. ಗೆಲುವಿಗೆ 399 ರನ್ ಗಳ ಸವಾಲು ಪಡೆದಿದ್ದ ಇಂಗ್ಲೆಂಡ್ 292 ರನ್ ಗಳಿಗೆ ಆಲೌಟಾಯಿತು.

3ನೇ ದಿನದಾಟದ ಅಂತ್ಯಕ್ಕೆ ಒಂದು ವಿಕೆಟ್ ನಷ್ಟಕ್ಕೆ 67 ರನ್ ಗಳಿಸಿದ್ದ ಇಂಗ್ಲೆಂಡ್ ಪರವಾಗಿ ಕ್ರಾಲಿ 73 ರನ್ ಗಳಿಸಿದರು. ಉಳಿದಂತೆ ಬೆನ್ ಫೋಕ್ಸ್ ಮತ್ತು ಬೌಲರ್ ಟಾಮ್ ಹಾರ್ಟ್ಲಿ ತಲಾ 36 ರನ್ ಗಳ ಕಾಣಿಕೆ ನೀಡಿದರು. ಬೆನ್ ಡಕೆಟ್, ಒಲಿ ಪೋಪ್, ಜಾನಿ ಬೇರಿಸ್ಟೋ ಆರಂಭ ಪಡೆದಾರದರೂ ದೊಡ್ಡ ಇನ್ನಿಂಗ್ಸ್ ಕಟ್ಟಲು ವಿಫಲರಾದರು.

ಭಾರತದ ಪರ ಜಸ್ಪ್ರೀತ್ ಬುಮ್ರಾ ಮತ್ತು ರವಿಚಂದ್ರನ್ ಅಶ್ವಿನ್ ಆಂಗ್ಲ ಬೌಲರ್ ಗಳನ್ನು ಕಟ್ಟಿ ಹಾಕಿದರು. ಇಬ್ಬರು ತಲಾ ಮೂರು ವಿಕೆಟ್ ಕಿತ್ತರು. ಉಳಿದಂತೆ ಮುಕೇಶ್ ಕುಮಾರ್, ಕುಲದೀಪ್ ಯಾದವ್ ಮತ್ತು ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಕಿತ್ತರು.

ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 396 ರನ್ ಗಳಿಸಿದ್ದರೆ, ಇಂಗ್ಲೆಂಡ್ 253 ರನ್ ಮಾಡಿತ್ತು. ಎರಡನೇ ಇನ್ನಿಂಗ್ಸ್ ನಲ್ಲಿ ಭಾರತವು 255 ರನ್ ಮಾಡಿದ್ದರೆ ಇಂಗ್ಲೆಂಡ್ ತಂಡವು 292 ರನ್ ಗಳಿಗೆ ಆಲೌಟಾಯಿತು. ಲೋಕ ಸದನದಲ್ಲಿ ಅಕ್ರಮ ಪರೀಕ್ಷೆ ತಡೆ ಮಸೂದೆ ಪರಿಚಯ | Prevention of Unfair Means

ಭಾರತದ ಪರ ಮೊದಲ ಇನ್ನಿಂಗ್ಸ್ ನಲ್ಲಿ ದ್ವಿಶತಕ ಹೊಡೆದಿದ್ದರೆ, ಎರಡನೇ ಇನ್ನಿಂಗ್ಸ್ ನಲ್ಲಿ ಶುಭ್ಮನ್ ಗಿಲ್ ಶತಕ ಬಾರಿಸಿದ್ದರು. ಈ ಗೆಲುವಿನೊಂದಿಗೆ ಸರಣಿ 1-1 (INDvsENG) ರೊಂದಿಗೆ ಸಮಬಲಗೊಂಡಿದೆ. ಮೂರನೇ ಪಂದ್ಯವು ಫೆ.15ನಿಂದ ರಾಜ್ ಕೋಟ್ ನಲ್ಲಿ ನಡೆಯಲಿದೆ.

INDvsENG

Team Newsnap
Leave a Comment
Share
Published by
Team Newsnap
Tags: india

Recent Posts

ಎಸ್ ಎಸ್ ಎಲ್ ಸಿ ಕಡಮೆ ಅಂಕ : ಮದ್ದೂರಿನಲ್ಲಿ ಇಬ್ಬರ ವಿದ್ಯಾರ್ಥಿ ಗಳು ಆತ್ಮಹತ್ಯೆ

ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ… Read More

May 9, 2024

ಸೋಮವಾರದ ತನಕವೂ ರೇವಣ್ಣ ಜೈಲು ಹಕ್ಕಿ

ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೋಮವಾರದವರೆಗೆ… Read More

May 9, 2024

SSLC ಫಲಿತಾಂಶ : ಬಾಲಕಿಯರೇ ಮೇಲುಗೈ ಉಡುಪಿ ಪ್ರಥಮ- ಯಾದಗಿರಿ ಕೊನೆ

ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More

May 9, 2024

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024