March 13, 2026

Newsnap Kannada

The World at your finger tips!

jds

KPSC ಪರೀಕ್ಷೆಯಲ್ಲಿ ತಾಳಿ, ಕಾಲುಂಗುರ ತೆಗೆಸಿದ್ದು ಅಕ್ಷಮ್ಯ: JDS ಆಕ್ರೋಶ

Spread the love

 ಕಲಬುರಗಿಯಲ್ಲಿ ಭಾನುವಾರ ನಡೆದ KPSC ಯ ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ವಿವಾಹಿತ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರ ತೆಗೆದಿದ್ದು ದುರ್ನಡತೆ ಪರಮಾವಧಿ ಎಂದು ಜಾತ್ಯತೀತ ಜನತಾದಳ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಡಿಎಸ್; ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ.

ಕಲಬುರಗಿಯಲ್ಲಿ ಭಾನುವಾರ ನಡೆದ ಕೆಪಿಎಸ್ಸಿ ಪರೀಕ್ಷೆಯಲ್ಲಿ ಸ್ತ್ರೀಯರಿಗೆ ಘೋರ ಅಪಮಾನ ಎಸಗಿದ್ದು ಅತ್ಯಂತ ಖಂಡನೀಯ. ಇಂಡಿಯಾ ಎಂದು ಜಪಿಸುವ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಭಾರತದ ಸಂಸ್ಕೃತಿಗೆ ಸಿಕ್ಕ ಗೌರವ ಇದು. ನಮ್ಮ ಸಂಸ್ಕೃತಿ, ಪರಂಪರೆಯನ್ನು ನಿರ್ನಾಮ ಮಾಡುವ ಕುಕೃತ್ಯ ಅವರಿಂದ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಜೆಡಿಎಸ್ ಕಟುವಾಗಿ ಟೀಕಿಸಿದೆ.

ಒಂದೆಡೆ ಗೃಹಲಕ್ಷ್ಮಿ ಎನ್ನುವ ರಾಜ್ಯ ಸರಕಾರ, ಇನ್ನೊಂದೆಡೆ ಅದೇ ಗೃಹಲಕ್ಷ್ಮಿಯರ ಸೌಭಾಗ್ಯ ಮತ್ತು ಸಾಂಸ್ಕೃತಿಕ, ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಉಂಟು ಮಾಡುತ್ತಿದೆ. ಕರ್ನಾಟಕ ಮಾದರಿ ಎಂದರೆ ತಾಯಂದಿರ ಮುತ್ತೈದೆತನಕ್ಕೇ ಕುತ್ತು ತರುವುದಾ?.

ಇಷ್ಟಕ್ಕೂ ಪರೀಕ್ಷಾ ಸಿಬ್ಬಂದಿಗೆ ಮಹಿಳಾ ಅಭ್ಯರ್ಥಿಗಳ ತಾಳಿ, ಕಾಲುಂಗುರ ತೆಗೆಸುವಂತೆ ಆದೇಶ ಕೊಟ್ಟವರು ಯಾರು? ಅವರಿಗೆ ಅಷ್ಟೊಂದು ಸೂಕ್ಷ್ಮಪ್ರಜ್ಞೆಯ ಕೊರತೆಯೇ? ಪರೀಕ್ಷೆಗೆ ಮೊದಲೇ ಆ ಮಹಿಳೆಯರಿಗೆ ಅದೆಷ್ಟು ಮಾನಸಿಕ ಆಘಾತ ಉಂಟಾಗುತ್ತದೆ ಎಂಬ ಅರಿವು ಬೇಡವೇ? ಪರೀಕ್ಷಾ ನಿಯಮಗಳ ಪಟ್ಟಿಯಲ್ಲಿ ಕಾಲುಂಗುರ, ಮಂಗಳಸೂತ್ರ ತೆಗೆಯಬೇಕು ಎನ್ನುವ ಸೂಚನೆಯೇ ಇರಲಿಲ್ಲ ಎನ್ನುತ್ತಾರೆ ಪರೀಕ್ಷಾರ್ಥಿಗಳು.

ಕೆಪಿಎಸ್‌ಸಿ ಹಾಗೂ ರಾಜ್ಯ ಸರ್ಕಾರ ಕೂಡಲೇ ನೊಂದ ಮಹಿಳೆಯರಿಗೆ ಕ್ಷಮೆ ಯಾಚಿಸಬೇಕು ಹಾಗೂ ಇಂತಹ ಆಘಾತಕಾರಿ ಘಟನೆಗೆ ಕಾರಣರಾದ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಮತ್ತೆಂದೂ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಜೆಡಿಎಸ್ ಸರ್ಕಾರವನ್ನು ಆಗ್ರಹಿಸಿದೆ. 

error: Content is protected !!