Trending

ಅ25 ರಂದು ಗೋಚರಿಸುವ ಸೂರ್ಯ ಗ್ರಹಣದ ಬಗ್ಗೆ ಭೌತ ವಿಜ್ಞಾನಿ ಭಟ್ ಬಿಚ್ಚಿಟ್ಟ ಒಂದಷ್ಟು ಮಾಹಿತಿ

ಈ ಬಾರಿಯ ಸಂಜೆಯ ಸೂರ್ಯಗ್ರಹಣ ಕಣ್ತುಂಬಿಕೊಳ್ಳಲು ಜನ ಸಿದ್ದರಾಗಿದ್ದಾರೆ. ಆಶ್ವಯುಜ ಮಾಸದ ಅಂತ್ಯದಲ್ಲಿ ಬರುವ ಅಮಾವಾಸ್ಯೆ ಚಂದ್ರ, ಈ ವರ್ಷ ಅ 25ರಂದು ವರ್ಷದ 2ನೇ ಸೂರ್ಯಗ್ರಹಣವನ್ನು ನೋಡಬಹುದು.

ಸೂರ್ಯಗ್ರಹಣವೆಂದರೇನು?

ಗ್ರಹಣ ಆಗೋದು ಹೇಗೆ?

ಜನ ಏನ್ಮಾಡಬೇಕು? ಹೇಗೆ ಗ್ರಹಣ ನೋಡಬೇಕು ಅಂತ ಹಿರಿಯ ಭೌತಶಾಸ್ತ್ರಜ್ಞ ಉಡುಪಿಯ ಎ.ಪಿ ಭಟ್ ವಿವರಿಸಿದ್ದಾರೆ.

ಚಂದ್ರನು ಸೂರ್ಯ ಮತ್ತು ಭೂಮಿಯ ನಡುವಿನಲ್ಲಿ ಬರುವ, ಇರುವ ಕಾಲವನ್ನು ಸೂರ್ಯಗ್ರಹಣ ಎಂದು ಕರೆಯುತ್ತೇವೆ.

ಪ್ರತಿ ಅಮಾವಾಸ್ಯೆಯ ದಿನ ಚಂದ್ರನು ಭೂಮಿ ಮತ್ತು ಸೂರ್ಯನ ಮಧ್ಯೆ ಹಾದು ಹೋಗುವಾಗ, ಈ ಮೂರು ಆಕಾಶಕಾಯಗಳು ಒಂದು ಸರಳರೇಖೆಯಲ್ಲಿರುವುದಿಲ್ಲ. ಚಂದ್ರನ ಭೂಮಿಯ ಸುತ್ತ ಸುತ್ತುವ ಚಲನೆಯ ಸಮತಲ ಹಾಗೂ ಸೂರ್ಯನ ಸಮತಲ (ಭೂಮಿಯದೃಷ್ಟಿಯಿಂದ)ಗಳ ನಡುವಿನಲ್ಲಿ 5 ಡಿಗ್ರಿಗಳ ಅಂತರವಿರುವುದರಿಂದ ಪ್ರತಿ ಅಮಾವಾಸ್ಯೆಗೆ ಗ್ರಹಣ ಸಂಭಸುವುದಿಲ್ಲ.

ಚಂದ್ರನು ರಾಹು ಅಥವಾ ಕೇತು ಬಿಂದುವಿನಲ್ಲಿ ಬಂದಾಗ ಮಾತ್ರ ಸೂರ್ಯಗ್ರಹಣ ಸಂಭವಿಸುತ್ತದೆ.

ಚಂದ್ರನು ಸೂರ್ಯನಿಗೆ ಅಡ್ಡ ಬಂದು, ಸೂರ್ಯನ ಒಂದು ಭಾಗವು ಮಾತ್ರ ಗೋಚರಿಸಿದರೆ, ಅದು ಪಾರ್ಶ್ವ ಸೂರ್ಯಗ್ರಹಣ ಆಗಿರುತ್ತದೆ. ಅದೇ ರೀತಿ ಚಂದ್ರನು ಸೂರ್ಯನನ್ನು ಸಂಪೂರ್ಣವಾಗಿ ಆವರಿಸಿದರೆ ಅದು ಖಗ್ರಾಸ ಸೂರ್ಯಗ್ರಹಣ. ಅ.25ರ ಸೂರ್ಯಗ್ರಹಣವು ಗೋಚರಿಸುವ ಎಲ್ಲಾ ಪ್ರದೇಶಗಳಲ್ಲಿ ಪಾರ್ಶ್ವ ಸೂರ್ಯ ಗ್ರಹಣವಾಗಿರುತ್ತದೆ.

ಸಾಮಾನ್ಯವಾಗಿ ಪ್ರತಿ ಸೂರ್ಯಗ್ರಹಣದ ಮೊದಲು ಅಥವಾ ನಂತರ ಬರುವ ಹುಣ್ಣಿಮೆಯ ದಿನ ಚಂದ್ರಗ್ರಹಣ ಸಂಭವಿಸುತ್ತದೆ. ಈ ಬಾರಿ ಕೂಡ ನವೆಂಬರ್ 8ರಂದು ಚಂದ್ರಗ್ರಹಣವನ್ನು (ಚಂದ್ರ ಮತ್ತು ಸೂರ್ಯನ ಮಧ್ಯೆ ಭೂಮಿ ಬರುವ ಸಂದರ್ಭ) ನೋಡಬಹುದು.

ಯಾವ ಪ್ರದೇಶಗಳಲ್ಲಿ ಗೋಚರ?

ಈ ಗ್ರಹಣವು ಭಾರತದ ಎಲ್ಲಾ ಪ್ರದೇಶಗಳಲ್ಲಿ ಹಾಗೂ ಯೂರೋಪ್ ಮತ್ತು ಏಷ್ಯಾದ ಮಧ್ಯಭಾಗದ ವಿವಿಧ ದೇಶಗಳಲ್ಲಿ ಗೋಚರಿಸುತ್ತದೆ. ರಷ್ಯಾದಲ್ಲಿ ಈ ಗ್ರಹಣವು ಗೋಚರಿಸುವಾಗ ಚಂದ್ರನು ಸೂರ್ಯನನ್ನು ಗರಿಷ್ಠ ಅಂದರೆ ಶೇ.82ರಷ್ಟನ್ನು ಆವರಿಸಿಕೊಂಡಿರುತ್ತಾನೆ. ಭಾರತದಲ್ಲಿ ಈ ಗ್ರಹಣವು ಉತ್ತರದ ಲೇಕ್‌ನಲ್ಲಿ ಶೇ.54ರಷ್ಟು ಹಾಗೂ ದೆಹಲಿಯಲ್ಲಿ ಶೇ.44ರಷ್ಟು ಸೂರ್ಯನನ್ನು ಆವರಿಸಿರುವುದು ಕಂಡು ಬರುತ್ತದೆ.

ಕರ್ನಾಟಕದಲ್ಲಿ ಗ್ರಹಣ ನೋಡಬಹುದೇ? :

ಕರ್ನಾಟಕದ ಎಲ್ಲಾ ಭಾಗಗಳಿಂದ ಗ್ರಹಣವನ್ನು ನೋಡಬಹುದು. ರಾಜ್ಯದ ನಾನಾ ಸ್ಥಳಗಳಲ್ಲಿ ಈ ಗ್ರಹಣವು ಸಂಜೆ 5 ರಿಂದ 6 ಗಂಟೆಗೆ ನಡೆಯಲಿರುವ ಸೂರ್ಯಾಸ್ತದವರೆಗೂ ಗೋಚರಿಸುತ್ತದೆ. ಪಶ್ಚಿಮ ಮತ್ತು ನೈಋತ್ಯದ ಕಡೆ ಕ್ಷಿತಿಜವು ಗ್ರಹಣ ವೀಕ್ಷಿಸಲು ಉತ್ತಮ ಸ್ಥಳವಾಗಿರುತ್ತದೆ. ಸಮುದ್ರ ತೀರದಲ್ಲಿ ಗ್ರಹಣ ಬಹಳ ಚೆನ್ನಾಗಿ ಕಾಣುತ್ತದೆ.

ಬೆಂಗಳೂರಿನಲ್ಲಿ ಈ ಗ್ರಹಣ ಶೇ.10ರಷ್ಟು ಮಾತ್ರ ಕಂಡುಬರುತ್ತದೆ. ಸುಂದರ ಪ್ರಾಕೃತಿಕ ದೃಶ್ಯದೊಂದಿಗೆ ಕಡಲ ತೀರಕ್ಕೆ ಸಮೀಪವಿರುವ ಉಡುಪಿಯು ಈ ಗ್ರಹಣ ವೀಕ್ಷಿಸಲು ಉತ್ತಮ ಪ್ರದೇಶ. ಉಡುಪಿಯಲ್ಲಿ ಈ ಗ್ರಹಣವು ಸಂಜೆ 5.08ಕ್ಕೆ ಪ್ರಾರಂಭಗೊಂಡು 5:50ರ ಸುಮಾರಿಗೆ ಗರಿಷ್ಠ ಪ್ರಮಾಣದಲ್ಲಿ ಗೋಚರಿಸುತ್ತದೆ.

Team Newsnap
Leave a Comment

Recent Posts

ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು

ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More

May 12, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More

May 12, 2024

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ

ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More

May 10, 2024

ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More

May 10, 2024