ಆಸ್ತಿ ವಿಚಾರ ಮಗನನ್ನೇ ಕಟ್ಟಿಹಾಕಿ ತಂದೆಯಿಂದ ಹಲ್ಲೆ ಮಾಡಿದ ಘಟನೆ ಪಾಂಡವಪುರ ತಾಲೂಕು
ಎರೇಗೌಡನ ಹಳ್ಳಿ ಗ್ರಾಮದಲ್ಲಿ ಅಮಾನವೀಯ ಘಟನೆ ಜರುಗಿದೆ.
ಎರೇಗೌಡನಹಳ್ಳಿ ಹಲ್ಲೆಗೊಳಗಾದ ನಾಗೇಶ್ ಎಂಬ ವ್ಯಕ್ತಿಯ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ, ನಾಗೇಶ್, ತಂದೆ ಹಾಗೂ ಕುಟುಂಬಸ್ಥರಿಂದಲೇ ಹಲ್ಲೆಗೊಳಗಾದ ವ್ಯಕ್ತಿ.
ತಂದೆಯ ಬಳಿ ಆಸ್ತಿಯಲ್ಲಿ ಭಾಗ ಕೇಳಿದ್ದಕ್ಕೆ ಹಲ್ಲೆ ಮಾಡಿದ ತಂದೆ ಮಹದೇವೇಗೌಡ ಹಾಗೂ ತಮ್ಮ ನಂಜುಂಡೇಗೌಡ ಸೇರಿದಂತೆ ಕುಟುಂಬಸ್ಥರಿಂದ ಹಲ್ಲೆ ನಡೆದಿದೆ, ಮಾರಣಾಂತಿಕ ಹಲ್ಲೆ ನಡೆಸಿ ಆತನ ಕೈ ಕಾಲು ಕಟ್ಟಿ ಹಾಕಿ ಮನೆಯ ಬಳಿ ಕಟ್ಟಿ ಹಾಕಿದ್ದರು.
ಮನೆಗೆ ಹೋಗಿ ಆಸ್ತಿ ವಿಚಾರವಾಗಿ ಮಾತನಾಡಿ ಬರುವುದಾಗಿ ಹೇಳಿ ಹೋಗಿದ್ದ ಗಂಡ ನಾಗೇಶ್
ವಾಪಸ್ಸು ಬರದಿದ್ದಾಗ ಪತ್ನಿ ಸ್ಥಳಕ್ಕೆ ತೆರಳಿ ನೋಡಿದಾಗ ಗಂಡನ ಸ್ಥಿತಿ ಕಂಡು ಕಂಗಾಲಾಗಿ ಪೊಲೀಸರಿಗೆ ಪತ್ನಿ ಭಾರತಿ ದೂರು ನೀಡಿದ್ದಾರೆ.
ದೂರು ಪಡೆದು ಸ್ಥಳಕ್ಕೆ ಬಂದ ಪೊಲೀಸರಿಂದ ಹಲ್ಲೆಗೊಳಗಾದ ಗಂಡನ ರಕ್ಷಣೆ, ಆಸ್ಪತ್ರೆಗೆ ರವಾನೆ.
ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!