ಬೆಂಗಳೂರಿನಲ್ಲಿ ಟಿಕಾಯತ್‌ ಮುಖಕ್ಕೆ ಮಸಿ – ವ್ಯಕ್ತಿಗೆ ಥಳಿತ

Team Newsnap
1 Min Read
ink to Tikayat face in Bangalore

ರಾಷ್ಟ್ರೀಯ ‌ಕಿಸಾನ್ ಮೋರ್ಚಾ ಅಧ್ಯಕ್ಷ ರಾಕೇಶ್ ಸಿಂಗ್ ಟಿಕಾಯತ್ ಮುಖಕ್ಕೆ ಮಸಿ ಬಳಿದು ಹಲ್ಲೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ಜರುಗಿದೆ

ಕೋಡಿಹಳ್ಳಿ‌ ಚಂದ್ರಶೇಖರ್‌ ಮೇಲಿನ ಭ್ರಷ್ಟಾಚಾರ ಆರೋಪದ ಬಗ್ಗೆ ಗಾಂಧಿ ಭವನದಲ್ಲಿ ಸಭೆ ಕರೆಯಲಾಗಿತ್ತು. ರಾಷ್ಟ್ರೀಯ ಕಿಸಾನ್ ಮೊರ್ಚಾ ಅಧ್ಯಕ್ಷ ರಾಕೇಶ್ ಸಿಂಗ್ ಟಿಕಾಯತ್, ಯುದ್ದವೀರ ಸಿಂಗ್ , ಪ್ರೊಫೆಸರ್ ರವಿ ವರ್ಮಕುಮಾರ್, ಚುಕ್ಕಿ ನಂಜುಂಡಸ್ವಾಮಿ ಅವರು ವೇದಿಕೆಯಲ್ಲಿದ್ದರು.

ಇದನ್ನು ಓದಿ –ಚಾಡಿ ಹೇಳಿ ಬದುಕುವುದನ್ನು ಬಿಟ್ಟು, ಚುನಾವಣೆಯಲ್ಲಿ ಗೆದ್ದು ತೋರಿಸು- JDSಜಿಲ್ಲಾಧ್ಯಕ್ಷ ಡಿ ರಮೇಶ್ ಗೆ ಕೆ ಸಿ ಎನ್ ಸವಾಲು

ಏಕಾಏಕಿ ನುಗ್ಗಿದ ಯುವಕ ಟಿಕಾಯತ್ ಮುಖಕ್ಕೆ ಮಸಿ ಬಳಿದು ಮೋದಿ ಮೋದಿ ಎಂದು‌ ಘೋಷಣೆ ಕೂಗಿದ್ದಾನೆ. ಏಕಾಏಕಿ ವೇದಿಕೆಗೆ ನುಗ್ಗಿದ ಯುವಕ ಟಿವಿ ಚಾನಲ್ ಮೈಕ್ ಕಿತ್ತುಕೊಂಡು‌ ರಾಕೇಶ್ ಸಿಂಗ್ ಟಿಕಾಯತ್ ಮೇಲೆ ಹಲ್ಲೆ ನಡೆಸಿ ಮುಖಕ್ಕೆ ಮಸಿ ಎರಚಿದ್ದಾನೆ. 

ಈ ಸಂದರ್ಭದಲ್ಲಿ ಅಲ್ಲಿ ಮಾರಾಮಾರಿ ನಡೆದಿದ್ದು ಅಲ್ಲಿದ್ದ ವ್ಯಕ್ತಿಗಳು ಯುವಕನನ್ನು ಹಿಡಿದು ಥಳಿಸಿದ್ದಾರೆ. ಕುರ್ಚಿಗಳನ್ನು ಹಿಡಿದು ತೂರಿದ ವೀಡಿಯೋ ಲಭ್ಯವಾಗಿದೆ.

Share This Article
Leave a comment