ಪೊಲೀಸರು ಪ್ರಕರಣ ವಿಚಾರಣೆಯ ನೆಪದಲ್ಲಿ 22 ವರ್ಷದ ಯುವತಿಯರನ್ನು ಬೆತ್ತಲೆ ಹಿಂಸೆ ಮಾಡುತ್ತಿದ್ದ ಕಾರಣಕ್ಕಾಗಿ ಹಿಂಸೆಯ ಭಯಕ್ಕೆ ಹೆದರಿ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಫರೀದಾಬಾದ್ ನಲ್ಲಿ ನಡೆದಿದೆ.
ಪೊಲೀಸ್ ಠಾಣೆಯ ಪೋಲಿಸರ ಕೃತ್ಯ ಖಂಡಿಸಿ ಪೋಷಕರು ಮಗಳ ಶವ ಪಡೆಯಲು ಹಿಂದೇಟು ಹಾಕಿ ಪ್ರತಿಭಟನೆ ಮಾಡುತ್ತಿದ್ದಾರೆ.
ಯುವತಿ ರಾಜೇಂದ್ರ ಪಾರ್ಕ್ ನಲ್ಲಿ ಕುಟುಂಬದ ಜೊತೆ ವಾಸವಾಗಿದ್ದಳು. ಯುವತಿ ಕುಟುಂಬ ಪ್ರಕರಣವೊಂದರಲ್ಲಿ ಆರೋಪಿಗಳಾಗಿದ್ದಾಳೆ. ಪೊಲೀಸರು ಮನೆಯವರನ್ನು ಠಾಣೆಗೆ ಕರೆಸಿ ವಿಚಾರಣೆಗೆ ನಡೆಸಿದ್ದರು. ಆ ವೇಳೆ ಪೊಲೀಸರು ಮೂರನೇ ದರ್ಜೆ ಟಾರ್ಚರ್ ನೀಡುತ್ತಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಕೆಲ ದಿನಗಳ ಹಿಂದೆ ಯುವತಿ ಆಕೆ ಮಾವನನ್ನ ಬೆತ್ತಲೆಗೊಳಿಸಿ ಪೊಲೀಸರು ಥಳಿಸಿದ್ದರು.ವಿಚಾರಣೆ ಯಿಂದ ಹೊರ ಬಂದ ಮಗಳು ಪೊಲೀಸರ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಫರೀದಾಬಾದ್ ಪೊಲೀಸರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ. ಈ ಕುಟುಂಬಕ್ಕೆ ವಿಚಾರಣೆ ನೆಪದಲ್ಲಿ ನೀಡುತ್ತಿರುವ ಕಿರುಕುಳದ ಬಗ್ಗೆ ವರದಿ ಮಾಡಲು ಬಂದ ಪತ್ರಕರ್ತನನ್ನು ಸಹ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ