Main News

ಮತದಾನದ ದಿನ ಬೂತ್ ಮುಖ್ಯದ್ವಾರದಲ್ಲಿ ಮದ್ಯ ಪರೀಕ್ಷೆ ಯಂತ್ರವನ್ನು ಅಳವಡಿಸಿ

ಮತದಾನ ಕೇಂದ್ರದ ಪ್ರತಿ ಬೂತ್‍ನ ಮುಖ್ಯದ್ವಾರದಲ್ಲಿ BAC breathalyzer tester ಯಂತ್ರವನ್ನು ಅಳವಡಿಸುವ ಬಗ್ಗೆ ಚಂದ್ರಶೇಖರ್ ಬಿನ್ ಹಾಲಪ್ಪ ಅವರು ಮುಖ್ಯ ಚುನಾವಾಣಾಧಿಕಾರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?

ಮತದಾನದ ಕೇಂದ್ರದ ಪ್ರತಿ ಬೂತ್ ಪ್ರವೇಶದ್ವಾರದಲ್ಲಿ BAC breathalyzer tester ಯಂತ್ರವನ್ನು ಅಳವಡಿಸಬೇಕು. ಈ ಯಂತ್ರವು ಕಳೆದ 48 ಗಂಟೆಗಳಲ್ಲಿ ಮದ್ಯ ಸೇವಿಸಿದ ಬಗ್ಗೆ ದೃಢೀಕರಿಸುವಂತಿರಬೇಕು. 48 ಗಂಟೆಗಳಲ್ಲಿ(2ದಿನ) ಮದ್ಯ ಸೇವನೆ ಮಾಡಿ ಬಂದವರಿಗೆ ಮತದಾನ ಮಾಡದಂತೆ ಸರ್ಕಾರ ನಿರ್ಬಂಧಿಸಬೇಕು .

ಇದನ್ನು ಓದಿ : ರಾಜ್ಯದ ಜಿಪಂ – ತಾಪಂ ಚುನಾವಣೆಯ ಅರ್ಜಿ ಮೇ 17 ರಂದು ವಿಚಾರಣೆ : ಹೈಕೋರ್ಟ್

ಅತಿಮುಖ್ಯವಾಗಿ ಮತದಾನ ಮುಕ್ತಾಯದ ಹಿಂದಿನ 48 ಗಂಟೆ ಅವಧಿಯಲ್ಲಿ ಎಲ್ಲ ತರಹದ ಮದ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್‍ಗಳಲ್ಲಿ ಮದ್ಯಮಾರಾಟವನ್ನು ಸಂಪೂರ್ಣ ನಿಷೇಧಿಸಬೇಕು. ಈ ಬಗ್ಗೆ ಆಯೋಗ ಕಟ್ಟು ನಿಟ್ಟು ಕ್ರಮ ಕೈಗೊಂಡರೂ ಸಹ ಅಕ್ರಮವಾಗಿ ಮದ್ಯ ಶೇಖರಿಸಿ ಕಳ್ಳಸಾಗಾಣೆ ಮೂಲಕ ಮತದಾರರಿಗೆ ಮದ್ಯವನ್ನು ಸರಬರಾಜು ಮಾಡುತ್ತಾರೆ. ಇದನ್ನು ತಡೆಗಟ್ಟಲು ಆಯೋಗ ಹೆಚ್ಚು-ಹೆಚ್ಚು ಪೋಲಿಸ್ ಸಿಬ್ಬಂದಿ ಅಧಿಕಾರಿಗಳನ್ನು ನೇಮಿಸುವ ಪರಿಸ್ಥಿತಿ ಇರುತ್ತದೆ.

ಕುಡಿದು ಗಲಾಟೆ ಮಡುವವರ ಸಂಖ್ಯೆ ನಿಯಂತ್ರಣವಾಗುತ್ತದೆ. ವಿವೇಚನೆಯಿಂದ ಮತವನ್ನು ಚಲಾಯಿಸಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ಪ್ರತಿ ಕ್ಷೇತ್ರಗಳಲ್ಲಿ ಉತ್ತಮ ವ್ಯಕ್ತಿಗಳು ಆಯ್ಕೆಯಾಗುತ್ತಾರೆ. ಚುನಾವಣೆಗಳು ಭ್ರಷ್ಟಾಚಾರ ರಹಿತವಾಗಿ ನಡೆಯುತ್ತವೆ.

ಇದನ್ನು ಓದಿ : ಮೇ 19ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

ಭಾರತ ಚುನವಣಾ ಆಯೋಗವು(ECI) ಭಾರತ ಸರ್ಕಾರದ ಕಾನೂನು ನ್ಯಾಯ ಸಚಿವಾಲಯದ ಮಾಲೀಕತ್ವದ ಅಡಿಯಲ್ಲಿ ಸಾಂವಿಧಾನಿಕ ಸಂಸ್ಥೆಯಾಗಿರುವುದರಿಂದ, ಬಿಗಿಯಾದ ಕಾನೂನುಗಳನ್ನು ತರುವ ಮೂಲಕ ನನ್ನ ಅರ್ಜಿಯ ವಿಷಯಕ್ಕೆ ಸಂಬಂಧಿಸಿದಂತೆ ತುರ್ತಾಗಿ ಕ್ರಮ ಕೈಗೊಳ್ಳಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ. ಆಯೋಗ ಈ ಅರ್ಜಿಗೆ ಸಂಬಂಧಿಸಿದಂತೆ ತೆಗೆದುಕೊಳ್ಳುವ ನಿರ್ಧಾರದ ಬಗ್ಗೆ 30 ದಿನಗಳ ಒಳಗಾಗಿ ಅರ್ಜಿದಾರಿಗೆ ಹಿಂಬರಹ ನೀಡುವಂತೆ ಕೇಳಿಕೊಳ್ಳುತ್ತೇನೆ ಎಂದು ಬರೆದಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024