ವಿಜಯಪುರದಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 37 ನೇ ರಾಜ್ಯ ಸಮ್ಮೇಳನಕ್ಕೆ ಧರ್ಮಸ್ಥಳದ ಧರ್ಮಧಿಕಾರಿ , ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಆಹ್ವಾನಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ.ಹೆಗ್ಗಡೆ ಅವರಿಗೆ ಆಮಂತ್ರಣ ನೀಡಲಾಯಿತು.ನಾಳೆ ಮಧ್ಯರಾತ್ರಿ ಉಲ್ಕಾಪಾತ; ಬರಿಗಣ್ಣಿನಲ್ಲಿಯೇ ನೋಡಲು ಅಭ್ಯಂತರವಿಲ್ಲ
ರಾಜ್ಯಸಭಾ ಸದಸ್ಯರಾಗಿರುವ ಅವರನ್ನು ಅಭಿನಂದಿಸಲಾಯಿತು. ಮಂಗಳೂರಿನಲ್ಲಿ ಪತ್ರಕರ್ತರ ಸಮ್ಮೇಳನ ಸಾನಿಧ್ಯ ವಹಿಸಿ ಅಚ್ಚುಕಟ್ಟಾಗಿ ನಡೆಸಿಕೊಟ್ಟ ಸಂದರ್ಭವನ್ನು ನೆನಪಿಸಿ ಅಭಿನಂದನೆಗಳನ್ನು ಸಲ್ಲಿಸಲಾಯಿತು .
ಈ ಸಂದರ್ಭ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದ ಡಾ.ಹೆಗ್ಗಡೆ
ಸಮ್ಮೇಳನ ಅರ್ಥಪೂರ್ಣವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಖಜಾಂಚಿ ಬಿ.ಎನ್.ಪುಷ್ಪರಾಜ್ , ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ಬಿ.ಹರೀಶ್ ರೈ , ರಾಜ್ಯ ಸಮಿತಿ ಸದಸ್ಯ ಕಲ್ಯಾಣ್ ಕುಮಾರ್ , ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಚ್ತೈತ್ರೇಶ್ ಇಳಂತಿಲ ಉಪಸ್ಥಿತರಿದ್ದರು.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ