Trending

ಮುಂಬೈಗೆ 5 ನೇ ಬಾರಿ‌ ಐಪಿಎಲ್ ಕಿರೀಟ

ಐಪಿಎಲ್ 20-20ಯ ಫೈನಲ್ಸ್ ಪಂದ್ಯದಲ್ಲಿ ಡೆಲ್ಲಿ‌ ಕ್ಯಾಪಿಟಲ್ಸ್ ತಂಡದ ವಿರುದ್ಧ, ಮುಂಬೈ ಇಂಡಿಯನ್ಸ್ ತಂಡ 5 ವಿಕೆಟ್‌ಗಳ ರೋಚಕ ಜಯ ದಾಖಲಿಸಿತು.

ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡಿಸಿ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.

ಡಿಸಿ ತಂಡದಿಂದ ಆರಂಭಿಕ ಆಟಗಾರರಾಗಿ ಮೈದಾನಕ್ಕಿಳಿದ ಎಂ. ಸ್ಟೋಯಿನೀಸ್ ಹಾಗೂ ಶಿಖರ್ ಧವನ್ ಅವರ ಜೋಡಿಯಾಟ ತೀರ ಕಳಪೆಯಾಗಿತ್ತು. ಸ್ಟೋಯಿನೀಸ್ ಶೂನ್ಯ ಸಂಪಾದನೆಗೆ ಪೆವಿಲಿಯನ್ ಸೇರಿದರೆ, ಧವನ್ 13 ಬಾಲ್‌ಗಳಿಗೆ 15 ರನ್ ಗಳಿಸಿದರು. ನಂತರ ಬಂದ ಎಸ್. ಐಯ್ಯರ್ ಹಾಗೂ ಆರ್‌. ಪಂತ್ ಅವರಯ ಜೋಡಿಯಾಟದಲ್ಲಿ ಉತ್ತಮ ರನ್ ಗಳಿಸಿದರೂ ತಂಡವನ್ನು ಸೋಲಿನ ದವಡೆಯಿಂದ ಕಾಪಾಡಲಾಗಲಿಲ್ಲ. ಐಯ್ಯರ್ 50 ಎಸೆತಗಳಿಗೆ 65 ರನ್ ಹಾಗೂ ಪಂತ್ 38 ಎಸೆತಗಳಿಗೆ 56 ರನ್ ಗಳಿಸಿದರು. ಡಿಸಿ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 156 ರನ್‌ಗಳನ್ನು ಗಳಿಕೆ ಮಾಡಿತು.

ಎಮ್‌ಐ ತಂಡದಿಂದ ಸ್ಕ್ರೀಸ್‌ಗೆ ಬಂದ ರೋಹಿತ್ ಶರ್ಮಾ ಹಾಗೂ ಡಿ. ಕಾಕ್ ಉತ್ತಮ ಜೊತೆಯಾಟ ಆರಂಭಿಸಿದರು. ಶರ್ಮಾ 51 ಎಸೆತಗಳಿಗೆ 68 ರನ್ ಹಾಗೂ ಕಾಕ್ 12 ಎಸೆತಗಳಿಗೆ 20 ರನ್ ಗಳಿಸಿದರು. ನಂತರ ಬಂದ ಐ. ಕಿಶನ್ 19 ಎಸೆತಗಳಿಗೆ 33 ರನ್ ಗಳಿಸಿದರು. ಎಮ್‌ಐ ತಂಡ 18.4 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿ ಪಂದ್ಯದಲ್ಲಿ ಐಪಿಎಲ್‌ 2020ರ 13ನೇ ಸರಣಿಯ ಚಾಂಪಿಯನ್ ಆಗಿ ಹೊರಹೊಮ್ಮಿತು.

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024