crime

ನೀರಾವರಿ ಇಲಾಖೆ CEಗೆ ಚಪ್ಪಲಿಯಲ್ಲಿ ಹೊಡೀತೀನಿ ಎಂದ ಶಾಸಕ! ಆಡಿಯೋ ವೈರಲ್​

ನೀರಾವರಿ ಇಲಾಖೆ ಚೀಫ್ ಇಂಜಿನಿಯರ್‌ಗೆ ಚಪ್ಪಲಿಯಲ್ಲಿ ಹೊಡೀತೀನಿ ಎಂದು ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ನಿಂದಿಸಿದ್ದಾರೆ ಎನ್ನಲಾದ 7 ತಿಂಗಳ ಹಿಂದಿನ ಆಡಿಯೋ ಒಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಇದನ್ನು ಓದಿ – 2024ರ ಲೋಕಸಭಾ ಚುನಾವಣೆಗೆ 8 ಮಂದಿ ಹಾಲಿ MPಗಳಿಗೆ ಬಿಜೆಪಿ ಟಿಕೆಟ್ ಇಲ್ಲ ? ಯುವಕರಿಗೆ ಆದ್ಯತೆ

ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಕಾಮಗಾರಿ ಬಿಲ್​ ಬಿಡುಗಡೆಗೆ ಸಂಬಂಧಿಸಿ ಕೆಬಿಜೆಎನ್​ಎಲ್​ ಮುಖ್ಯ ಇಂಜಿನಿಯರ್​ಗೆ ಶಾಸಕ ಶಿವನಗೌಡರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ.

‘ಪೂಜೆ ಮಾಡದೆ ಕ್ಷೇತ್ರದಲ್ಲಿ ಕಾಮಗಾರಿಯ ಬಿಲ್​ ಹೇಗೆ ಪಾವತಿಸಿದ್ದೀಯಾ? ಈ ಸಂಬಂಧ ಚರ್ಚಿಸಲು ಆರು ಬಾರಿ ಸಭೆ ಕರೆದರೂ ಬಂದಿಲ್ಲ’ ಎಂದು ಮುಖ್ಯ ಇಂಜಿನಿಯರ್​ ಆಗಿದ್ದ ಶಿವಕುಮಾರಗೆ ಅವಾಚ್ಯ ಶಬ್ದಗಳಿಂದ ಕೆ.ಶಿವನಗೌಡ ನಾಯಕ ನಿಂದಿಸಿದ್ದಾರೆ.

ಸಚಿವ ಸಂಪುಟ ಸಭೆ ವಿಸ್ತರಣೆ ಈ ಸಂದರ್ಭದಲ್ಲಿ 7 ತಿಂಗಳ ಹಿಂದೆ ನಡೆದಿದ್ದ ಸಂಭಾಷಣೆಯನ್ನು ಈಗ ವೈರಲ್​ ಮಾಡುತ್ತಿರುವುದರ ಹಿಂದೆ ಷಡ್ಯಂತ್ರ ಅಡಗಿದೆ ಎನ್ನುತ್ತಿದ್ದಾರೆ ಶಾಸಕ ಬೆಂಬಲಿಗರು.

ಈ ಹಿಂದೆ ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಗೆ ಇದೇ ಶಿವನಗೌಡ ನಾಯಕ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದು ಬಿಡಲಾಗುತ್ತಿದೆ.

ಅಧಿಕಾರಿ 6 ಬಾರಿ ಸಭೆಗೆ ಗೈರು :

ಕಾಮಗಾರಿಗೆ ಸಂಬಂಧಿಸಿ 7 ತಿಂಗಳ ಹಿಂದೆಯೇ ಶಾಸಕಾಂಗ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದೆ. ಅಧಿಕಾರಿಯೂ ಆರು ಬಾರಿ ಸಭೆಗೆ ಗೈರು ಹಾಜರಾಗಿದ್ದರಿಂದ ಆಕ್ರೋಶಗೊಂಡು ಮಾತನಾಡಿದ್ದೇನೆ. ಅಭಿವೃದ್ಧಿ ದೃಷ್ಟಿಯಿಂದ ಮಾತನಾಡಿದ್ದೇನೆ ಹೊರತು ಯಾವುದೇ ಬೇರೆ ಉದ್ದೇಶವಿಲ್ಲ. 7 ತಿಂಗಳ ಹಿಂದಿನ ಆಡಿಯೋ ಹೀಗೇಕೆ ವೈರಲ್​ ಮಾಡಲಾಗುತ್ತಿದೆ ಎನ್ನುವುದು ಗೊತ್ತಿಲ್ಲ.

ನೀರಾವರಿ ಇಲಾಖೆ

Team Newsnap
Leave a Comment
Share
Published by
Team Newsnap

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024