ಹಾಸನದ ಜೆಡಿಎಸ್ ಎಂಎಲ್ಸಿ ಅಭ್ಯರ್ಥಿ ಸೂರಜ್ ರೇವಣ್ಣಗೆ ಸಂಕಷ್ಟ ಎದುರಾಗಿದೆ.
ಸೂರಜ್ ವಿರುದ್ಧ ನಾಮಪತ್ರ ಸಲ್ಲಿಕೆ ವೇಳೆ ಮದುವೆ ಬಗ್ಗೆ ಮಾಹಿತಿ ಮುಚ್ಚಿಟ್ಟ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ನೋಟಿಸ್ ಇಂದು ಜಾರಿ ಮಾಡಿದೆ.
ಮದುವೆ ಬಗ್ಗೆ ಮತ್ತು ಪತ್ನಿ ಮಾಹಿತಿಯನ್ನು ಸೂರಜ್ ಗೌಪ್ಯವಾಗಿಟ್ಟಿದ್ದಾರೆ. ಅವರ ಹೆಸರಿನಲ್ಲಿರೋ ಆಸ್ತಿಯ ಬಗ್ಗೆಯೂ ಮಾಹಿತಿ ನೀಡಿಲ್ಲ. ಮದುವೆ ಕಾಲಂನಲ್ಲಿ ನನಗೆ ಅನ್ವಯ ಇಲ್ಲ ಅಂತಾ ನಮೂದು ಮಾಡಿದ್ದಾರೆ ಎಂದು ದೂರಲಾಗಿತ್ತು .
ಕರೆಂಟ್ ಅಕೌಂಟ್ ಮಾಹಿತಿ ಮುಚ್ಚಿಟ್ಟಿದ್ದಾಗಿಯೂ ಆರೋಪ ಮಾಡಿರುವ ಹರೀಶ್ ಕೆ. ಎಲ್ ಎನ್ನುವವರು ಈ ಬಗ್ಗೆ ಹಾಸನ ಡಿಸಿಗೆ ದೂರು ನೀಡಿದರು. ಆದರೆ ಹಾಸನ ಜಿಲ್ಲಾಧಿಕಾರಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ .
ಡಿಸಿ ಗಿರೀಶ್ರಿಂದ ನಿಯಮ ಉಲ್ಲಂಘನೆ ಆರೋಪ ಮಾಡಿ ಸೂರಜ್ ನಾಮಿನೇಷನ್ ತಿರಸ್ಕರಿಸಲು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿತ್ತು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಸೂರಜ್ ರೇವಣ್ಣ, ಡಿಸಿ, ಚುನಾವಣಾ ಆಯೋಗಕ್ಕೆ ತುರ್ತು ನೋಟಿಸ್ ನೀಡಿ, ಅರ್ಜಿಯ ವಿಚಾರಣೆಯನ್ನ ಸೋಮವಾರಕ್ಕೆ ಮುಂದೂಡಿದೆ.
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ