ಹಾಸನದ ಜೆಡಿಎಸ್ ಎಂಎಲ್ಸಿ ಅಭ್ಯರ್ಥಿ ಸೂರಜ್ ರೇವಣ್ಣಗೆ ಸಂಕಷ್ಟ ಎದುರಾಗಿದೆ.
ಸೂರಜ್ ವಿರುದ್ಧ ನಾಮಪತ್ರ ಸಲ್ಲಿಕೆ ವೇಳೆ ಮದುವೆ ಬಗ್ಗೆ ಮಾಹಿತಿ ಮುಚ್ಚಿಟ್ಟ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ನೋಟಿಸ್ ಇಂದು ಜಾರಿ ಮಾಡಿದೆ.
ಮದುವೆ ಬಗ್ಗೆ ಮತ್ತು ಪತ್ನಿ ಮಾಹಿತಿಯನ್ನು ಸೂರಜ್ ಗೌಪ್ಯವಾಗಿಟ್ಟಿದ್ದಾರೆ. ಅವರ ಹೆಸರಿನಲ್ಲಿರೋ ಆಸ್ತಿಯ ಬಗ್ಗೆಯೂ ಮಾಹಿತಿ ನೀಡಿಲ್ಲ. ಮದುವೆ ಕಾಲಂನಲ್ಲಿ ನನಗೆ ಅನ್ವಯ ಇಲ್ಲ ಅಂತಾ ನಮೂದು ಮಾಡಿದ್ದಾರೆ ಎಂದು ದೂರಲಾಗಿತ್ತು .
ಕರೆಂಟ್ ಅಕೌಂಟ್ ಮಾಹಿತಿ ಮುಚ್ಚಿಟ್ಟಿದ್ದಾಗಿಯೂ ಆರೋಪ ಮಾಡಿರುವ ಹರೀಶ್ ಕೆ. ಎಲ್ ಎನ್ನುವವರು ಈ ಬಗ್ಗೆ ಹಾಸನ ಡಿಸಿಗೆ ದೂರು ನೀಡಿದರು. ಆದರೆ ಹಾಸನ ಜಿಲ್ಲಾಧಿಕಾರಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ .
ಡಿಸಿ ಗಿರೀಶ್ರಿಂದ ನಿಯಮ ಉಲ್ಲಂಘನೆ ಆರೋಪ ಮಾಡಿ ಸೂರಜ್ ನಾಮಿನೇಷನ್ ತಿರಸ್ಕರಿಸಲು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿತ್ತು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಸೂರಜ್ ರೇವಣ್ಣ, ಡಿಸಿ, ಚುನಾವಣಾ ಆಯೋಗಕ್ಕೆ ತುರ್ತು ನೋಟಿಸ್ ನೀಡಿ, ಅರ್ಜಿಯ ವಿಚಾರಣೆಯನ್ನ ಸೋಮವಾರಕ್ಕೆ ಮುಂದೂಡಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ