Editorial

ಬದಲಾವಣೆಯ ದಿಕ್ಕು ದಾರಿ ತಪ್ಪುತ್ತಿದೆಯೇ?

ಅಮ್ಮನನ್ನು ಪ್ರತ್ಯಕ್ಷ ದೇವರೆಂದು ಎಲ್ಲಾ ಸಾಹಿತ್ಯದ ಸಂದೇಶಗಳಲ್ಲೂ ಮೊದಲಿನಿಂದಲೂ ವರ್ಣಿಸಲಾಗುತ್ತಿದೆ. ಆದರೆ ಇತ್ತೀಚೆಗೆ ಅಪ್ಪನನ್ನು ಸಹ ವರ್ಣಿಸಲು ಪ್ರಾರಂಭವಾಗಿದೆ.

ಹಿಂದಿನ ಬಹುತೇಕ ಸಿನಿಮಾಗಳಲ್ಲಿ – ಹಾಡುಗಳಲ್ಲಿ ತಾಯಿಯನ್ನು ಕರುಳು ಹಿಂಡುವಂತೆ ಚಿತ್ರಿಸಲಾಗುತ್ತಿತ್ತು. ಆದರೆ ಇತ್ತೀಚೆಗೆ ತಂದೆಯ ತ್ಯಾಗವನ್ನು ಸಹ ಕಥೆ ಹಾಡುಗಳಲ್ಲಿ ಚಿತ್ರಿಸಲಾಗುತ್ತಿದೆ.

ಎಲ್ಲಾ ಧಾರಾವಾಹಿ ಕಥೆ ಕಾದಂಬರಿ ಸಿನಿಮಾಗಳಲ್ಲಿ ಪುರುಷರನ್ನು ಮಾತ್ರವೇ ಖಳ ಪಾತ್ರಗಳಲ್ಲಿ ನಿರೂಪಿಸಲಾಗುತ್ತಿತ್ತು. ಇತ್ತೀಚೆಗೆ ಮಹಿಳೆಯರ ಪಾತ್ರಗಳನ್ನು ಸಹ ವಿಲನ್ ಗಳಾಗಿ ನಿರೂಪಿಸಲಾಗುತ್ತಿದೆ.

ಮೊದಲೆಲ್ಲಾ ಪತಿಯಿಂದ ಪತ್ನಿಯ ಕೊಲೆ ಎಂಬುದನ್ನು ಮಾತ್ರ ಕೇಳು ಕೇಳುತ್ತಿದ್ದೆವು. ಇತ್ತೀಚೆಗೆ ಪತ್ನಿಯಿಂದ ಪತಿ ಕೊಲೆಯ ಪಿತೂರಿ ಎಂಬುದನ್ನು ಸಹ ನೋಡುತ್ತಿದ್ದೇವೆ.

ಪ್ರೇಮಿಗಳ ವಿಷಯದಲ್ಲಿ ಗಂಡಿನಿಂದ ಹೆಣ್ಣಿಗೆ ಮೋಸ ವಂಚನೆಯ ವಿಷಯಗಳು ಮಾತ್ರ ಸುದ್ದಿಯಾಗುತ್ತಿದ್ದವು. ಇತ್ತೀಚೆಗೆ ಹೆಣ್ಣುಗಳಿಂದ ಸಹ ಪುರುಷ ಮೇಲೆ ಮೋಸ ದೌರ್ಜನ್ಯದ ಕೇಸು ದಾಖಲಾಗುತ್ತಿವೆ.

ಜೈಲುಗಳಲ್ಲಿ, ಆಸ್ಪತ್ರೆಯ ರೋಗಿಗಳಲ್ಲಿ, ಬಾರುಗಳಲ್ಲಿ, ಕಳ್ಳತನ ಅಪರಾಧಗಳಲ್ಲಿ ಕೇವಲ ಪುರುಷರು ಮಾತ್ರ ಹೆಚ್ಚು ಕಾಣುತ್ತಿದ್ದರು. ಆದರೆ ಇತ್ತೀಚೆಗೆ ಮಹಿಳೆಯರ ಸಂಖ್ಯೆ ಸಹ ಇವುಗಳಲ್ಲಿ ಹೆಚ್ಚುತ್ತಿದೆ.

ಇದು ಪುರುಷರ ಮಹಿಳಾ ದ್ವೇಷದ ಆರೋಪ ಎಂದು ದಯವಿಟ್ಟು ನಿರ್ಲಕ್ಷಿಸದಿರಿ.
ಮಹಿಳೆಯರ ಆಧುನಿಕತೆಯ – ಸಮಾನತೆಯ ಮಾರ್ಗದಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಎಚ್ಚರಿಕೆಯ ಸಂದರ್ಭವಿದು.

ಕುತೂಹಲಕ್ಕಾಗಿ ಪ್ರಾಥಮಿಕ ಶಾಲೆಯ ಬಹಳಷ್ಟು ಮಕ್ಕಳನ್ನು ಮಾತನಾಡಿಸಿದ್ದೇನೆ. ಅವರಲ್ಲಿ ಹೆಚ್ಚು ಮಕ್ಕಳು ಹೇಳಿದ್ದು Father is sweet mother is bit harsh. ಹೌದು ಮೊದಲು ಅಪ್ಪ ಮಕ್ಕಳನ್ನು ಜಾಸ್ತಿ ಹೊಡೆಯುವುದು ಕಾಣುತ್ತಿತ್ತು. ಈಗ ಅಮ್ಮಂದಿರು ಮಕ್ಕಳಿಗೆ ಹೊಡೆಯುವುದನ್ನು ಗಮನಿಸಬಹುದು.

ಹಾಗೆಂದು ಪುರುಷರೆಲ್ಲಾ ಒಳ್ಳೆಯವರಾಗಿದ್ದಾರೆ ಮಹಿಳೆಯರು ಕೆಟ್ಟವರಾಗುತ್ತಿದ್ದಾರೆ ಎಂದು ಭಾವಿಸಬೇಕಿಲ್ಲ. ಆದರೆ ಬದಲಾವಣೆ ಹಂತದಲ್ಲಿ ದಾರಿ ತಪ್ಪುತ್ತಿರುವ ಗುಣಲಕ್ಷಣಗಳ ಒಂದು ಪ್ರಾರಂಭಿಕ ಹಂತ ಎಂದು ಅರ್ಥಮಾಡಿಕೊಳ್ಳಬೇಕು. ವಾದ ಮಾಡಲು ಪ್ರಾರಂಭಿಸಿದರೆ ಗಂಡಸರ ಅಸಂಖ್ಯಾತ ತಪ್ಪುಗಳನ್ನು ತೋರಿಸಬಹುದು. ಆದರೆ ಆ ತಪ್ಪುಗಳು ಹೆಣ್ಣು ಮಕ್ಕಳ ತಪ್ಪುಗಳಿಗೆ ಸಮರ್ಥನೆಯಾಗಬಾರದು. ಅನುಭವದ ಪಾಠದಿಂದ ಅಮೃತ ಹೊರಬರಬೇಕೆ ಹೊರತು ವಿಷವಲ್ಲ.

ಸಾಮಾಜಿಕ ಬದಲಾವಣೆಯ ಸಂದರ್ಭಗಳಲ್ಲಿ ಈ ರೀತಿಯ ತಳಮಳಗಳು ಸಹಜ. ಕಾಲ ಸರಿದಂತೆ ಎಲ್ಲವೂ ಒಂದು ನಿಯಂತ್ರಣಕ್ಕೆ ಬರಬಹುದು ಎಂಬ ಆಶಾಭಾವನೆಯೊಂದೊಂದಿಗೆ

  • ವಿವೇಕಾನಂದ. ಹೆಚ್.ಕೆ.
Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024