ಕೇರಳದ ಇಬ್ಬರು ಖದೀಮರು ಚಿನ್ನದ ಗಟ್ಟಿ ಸಾಗಿಸಲು ಬೇರೆ ಮಾರ್ಗವೇ ಇಲ್ಲದೇ ಒಳ ಉಡುಪಿನಲ್ಲಿ 2 ಕೆಜಿ 15 ಗ್ರಾಂ ಚಿನ್ನವನ್ನು ಸಾಗಿಸುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳ ಕೈಗೆ ತಗಲು ಹಾಕಿಕೊಂಡಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ.
ಒಳ ಉಡುಪಿನಲ್ಲಿ 1.08 ಕೋಟಿ ರೂ. ಮೌಲ್ಯದ 2.15 ಕೆ.ಜಿ ತೂಕದ ಚಿನ್ನದ ಗಟ್ಟಿಯನ್ನು ಸಾಗಿಸುತ್ತಿದ್ದ ಕೇರಳ ಮೂಲದ ಇಬ್ಬರು ವ್ಯಕ್ತಿಗಳನ್ನು ಕಸ್ಟಮ್ ಅಧಿಕಾರಿಗಳು ಬಂಧಿಸಿ, ತಪಾಸಣೆ ಮಾಡಿದಾಗ ಈ ಅಕ್ರಮ ಬಯಲಿಗೆ ಬಂತು.
ಬಂಧಿತ ಆರೋಪಿಗಳು ಕೇರಳದ ಫೈಜಲ್ ತೊಟ್ಟಿ ಮತ್ತು ಮೊಹಮ್ಮದ್ ಶೋಹೈಬ್ ಎಂದು ಗೊತ್ತಾಗಿದೆ.
ಶಾರ್ಜಾದಿಂದ ಮಂಗಳೂರಿಗೆ ವಿಮಾನದಲ್ಲಿ ಬಂದಾಗ ಸಂಶಯದ ಮೇಲೆ ಕಸ್ಟಮ್ ಅಧಿಕಾರಿಗಳು ತಪಾಸಣೆ ನಡೆಸುವಾಗ 24 ಕ್ಯಾರೆಟ್ 2.154 ಕೆ.ಜಿ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತ ಆರೋಪಿಗಳನ್ನು ಪೊಲೀಸರ ವಶದಲ್ಲಿದ್ದಾರೆ. ವಿಚಾರಣೆ ನಡೆಯುತ್ತದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು