ದಸರಾ ಹಬ್ಬದ ಆರಂಭದ ದಿನವಾದ ಗುರುವಾರ ಬೆಳಿಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭ್ರಷ್ಟರ ಬೇಟೆಗೆ ಮುಂದಾಗಿರುವ 300ಕ್ಕೂ ಹೆಚ್ಚು ಅಧಿಕಾರಿಗಳಿಂದ 50ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಪ್ರಮುಖ ಉದ್ಯಮಿಗಳ ಮನೆ, ಉದ್ಯಮಿಗಳ ಕಂಪನಿ, ಚಾರ್ಟರ್ಡ್ ಅಕೌಂಟೆಂಟ್ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಂಗಳೂರು & ಗೋವಾ ವಲಯ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಮೂಲಗಳ ಪ್ರಕಾರ ಕರ್ನಾಟಕ ನೀರಾವರಿ ಇಲಾಖೆ ಗುತ್ತಿಗೆದಾರರ ಮನೆ ಮೇಲೂ ದಾಳಿ ನಡೆಸಿದ್ದಾರೆ ಎಂದು ಗೊತ್ತಾಗಿದೆ .