Main News

ಮಹಾರಾಷ್ಟ್ರದಲ್ಲಿ ಐಟಿ ದಾಳಿ; 56 ಕೋಟಿನಗದು, 32 ಕೆಜಿ ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿ ಪತ್ತೆ!

ಮಹಾರಾಷ್ಟ್ರದಲ್ಲಿ ಬೃಹತ್ ಐಟಿ ದಾಳಿ ನಡೆದಿದೆ 56 ಕೋಟಿ ನಗದು, 32 ಕೆಜಿ ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿಯನ್ನು ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಹಾರಾಷ್ಟ್ರದ ಜಲ್ನಾದಲ್ಲಿ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಕೆಲವು ವ್ಯಾಪಾರಿಗಳ ಗುಂಪುಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಇದನ್ನು ಓದಿ –ದ್ವಿತೀಯ ಪಿಯು ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ: ನಾಳೆಯಿಂದ ಆ.25ರವರೆಗೆ ಪರೀಕ್ಷೆ 

ಈ ವೇಳೆ ಸುಮಾರು 390 ಕೋಟಿ ರೂಗಳಷ್ಟು ಬೇನಾಮಿಆಸ್ತಿ ಅಥವಾ ಲೆಕ್ಕ ರಹಿತ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

56 ಕೋಟಿ ರೂ ನಗದು ಮತ್ತು 14 ಕೋಟಿ ರೂ ಮೌಲ್ಯದ 32 ಕೆಜಿ ಚಿನ್ನ, ಮುತ್ತುಗಳು ಮತ್ತು ವಜ್ರಗಳು ಸೇರಿವೆ. ದಾಳಿಯ ವೇಳೆ ಅಧಿಕಾರಿಗಳು ಕೆಲವು ಆಸ್ತಿ ದಾಖಲೆಗಳು ಮತ್ತು ಡಿಜಿಟಲ್ ಡೇಟಾವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಉಕ್ಕು, ಬಟ್ಟೆ ಮತ್ತು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಎರಡು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ವಸತಿ ಮತ್ತು ಅಧಿಕೃತ ಆವರಣದಲ್ಲಿ ಆಗಸ್ಟ್ 1 ಮತ್ತು 8 ರ ನಡುವೆ ದಾಳಿಗಳನ್ನು ನಡೆಸಲಾಗಿತ್ತು. ಇದೀಗ ಈ ದಾಳಿಯಲ್ಲಿ ವಶಕ್ಕೆ ಪಡೆಯಲಾದ ಸ್ವತ್ತುಗಳ ದತ್ತಾಂಶವನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ದಾಳಿಯ ವೇಳೆ ವಶಪಡಿಸಿಕೊಂಡ ನಗದನ್ನು ನಿಖರವಾಗಿ ಲೆಕ್ಕ ಹಾಕಲು ಅಧಿಕಾರಿಗಳಿಗೆ ಸುಮಾರು 13 ಗಂಟೆಗಳು ಬೇಕಾಯಿತು ಎನ್ನಲಾಗಿದೆ.

ಈ ವ್ಯಾಪಾರ ಗುಂಪುಗಳಿಂದ ಆಪಾದಿತ ತೆರಿಗೆ ವಂಚನೆಯ ಬಗ್ಗೆ ಮಾಹಿತಿ ಪಡೆದ ನಂತರ, ಆದಾಯ ತೆರಿಗೆ ಇಲಾಖೆಯು ಶೋಧ ಕಾರ್ಯಾಚರಣೆಗಾಗಿ ರಾಜ್ಯದಾದ್ಯಂತ 260 ಅಧಿಕಾರಿಗಳನ್ನು ಒಳಗೊಂಡ ಐದು ತಂಡಗಳನ್ನು ರಚಿಸಿತ್ತು. ಕಾರ್ಯಾಚರಣೆಯಲ್ಲಿ 120 ಕ್ಕೂ ಹೆಚ್ಚು ವಾಹನಗಳನ್ನು ಬಳಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Team Newsnap
Leave a Comment

Recent Posts

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024