Trending

ಐಟಿ ಉದ್ಯೋಗಿಗಳನ್ನು ಕತ್ತೆಯಂತೆ ದುಡಿಸಿಕೊಳ್ಳುವಂತಿಲ್ಲ – ಕೆಲಸದ ಸಮಯ ನಿಗದಿ ಮಾಡಿ – ಕೇಂದ್ರ

ಐಟಿ ಉದ್ಯೋಗಿಗಳನ್ನು ವರ್ಕ್ ಫ್ರಮ್ ಹೋಂ ನೆಪದಲ್ಲಿ ಕತ್ತೆಗಳಂತೆ ದುಡಿಸಿಕೊಳ್ಳುವುದಕ್ಕೆ ಮುಂದಾಗಿರುವ ಐಟಿ ಕಂಪನಿಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ.

ಐಟಿ ವಲಯದಲ್ಲಿ ವರ್ಕ್ ಫ್ರಮ್ ಹೋಮ್ ಮಾಡಲು ಉದ್ಯೋಗಿಗಳಿಗೆ ಬೆಳಿಗ್ಗೆ 9 ರಿಂದ ರಾತ್ರಿ 10ರವರೆಗೆ ದುಡಿಸಿಕೊಳ್ಳುವುದು ಸರಿ ಅಲ್ಲ. ಬದಲಿಗೆ ಕೆಲಸದ ಸಮಯವನ್ನು ನಿಗದಿ ಮಾಡಲು ಕೇಂದ್ರ ಕಾರ್ಮಿಕ ಸಚಿವಾಲಯವು ನಿರ್ಧರಿಸಿದೆ.

ಕೈಗಾರಿಕಾ ಸಂಬಂಧಗಳ ಸಂಹಿತೆ 2020ರ 29ನೇ ಪರಿಚ್ಛೇದದ ಪ್ರಕಾರ ಕೇಂದ್ರ ಸರ್ಕಾರ ಉತ್ಪಾದನಾ ವಲಯ, ಗಣಿ ವಲಯ ಮತ್ತು ಸೇವಾ ವಲಯಗಳಿಗೆ ಮಾದರಿ ಆದೇಶಗಳನ್ನು ಪ್ರಕಟಿಸಿದೆ ಎಂದು ಕಾರ್ಮಿಕ ಸಚಿವಾಲಯ ತಿಳಿಸಿದೆ.

ಸೇವಾ ವಲಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಸೇವಾ ವಲಯಕ್ಕೆ ಪ್ರತ್ಯೇಕ ಮಾದರಿ ಸ್ಟ್ಯಾಂಡಿಂಗ್ ಆರ್ಡರ್ ಗಳನ್ನು ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ ಎಂದು ಅದು ತಿಳಿಸಿದೆ.

ಕರಡು ಸ್ಥಾಯಿ ಆದೇಶಗಳ ಪ್ರಕಾರ, ವಲಯ-ನಿರ್ದಿಷ್ಟ ಅಗತ್ಯಗಳನ್ನು ಪರಿಗಣಿಸಿ ಕೆಲವು ಫ್ಲೆಕ್ಸಿಬಿಲಿಟಿಯನ್ನು ಒದಗಿಸುವಾಗ ಮೂರು ಮಾದರಿ ಸ್ಥಾಯಿ ಆದೇಶಗಳಲ್ಲಿ ಏಕರೂಪತೆ ಯನ್ನು ಕಾಯ್ದು ಕೊಳ್ಳಲಾಗಿದೆ.
ಮುಂದಿನ 30 ದಿನಗಳಲ್ಲಿ ಸಾರ್ವಜನಿಕ ಅಭಿಪ್ರಾಯಗಳಿಗೆ ಸರ್ಕಾರವು ಸ್ಥಾಯಿ ಆದೇಶಗಳನ್ನು ಹೊರಡಿಸಿದೆ.

ಗಣಿ ಕಾರ್ಮಿಕರಿಗೆ ರೈಲು ಪ್ರಯಾಣ ಸೌಲಭ್ಯ:

ಗಣಿ ಗಾರಿಕೆ ವಲಯದ ಕಾರ್ಮಿಕರಿಗೆ ರೈಲು ಪ್ರಯಾಣ ಸೌಲಭ್ಯ ವಿಸ್ತರಿಸಲಾಗಿದೆ. ಸದ್ಯ, ಕಲ್ಲಿದ್ದಲು ಗಣಿಗಳಲ್ಲಿ ಮಾತ್ರ ಕಾರ್ಮಿಕರು ಇದನ್ನು ಪಡೆಯುತ್ತಿದ್ದಾರೆ.

ಏ. 1 ರಿಂದ ಕಾರ್ಮಿಕ ಸಂಹಿತೆ ಜಾರಿ :

ಕೈಗಾರಿಕಾ ಸಂಬಂಧಗಳ ಸಂಹಿತೆಯು ಕಾರ್ಮಿಕ ಸಚಿವಾಲಯವು ನಿಯಮಗಳನ್ನು ಅಂತಿಮಗೊಳಿಸುವ ನಾಲ್ಕು ಕಾರ್ಮಿಕ ಸಂಹಿತೆಗಳಲ್ಲಿ ಒಂದಾಗಿದೆ. 29 ಕಾರ್ಮಿಕ ಕಾನೂನುಗಳನ್ನು ಒಳಗೊಂಡ ನಾಲ್ಕು ಮಸೂದೆಗಳನ್ನು 2021ರ ಏಪ್ರಿಲ್ 1ರಿಂದ ಜಾರಿಗೆ ತರಲು ಯೋಜನೆ ರೂಪಿಸುತ್ತಿದೆ. ಇತರ ಮೂರು ಕೋಡ್ ಗಳೆಂದರೆ ಸಾಮಾಜಿಕ ಭದ್ರತೆಯ ಸಂಹಿತೆ, ವೇತನ ಸಂಹಿತೆ ಮತ್ತು ಉದ್ಯೋಗ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಮೇಲಿನ ಸಂಹಿತೆ.

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024