Main News

ಐಟಿ ಕ್ಷೇತ್ರ: ಶಾಶ್ವತ ವರ್ಕ್​ ಫ್ರಮ್ ಹೋಂ – ಕೇಂದ್ರ ಉತ್ತೇಜನ

ಟೆಕ್ ಉದ್ಯಮಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಇಂದು ಕೆಲ ಪ್ರಮುಖ ಸುಧಾರಣೆಗಳನ್ನು ಘೋಷಣೆ ಮಾಡಿದೆ.

ರಿಜಿಸ್ಟ್ರೇಷನ್​ ಹಾಗೂ ಕಂಪ್ಲಯನ್ಸ್​ನ ಅಗತ್ಯತೆಗಳಿಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನು ತೆಗೆದು ಹಾಕುವ ಮೂಲಕ, ಐಟಿ ಹಾಗೂ ಬಿಪಿಓ ಕಂಪನಿಗಳಲ್ಲಿ ಉದ್ಯೋಗಿಗಳು ಶಾಶ್ವತವಾಗಿ ವರ್ಕ್​ ಫ್ರಮ್ ಹೋಂ ಮಾಡಲು ಅನುಕೂಲ ಮಾಡಿಕೊಟ್ಟಿದೆ.

ನಿನ್ನೆ ಟೆಲಿಕಾಮ್ ಇಲಾಖೆ, ಪ್ರಮುಖ ಸುಧಾರಣೆಗಳನ್ನು ತರಲಾಗಿದೆ. ಇತರೆ ಸೇವಾ ಪೂರೈಕೆದಾರರು (Other Service Providers-OSP)ಗೆ ರೆಜಿಸ್ಟ್ರೇಷನ್​​​ ಅಗತ್ಯತೆಯನ್ನು ಸಂಪೂರ್ಣವಾಗಿ ತೆಗೆದುಹಾಕಿದೆ.

 ಡೇಟಾ ಸಂಬಂಧಿತ ಕೆಲಸದಲ್ಲಿ ತೊಡಗಿರುವ ಬಿಪಿಓ ಉದ್ಯಮವನ್ನು, ಇತರೆ ಸೇವಾ ಪೂರೈಕೆದಾರರ ನಿಯಮಗಳ ವ್ಯಾಪ್ತಿಯಿಂದ ಹೊರ ತೆಗೆಯಲಾಗಿದೆ. ಜೊತೆಗೆ ಬ್ಯಾಂಕ್ ಗ್ಯಾರಂಟಿಗಳ ಠೇವಣಿ, ಸ್ಥಿರ ಐಪಿಗಳು, ಆಗಾಗ್ಗೆ ವರದಿ ಮಾಡುವ ಜವಾಬ್ದಾರಿ, ನೆಟ್‌ವರ್ಕ್ ಡಯಾಗ್ರಾಮ್ ಪ್ರಕಟಣೆ, ದಂಡ ವಿಧಿಸುವಿಕೆ ಮುಂತಾದ ಅಗತ್ಯತೆಗಳನ್ನು ಕೂಡ ತೆಗೆದುಹಾಕಲಾಗಿದೆ.

ಕೆಲಸದ ಆಯ್ಕೆಯ ಅವಕಾಶ:

ಕಂಪನಿಗಳು ವರ್ಕ್​ ಫ್ರಮ್​ ಹೋಂ ಅಥವಾ ವರ್ಕ್​ ಫ್ರಮ್ ಎನಿವೇರ್ ಪಾಲಿಸಿ (ಮನೆಯಿಂದ ಅಥವಾ ಎಲ್ಲಿಂದ ಬೇಕಾದ್ರೂ ಕೆಲಸ ಮಾಡುವ ಆಯ್ಕೆ) ಅಳವಡಿಸಿಕೊಳ್ಳಲು ತೊಡಕಾಗುವ ಇತರೆ ಹಲವು ನಿಯಮಗಳನ್ನು ಕೂಡ ತೆಗೆಯಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತದಲ್ಲಿ ಸುಗಮ ವ್ಯಾಪಾರಕ್ಕೆ ಉತ್ತೇಜನ ನೀಡಲು ಹಾಗೂ ದೇಶವನ್ನು ಟೆಕ್​ ಹಬ್​ ಮಾಡಲು ನಾವು ಬದ್ಧರಾಗಿದ್ದೇವೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ, ಸರ್ಕಾರದ ಈ ಕ್ರಮದ ಕುರಿತಾಗಿ ಟ್ವೀಟ್ ಮಾಡಿದ್ದಾರೆ.

ಐಟಿ ಕ್ಷೇತ್ರಕ್ಕೆ ಉತ್ತೇಜನ

ಕೇಂದ್ರ ಐಟಿ ಸಚಿವ ರವಿಶಂಕರ್ ಪ್ರಸಾದ್​ ಕೂಡ ಟ್ವೀಟ್ ಮಾಡಿ, ಸರ್ಕಾರದ ಈ ನಿರ್ಧಾರದಿಂದ ಐಟಿ,  ಮಾಹಿತಿ ತಂತ್ರಜ್ಞಾನ ಸೇವೆ (ITeS) ಉದ್ಯಮ ಹಾಗೂ ಬಿಪಿಓ ಇಂಡಸ್ಟ್ರಿಗೆ ಉತ್ತೇಜನ ಸಿಗಲಿದೆ. ಭಾರತದಲ್ಲಿ ಮನೆಯಿಂದಲೇ ಕೆಲಸ ಮಾಡಲು ಸ್ನೇಹಪರ ಆಡಳಿತವನ್ನು ಸೃಷ್ಟಿಸಲಿದೆ ಎಂದು ಹೇಳಿದ್ದಾರೆ.

Team Newsnap
Leave a Comment
Share
Published by
Team Newsnap
Tags: it

Recent Posts

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024