Editorial

ನಲಿದಾಡುವ ಜೀವ ಪ್ರೀತಿಯ ಸಿದ್ದಗಂಗಾ ಶ್ರೀಗಳ ನೆನೆಯುವುದೇ ಒಂದು ಭಾಗ್ಯ

ನಡೆದಾಡುವ ದೇವರಲ್ಲ,
ನಲಿದಾಡುವ ಜೀವಪ್ರೀತಿಯ ನಿಜ ಮನುಷ್ಯನಾಗಿದ್ದ ಸಿದ್ದಗಂಗೆಯ
ಶಿವಕುಮಾರ ಸ್ವಾಮಿ ಎಂಬ ಶಿವಣ್ಣ……………

ಸಾಧಾರಣ ಕುಟುಂಬದ ಬಾಲಕನೊಬ್ಬ ಉಚಿತ ವಸತಿ ಶಾಲೆಯ ವಿದ್ಯಾರ್ಥಿಯಾಗಿ ತನ್ನ ವಿನಯ ಪ್ರತಿಭೆ ಜ್ಞಾನ ನಡವಳಿಕೆಯಿಂದ – ಪರಿಸ್ಥಿತಿ ನಿರ್ಮಿಸಿದ ಅವಕಾಶದಿಂದ ಸನ್ಯಾಸತ್ವ ಸ್ವೀಕರಿಸಿ ಸಿದ್ದಗಂಗೆ ಎಂಬ ಸ್ಥಳದ ಸಣ್ಣ ಮಠ ಒಂದಕ್ಕೆ ಮಠಾಧಿಪತಿಯಾಗುತ್ತಾನೆ.

ನಂತರ ಅವನು ಅವರಾಗಿ ಸ್ವಾಮಿಗಳಾಗಿ ತನ್ನ ಕಾಯಕ ಪ್ರಾರಂಭಿಸುತ್ತಾರೆ.

ಸ್ವಾತಂತ್ರ್ಯ ಪೂರ್ವದ ದಿನಗಳಲ್ಲಿ ಮತ್ತು ಸ್ವಾತಂತ್ರ್ಯ ನಂತರವು ಕೂಡ ವಿದ್ಯೆ ಮತ್ತು ಊಟಕ್ಕೆ ನಿಕಟ ಸಂಬಂಧವಿರುತ್ತದೆ. ಮೊದಲು ಊಟ ನಂತರ ಶಾಲೆ ‌ಎಂಬ ವಾತಾವರಣ. ಇದನ್ನು ಗ್ರಹಿಸಿದ ಶಿವಕುಮಾರ ಸ್ವಾಮಿಗಳು ತನ್ನ ಮೂಲ ಮಠದ ಮೂಲ ಧ್ಯೇಯವಾದ ಅನ್ನ ದಾಸೋಹ ಮತ್ತು ಅಕ್ಷರ ದಾಸೋಹದ ಮಹತ್ವ ಅರಿತು ಅದಕ್ಕಾಗಿ ಇಡೀ ಬದುಕನ್ನು ಸಮರ್ಪಿಸುತ್ತಾರೆ.

ಖಾವಿ ತೊಟ್ಟು ಬಹುತೇಕ ಭಿಕ್ಷೆಗೆ ಹತ್ತಿರದ ದಾನ ಬೇಡುತ್ತಾ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ವಸತಿ ಮತ್ತು ಶಿಕ್ಷಣದ ಅವಕಾಶ ಕಲ್ಪಿಸುತ್ತಾರೆ.

ಒಂದು ಹಂತದ ನಂತರ ‌ಆ ಸಂಸ್ಥೆ ತಾನಾಗಿಯೇ ಬೆಳೆಯುತ್ತಾ ಬೃಹದಾಕಾರ ತಾಳುತ್ತದೆ. ಅಲ್ಲಿ ಕಲಿತ ಅನೇಕರು ವಿಶ್ವದ ನಾನಾ ಕಡೆ ಒಳ್ಳೆಯ ಸ್ಥಾನಮಾನ ಗಳಿಸುತ್ತಾರೆ.

ಭಾರತದಲ್ಲಿ ‌ಸಿದ್ದಗಂಗೆ ಶಿಕ್ಷಣ ಮತ್ತು ಅನ್ನದಾನದಲ್ಲಿ ಮಹತ್ವದ ಸ್ಥಾನ ಗಳಿಸುತ್ತದೆ. ರಾಷ್ಟ್ರಪತಿ ಪ್ರಧಾನಿಗಳು ಸಹ ಇಲ್ಲಿಗೆ ಭೇಟಿ ನೀಡುತ್ತಾರೆ. ರಾಜ್ಯದ ಎಲ್ಲಾ ಅಧಿಕಾರಸ್ಥರು ಸಹ ಶಿವಕುಮಾರ ಸ್ವಾಮಿಗಳ ಆಶೀರ್ವಾದ ಪಡೆಯಲು ಬರುತ್ತಾರೆ.

ಮುಂದೆ ಸಂಸ್ಥೆ ದೊಡ್ಡದಾಗಿ ಹಣಕಾಸಿನ ವ್ಯವಹಾರ ಹೆಚ್ಚಾದಂತೆ ‌ಸಹಜವಾಗಿ ಭ್ರಷ್ಟರು ಮತ್ತು ರಾಜಕಾರಣಿಗಳು ಒಳ ನುಸುಳುತ್ತಾರೆ. ಉತ್ತರಾಧಿಕಾರಿ ಗೌರಿಶಂಕರ ಸ್ವಾಮಿಗಳು ಮತ್ತು ಇವರ ಮಧ್ಯೆ ಗಲಾಟೆ ಗಲಭೆ ಗೊಂದಲ ಹೊಡೆದಾಟ ಪೋಲೀಸ್ ನ್ಯಾಯಾಲಯ ಹೀಗೆ ಸುಮಾರು ಒಂದು ದಶಕದಷ್ಟು ಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುತ್ತದೆ. ಕಾಲಾ ನಂತರದಲ್ಲಿ ಅದು ಒಂದಷ್ಟು ಹೊಂದಾಣಿಕೆಯಿಂದ ತಹ ಬಂದಿಗೆ ಬರುತ್ತದೆ.

ಆದರೆ ಅಲ್ಲಿಂದ ಮಠದ ಮೇಲೆ ಒಂದಷ್ಟು ಪಕ್ಷ ರಾಜಕೀಯವೂ ನಿಯಂತ್ರಣ ‌ಸಾಧಿಸುತ್ತದೆ.

ಏನೇ ಆದರೂ ಬದುಕಿನ ಕೆಲವು ವರ್ಷಗಳನ್ನು ಹೊರತು ಪಡಿಸಿ ಶಿವಕುಮಾರರು ಉಳಿದ ಬಹುತೇಕ ಸಮಯದಲ್ಲಿ ತಟಸ್ಥ ನೀತಿಯನ್ನು ಅನುಸರಿಸಿ ಯಾವುದೇ ಪಕ್ಷಪಾತಕ್ಕೆ ಬಹಿರಂಗವಾಗಿ ಅವಕಾಶ ಕೊಡುವುದಿಲ್ಲ.

ಶಿಸ್ತಿನ ಬದುಕಿನಿಂದ ತಮಗೆ ಲಭಿಸಿದ ದೀರ್ಘಕಾಲದ ಆಯಸ್ಸು ಮತ್ತು ಆರೋಗ್ಯವನ್ನು ಸಂಪೂರ್ಣವಾಗಿ ಮತ್ತು ಅತ್ಯುತ್ತಮ ‌ರೀತಿಯಲ್ಲಿ ಉಪಯೋಗಿಸಿಕೊಳ್ಳುತ್ತಾರೆ.

ಒಬ್ಬ ಸಾಮಾನ್ಯ ವ್ಯಕ್ತಿಯ ಅಸಾಮಾನ್ಯ ಸಾಧನೆ ಇದು ಎಂದು ಮುಂದಿನ ಪೀಳಿಗೆಗೆ ಅರ್ಥವಾಗಬೇಕೆ ಹೊರತು ಅವರು ದೇವರೆಂಬ ಪವಾಡ ಪುರುಷ ‌ಎಂದು ಬಿಂಬಿತವಾಗಬಾರದು. ಅದು ಅಪಾಯಕಾರಿ ಮತ್ತು ಐತಿಹಾಸಿಕ ವಂಚನೆಯಾಗುತ್ತದೆ.

ಹೇಗೆಂದರೆ,
ನಮ್ಮ ಜನರಲ್ಲಿ ದೇವರೆಂಬ ಕಲ್ಪನೆ…

ಅತಿಮಾನುಷ ಸರ್ವಶಕ್ತ ಸರ್ವಾಂತರ್ಯಾಮಿ ಮಾಯಾವಿ ಬೇಡಿದ್ದನ್ನು ಪೂರೈಸುವವನು.
ಆತ ಅದೃಶ್ಯವಾಗಿಯೇ ಎಲ್ಲವನ್ನೂ ನಿಯಂತ್ರಿಸ ಬಲ್ಲ ಶಕ್ತಿ ಎಂದು ನಂಬಲಾಗಿದೆ. ಅದಕ್ಕೆ ಮೂರ್ತರೂಪ ನೀಡಿ ಭಕ್ತಿಯ ಕಡ್ಡಿ ಕರ್ಪೂರ ಹೂವಿನ ಅಲಂಕಾರ ಮಾಡಿ ನಮಸ್ಕರಿಸಲಾಗುತ್ತದೆ. ಆರಾಧನಾ ಭಾವ ಮಾತ್ರ ಅಲ್ಲಿ ಉಳಿಯುತ್ತದೆ.

ಆದರೆ ಈ ಬಡ ಶಿವಣ್ಣ ಆ ಕಲ್ಪನೆಯ ‌ದೇವರು ಮಾಡದ ಕೆಲಸವನ್ನು ಮಾಡಿದ್ದಾರೆ. ಆ ದೇವರು ಕೊಡಲು ಸಾಧ್ಯವಾಗದ ಅನ್ನ ಆಹಾರ ಶಿಕ್ಷಣ ಆಶ್ರಯ ಉದ್ಯೋಗವನ್ನು ಲಕ್ಷಾಂತರ ಬಡ ನಿರ್ಗತಿಕರಿಗೆ ಜನರಿಗೆ ನೀಡಿ ವಾಸ್ತವದಲ್ಲಿ ಮನುಷ್ಯನೊಬ್ಬ ಸಹಜವಾಗಿಯೇ ಇದನ್ನು ಸಾಧಿಸಬಹುದು ಎಂಬುದನ್ನು ಪ್ರಾಯೋಗಿಕವಾಗಿ ತೋರಿಸಿಕೊಟ್ಟಿದ್ದಾರೆ.

ಅದನ್ನು ನಾವು ಅರ್ಥಮಾಡಿಕೊಂಡು ಅದರಿಂದ ಸ್ಪೂರ್ತಿ ಪಡೆದು ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕೆ ಹೊರತು ನಡೆದಾಡುವ ದೇವರೆಂದು, ಅವರ ಸಹಜ ಸ್ವಾಭಾವಿಕ ಮತ್ತು ಅಪರೂಪದ ದೀರ್ಘಾಯುಷ್ಯವನ್ನು ಅತಿಯಾಗಿ ರಂಜಿಸಿ ಇಚ್ಚಾ ಮರಣಿ ಎಂದು ಹೇಳುತ್ತಾ ಜನ ಸಾಮಾನ್ಯರಿಂದ ದೂರ ಮಾಡಿ ಪವಾಡ ಪುರುಷರೆಂದು ಬಿಂಬಿಸಿದರೆ ಈ ಆಧುನಿಕ ಕಾಲದಲ್ಲೂ ನಾವು ಇತಿಹಾಸವನ್ನು ತಪ್ಪಾಗಿ ಚಿತ್ರಿಸುತ್ತಿದ್ದೇವೆ ಎಂದಾಗುತ್ತದೆ.

ಸಿದ್ದಗಂಗಾ ಶ್ರೀಗಳು ಬಹುದೊಡ್ಡ ಚಿಂತಕರಲ್ಲ, ಜ್ಞಾನಿಗಳಲ್ಲ, ಹೋರಾಟಗಾರರಲ್ಲ, ಬಸವಣ್ಣನವರಂತ ಕ್ರಾಂತಿಕಾರಿಗಳಲ್ಲ
ಪವಾಡ ಪುರುಷರಂತೂ ಅಲ್ಲವೇ ಅಲ್ಲ. ಆದರೆ..‌.‌ ನಿರಂತರ – ನಿಶ್ಯಬ್ದ – ನಿಷ್ಕಲ್ಮಶ – ನಿರುಪದ್ರವಿ ಕಾಯಕ ಯೋಗಿ. ತಮ್ಮ ಪಾಲಿನ ಕೆಲಸವನ್ನು ತಲೆ ಬಗ್ಗಿಸಿ ನಿರ್ವಂಚನೆಯಿಂದ – ಪ್ರೀತಿಯಿಂದ ಮಾಡುತ್ತಾ ಹೋದರು. ಅದು ಅವರ ಬಹುದೊಡ್ಡ ಸಾಮರ್ಥ್ಯ ಮತ್ತು ಸಾಧನೆ.
ಇದು ಭಾರತದ ಮತ್ತು ಎಲ್ಲಾ ದೇಶಗಳ ಸಮಾಜ ಸೇವಕರಿಗೆ ಸ್ಪೂರ್ತಿಯೂ ಹೌದು.

ಎಂದಿನಂತೆ ಮುಗ್ದತೆಯ ಜೊತೆ ಒಂದಷ್ಟು ಮೌಡ್ಯ, ಅಧಿಕಾರಸ್ತರ ಒಡನಾಟ, ಅನಿವಾರ್ಯವಾಗಿ ಕೆಲವು ಭ್ರಷ್ಟರ ಸಹವಾಸ ಇದ್ದರೂ ಅವು ಇಂದಿನ ಸಮಯದಲ್ಲಿ ನಿರ್ಲಕ್ಷಿಸಬಹುದಾದ ವಿಷಯಗಳು. ಪರಿಪೂರ್ಣತೆ ಮನುಷ್ಯ ಮಾತ್ರರಿಂದ‌ ಸಾಧ್ಯವೇ ಇಲ್ಲ.

ನಾವು ಅವರ ಕಾಯಕದ ಒಂದು ಸಣ್ಣ ಅಂಶವನ್ನು ಅಳವಡಿಸಿಕೊಳ್ಳುವ ಮುಖಾಂತರ ಅವರಿಗೆ ಗೌರವ ಸಲ್ಲಿಸಬಹುದು. ಅದೇ ನಾವು ಅವರಿಗೆ ಕೊಡುವ ಕಾಣಿಕೆಯೂ ಸಹ‌

  • ವಿವೇಕಾನಂದ. ಹೆಚ್.ಕೆ.
Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024