ಬೆಂಗಳೂರು – ಮೈಸೂರಿನ ಹಲವು ಸ್ಥಳಗಳಲ್ಲಿ ಆದಾಯ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ, ಸುಮಾರು 20 ಕೋಟಿ ಹಣ ವಶಕ್ಕೆ ಪಡೆದಿದ್ದಾರೆ.
ವಿಧಾನಸಭಾ ಚುನಾವಣಾಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಫಂಡ್ ಮಾಡುವ ಫೈನಾನ್ಸಿಯರ್ಗಳ ಮನೆ ಮೇಲೆ ಐಟಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.
ಕೆಲವು ಫೈನಾನ್ಸಿಯರ್ಗಳು ಬೇನಾಮಿಗಳಾಗಿರುವ ಹಿನ್ನೆಲೆಯಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ.
ಬೆಂಗಳೂರಿನ ಶಾಂತಿನಗರ, ಕಾಕ್ಸ ಟೌನ್ , ಶಿವಾಜಿನಗರ, ಕನಿಂಗ್ಹ್ಯಾಮ್ ರಸ್ತೆ, ಸದಾಶಿವನಗರ, ಕುಮಾರಪಾರ್ಕ್ ವೆಸ್ಟ್ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆದಿದೆ.
ಶುಕ್ರವಾರ ಬೆಳಗ್ಗೆ ದಾಳಿ ನಡೆಸಿರುವ ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ತನಿಖೆ ಕೈಗೊಂಡಿದ್ದಾರೆ.ಇದನ್ನು ಓದಿ –ಮೋದಿ ‘ರೋಡ್ ಶೋ’ ನಲ್ಲಿ ಗಮನ ಸೆಳೆದ ಭಜರಂಗಿ
ಬೆಂಗಳೂರು, ಮೈಸೂರು ಭಾಗದಲ್ಲಿ ದಾಳಿ ನಡೆದಿದೆ, 15 ಕೋಟಿ ರೂ.ಗಿಂತಲೂ ಹೆಚ್ಚಿನ ಪ್ರಮಾಣದ ನಗದು ಹಾಗೂ 5 ಕೋಟಿ ಬೆಲೆಬಾಳುವ ಚಿನ್ನಾಭರಣ ಜಪ್ತಿ ಮಾಡಲಾಗಿದೆ.
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ