ನನ್ನನ್ನು ಹನಿ ಟ್ರ್ಯಾಪ್ ಮಾಡಿದ್ದಾರೆ – ರಮೇಶ್ ಜಾರಕಿಹೊಳಿ : ಸಿಡಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್ ‌

Team Newsnap
1 Min Read

ನನ್ನನ್ನು ಹನಿ ಟ್ರ್ಯಾಪ್ ಮಾಡಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡುವ ಮೂಲಕ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದ್ದಾರೆ.

ಕಳೆದ ಒಂದುವರೆ ತಿಂಗಳಲ್ಲಿ ಮೂರು ಬಾರಿ ಎಸ್​ಐಟಿ ತನಿಖೆಗೆ ಹಾಜರಾಗಿದ್ದ ರಮೇಶ್ ಜಾರಕಿಹೊಳಿ ಮಹತ್ವದ ಮಾಹಿತಿ ನೀಡಿದ್ದಾರೆ

ಎಸ್​ಐಟಿ ವಿಚಾರಣೆ ವೇಳೆ ಆಕೆಯ ಪರಿಚಯ ನನಗೆ ಇತ್ತು. ನನ್ನನ್ನು ಹನಿ ಟ್ರ್ಯಾಪ್ ಮಾಡಿದ್ದಾರೆ ಅಂತಾ ಜಾರಕಿಹೊಳಿ ಹೇಳಿಕೆ ದಾಖಲಿಸಿದ್ದಾರೆ ಎನ್ನಲಾಗಿದೆ.

ರಮೇಶ್ ವೈದ್ಯಕೀಯ ಪರೀಕ್ಷೆಯನ್ನು ಕೂಡ ಎಸ್​ಐಟಿ ಅಧಿಕಾರಿಗಳು ನಡೆಸಿದ್ದಾರೆ.

ಆರು ಪುಟಗಳ ಹೇಳಿಕೆಯನ್ನು ರಮೇಶ್ ಜಾರಕಿಹೊಳಿ ನೀಡಿದ್ದಾರೆ. ಪ್ರಕರಣದಲ್ಲಿ ಹನಿ ಟ್ರ್ಯಾಪ್ ಆಗಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಇದರಲ್ಲಿ ಕಾಂಗ್ರೆಸ್​ ನಾಯಕನೊಬ್ಬನ ಕೈವಾಡವಿದೆ. ಹಣಕ್ಕಾಗಿ ನನ್ನನ್ನು ಪೀಡಿಸುತ್ತಿದ್ದರು ಎಂದೂ ಸಹ ಅವರು ಹೇಳಿದ್ದಾರೆ.

ನರೇಶ್ ಗೌಡ ಹಾಗೂ ಶ್ರವಣ್ ಅನ್ನೋರಿಂದ ನನಗೆ ಪದೇ ಪದೆ ಕರೆ ಬರುತ್ತಿತ್ತು. ಇತ್ತು. ಇದೊಂದು ಪಕ್ಕಾ ಹನಿಟ್ರ್ಯಾಪ್ ಪ್ರಕರಣವಾಗಿದೆ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ .

Share This Article
Leave a comment