ನನ್ನನ್ನು ಹನಿ ಟ್ರ್ಯಾಪ್ ಮಾಡಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡುವ ಮೂಲಕ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದ್ದಾರೆ.
ಕಳೆದ ಒಂದುವರೆ ತಿಂಗಳಲ್ಲಿ ಮೂರು ಬಾರಿ ಎಸ್ಐಟಿ ತನಿಖೆಗೆ ಹಾಜರಾಗಿದ್ದ ರಮೇಶ್ ಜಾರಕಿಹೊಳಿ ಮಹತ್ವದ ಮಾಹಿತಿ ನೀಡಿದ್ದಾರೆ
ಎಸ್ಐಟಿ ವಿಚಾರಣೆ ವೇಳೆ ಆಕೆಯ ಪರಿಚಯ ನನಗೆ ಇತ್ತು. ನನ್ನನ್ನು ಹನಿ ಟ್ರ್ಯಾಪ್ ಮಾಡಿದ್ದಾರೆ ಅಂತಾ ಜಾರಕಿಹೊಳಿ ಹೇಳಿಕೆ ದಾಖಲಿಸಿದ್ದಾರೆ ಎನ್ನಲಾಗಿದೆ.
ರಮೇಶ್ ವೈದ್ಯಕೀಯ ಪರೀಕ್ಷೆಯನ್ನು ಕೂಡ ಎಸ್ಐಟಿ ಅಧಿಕಾರಿಗಳು ನಡೆಸಿದ್ದಾರೆ.
ಆರು ಪುಟಗಳ ಹೇಳಿಕೆಯನ್ನು ರಮೇಶ್ ಜಾರಕಿಹೊಳಿ ನೀಡಿದ್ದಾರೆ. ಪ್ರಕರಣದಲ್ಲಿ ಹನಿ ಟ್ರ್ಯಾಪ್ ಆಗಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ಇದರಲ್ಲಿ ಕಾಂಗ್ರೆಸ್ ನಾಯಕನೊಬ್ಬನ ಕೈವಾಡವಿದೆ. ಹಣಕ್ಕಾಗಿ ನನ್ನನ್ನು ಪೀಡಿಸುತ್ತಿದ್ದರು ಎಂದೂ ಸಹ ಅವರು ಹೇಳಿದ್ದಾರೆ.
ನರೇಶ್ ಗೌಡ ಹಾಗೂ ಶ್ರವಣ್ ಅನ್ನೋರಿಂದ ನನಗೆ ಪದೇ ಪದೆ ಕರೆ ಬರುತ್ತಿತ್ತು. ಇತ್ತು. ಇದೊಂದು ಪಕ್ಕಾ ಹನಿಟ್ರ್ಯಾಪ್ ಪ್ರಕರಣವಾಗಿದೆ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ .