Strength ಮತ್ತು Weakness…..
ಸಾಮರ್ಥ್ಯ ಮತ್ತು ದೌರ್ಬಲ್ಯ…….
ನಮ್ಮ ಸಮಾಜ ವ್ಯಕ್ತಿಗಳ ಸಾಮರ್ಥ್ಯವನ್ನು ( Strength ) ತುಂಬಾ ಚೆನ್ನಾಗಿ ಗುರುತಿಸುತ್ತದೆ ಮತ್ತು ಅದರಿಂದಾಗಿ ವ್ಯಕ್ತಿಗಳು ಜನಪ್ರಿಯರೂ ಆಗುತ್ತಾರೆ.
ಆ ಜನಪ್ರಿಯತೆಯ ಅಲೆಯ ಮೇಲೆ ತೇಲುತ್ತಾ ಹಣ ಅಧಿಕಾರ ಅಂತಸ್ತುಗಳನ್ನು ಗಳಿಸುತ್ತಾರೆ. ಇದು ಒಳ್ಳೆಯ ಅಂಶ.
ಆದರೆ,
ಅದೇ ವ್ಯವಸ್ಥೆ ವ್ಯಕ್ತಿಗಳಲ್ಲಿ ಇರಬಹುದಾದ ದೌರ್ಬಲ್ಯಗಳಿಗೆ ( Weakness )
ತುಂಬಾ ಕೆಟ್ಟದ್ದಾಗಿ ಪ್ರತಿಕ್ರಿಯಿಸುತ್ತದೆ.
(ಇಲ್ಲಿ Weakness ಎಂದರೆ ದುಶ್ಚಟಗಳು, ಹಣಕಾಸಿನ ವ್ಯಾವಹಾರಿಕ ನಡವಳಿಕೆಗಳು , ಅಪರಾಧಗಳೆಂದು ಪರಿಗಣಿಸಲಾದ ಅನಾಗರಿಕ ವರ್ತನೆಯಲ್ಲ.)
ವ್ಯಕ್ತಿಗಳಲ್ಲಿ ಇರಬಹುದಾದ ಸಂಕೋಚ, ಕೀಳರಿಮೆ, ಭಯ, ಅನವಶ್ಯಕ ಆತಂಕ, ಮುಗ್ಧತೆ, ನಿರ್ಲಿಪ್ತತೆ, ಬಡತನ, ಅಸಹಾಯಕತೆ, ಸಾಮಾನ್ಯ ಜ್ಙಾನದ ಕೊರತೆ ಮುಂತಾದ ಈ ಗುಣಗಳು.
ವ್ಯಕ್ತಿಗಳ ಆ ಕ್ಷಣದ ಫಲಿತಾಂಶ ಆಧರಿಸಿ ಯಶಸ್ಸನ್ನು ಅತಿ ಎನಿಸುವಷ್ಟು ಮೇಲಕ್ಕೆತ್ತುವುದು ಮತ್ತು ಅದೇ ಸಂದರ್ಭದಲ್ಲಿ ಪರಿಸ್ಥಿತಿಯ ಕಾರಣದಿಂದಾಗಿ ವಿಫಲರಾದವರನ್ನು ಅತ್ಯಂತ ತುಚ್ಚವಾಗಿ ಕಾಣುವುದು ನಮ್ಮ ಸುತ್ತಮುತ್ತಲಿನ ಜನರ ಬಹುದೊಡ್ಡ ದುರ್ಗುಣ.
ಈ ರೀತಿಯ ದೌರ್ಬಲ್ಯ ಹೊಂದಿರುವವರಿಗೆ ಹಿಂದಿನ ದಿನಗಳಲ್ಲಿ ಆಶಾಕಿರಣವಾಗಿ ತಂದೆ ತಾಯಿ ಬಂಧುಗಳು ಸ್ನೇಹಿತರು ನೆರೆಹೊರೆಯವರು ಇರುತ್ತಿದ್ದರು. ನಮ್ಮೆಲ್ಲಾ ನೋವು ನಲಿವುಗಳನ್ನು ಅವರ ಬಳಿ ಹಂಚಿಕೊಳ್ಳಬಹುದಿತ್ತು ಮತ್ತು ಅದಕ್ಕೆ ಆತ್ಮೀಯ ಸಂವೇದನೆಯು ದೊರೆಯುತ್ತಿತ್ತು. ಆದರೆ ಈಗಿನ ಆಧುನಿಕ ಬದುಕು, ವೇಗದ ಜೀವನಶೈಲಿ, ವ್ಯಾಪಾರಿ ಮನೋಭಾವ ಆ ಆತ್ಮೀಯತೆಯನ್ನು ಶಿಥಿಲಗೊಳಿಸಿದೆ.
ಯಶಸ್ಸಿಗೆ ಹಲವಾರು ತಂದೆಗಳು ಆದರೆ ಸೋಲು ಮಾತ್ರ ಅನಾಥ ಎಂಬಂತಾಗಿದೆ.
ಸ್ವತಃ ತಂದೆ ತಾಯಿ ಸಂಬಂದಿಗಳು ಸ್ನೇಹಿತರು ಸೋಲಿನ ಜರ್ಝರಿತ ಸ್ಥಿತಿಯಲ್ಲಿ ನಮ್ಮ ಮನಸ್ಸಿಗೆ ತಾಗುವಂತ ಸಾಂತ್ವಾನ ಹೇಳುವ ಬದಲು ನಮ್ಮ ಹಿಂದಿನ Weakness ಅನ್ನೇ ಹೆಚ್ಚಾಗಿ ಮುಂದಿಡುತ್ತಾರೆ. ಅವರ ಕೆಲವು ಕೃತಕ ನಡವಳಿಕೆಗಳು ಕಪಟ ಪ್ರೀತಿ ನಮಗೆ ಹೆಚ್ಚು ಘಾಸಿ ಮಾಡುತ್ತದೆ.
ಸಹಜ ಸ್ಥಿತಿಯಲ್ಲಿ ಅಥವಾ ಸಣ್ಣ ಪುಟ್ಟ ಸೋಲಿನಲ್ಲಿ ಇದು ಹೆಚ್ಚಾಗಿ ಅರಿವಾಗುವುದಿಲ್ಲ. ಆದರೆ ಜೀವನ್ಮರಣದ ಹೋರಾಟ ಸಂದರ್ಭದಲ್ಲಿ ಮತ್ತು ಬದುಕಿನಲ್ಲಿ ಅತ್ಯಂತ ಕುಸಿತ ಕಂಡಿರುವ ಸಮಯದಲ್ಲಿ, ಬದುಕಿನಲ್ಲಿ ಕತ್ತಲೆ ತುಂಬಿ ಇನ್ನೇನು ಮುಗಿದೇ ಹೋಯಿತು ಎನ್ನುವ ಸ್ಥಿತಿಯಲ್ಲಿ ಮನಸ್ಸು ತುಂಬಾ ಸೂಕ್ಷ್ಮವಾಗಿರುತ್ತದೆ. ಆಗ ಆತ್ಮೀಯರ ಒಡನಾಟಕ್ಕೆ ಮನಸ್ಸು ಹಾತೊರೆಯುತ್ತಿರುತ್ತದೆ. ಆಗಲೇ ಸಂಬಂಧಗಳ ನಡುವಿನ ಗಟ್ಟಿತನ ಅನಾವರಣಗೊಳ್ಳುವುದು. ಅದು ಸಿಗದಿದ್ದಾಗ ಆಗುವ ವೇದನೆ ಊಹೆಗೂ ನಿಲುಕದ್ದು .
ಇಡೀ ವ್ಯವಸ್ಥೆಯೇ ಶಿಥಿಲವಾಗಿದೆ ಎನ್ನಲು ಕಷ್ಟವಾಗುತ್ತದೆ. ಕೆಲವು ಒಳ್ಳೆಯ ಸಂಬಂಧಗಳೂ ಇವೆ. ಆದರೆ ಅವು ಅಪರೂಪವಾಗುತ್ತಿವೆ ಎಂದು ಖಂಡಿತ ಹೇಳಬಹುದು.
ಆದ್ದರಿಂದ ವ್ಯಕ್ತಿಗಳ ಸಂಭ್ರಮದ ಕ್ಷಣಗಳಲ್ಲಿ ನಾವು ಭಾಗಿಯಾಗುವುದಕ್ಕಿಂತ ಅವರ ನೋವಿನ ಸಂಕಷ್ಟದ ಸಮಯದಲ್ಲಿ ಜೊತೆಯಾಗಿರಲು ಪ್ರಯತ್ನಿಸೋಣ. ವ್ಯಕ್ತಿಯ Strength ಗಿಂತ Weakness ಗಳನ್ನು ಒಪ್ಪಿಕೊಂಡು ಸಹಜ ಮತ್ತು ಗಾಢ ಸಂಬಂಧಗಳನ್ನು ಬೆಳೆಸಿಕೊಳ್ಳಲು ಪ್ರಯತ್ನಿಸೋಣ.
ಗೆದ್ದವನ ಬಾಲ ಹಿಡಿಯಲು ಸಾಕಷ್ಟು ಜನ ಇರುತ್ತಾರೆ. ಸೋತವನಿಗೆ ಸಾಂತ್ವನ ಹೇಳುವ ಮನಸ್ಸುಗಳ ಅವಶ್ಯಕತೆ ಇದೆ……………
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment