Editorial

ಜನರನ್ನು ಉಪಯೋಗಿಸಿಕೊಂಡು ಎಲ್ಲವನ್ನೂ ಪಡೆದಿದ್ದೀರಿ ಈಗ ಕೊಡುವ ಸಮಯ

ಮತದಾರರನ್ನು ಉಪಯೋಗಿಸಿಕೊಂಡು ಎಂಎಲ್ಎ, ಮಂತ್ರಿಗಳಾದಿರಿ,
ಜನರ ಕಷ್ಟಕ್ಕೆ ಹೃದಯಪೂರ್ವಕವಾಗಿ ಸಹಾಯ ಮಾಡಿ. ಸ್ಟಂಟ್ ಮಾಡಬೇಡಿ.

ಭಕ್ತಾದಿಗಳನ್ನು ಉಪಯೋಗಿಸಿ ಕೊಂಡು ಮಠಾಧೀಶರಾದಿರಿ, ಹಣ, ಜಾತಿ, ವೈಭೋಗದ ಹಿಂದೆ ಹೋಗದೆ ತ್ಯಾಗ ಮನೋಭಾವದಿಂದ,‌ ಜನರ ಸೇವೆ ಮಾಡಿ, ರಾಜಕೀಯ ಮಾಡಬೇಡಿ.

ಓದುಗನನ್ನು ಉಪಯೋಗಿಸಿ ಕೊಂಡು ದೊಡ್ಡ ಸಾಹಿತಿ, ಲೇಖಕ ರಾದಿರಿ,‌ ಬಡತನ, ಶೊಷಣೆ, ಅಜ್ಞಾನವನ್ನು ವರ್ಣಿಸಿದಿರಿ, ದಯವಿಟ್ಟು ಈಗ ಅವರಿಗಾಗಿ ನಿಜದ ಧ್ವನಿ ಎತ್ತಿ, ಸ್ವಾರ್ಥಿಗಳಾಗ ಬೇಡಿ.

ಅಭಿಮಾನಿಗಳನ್ನು ಉಪಯೋಗಿಸಿ ಕೊಂಡು ಪ್ರಖ್ಯಾತ, ಶ್ರೀಮಂತ ನಟರಾದಿರಿ, ದಯವಿಟ್ಟು
ಅವರ ಕಷ್ಟ ಕಾರ್ಪಣ್ಯಗಳಿಗೆ ನೆರವಾಗಿ, ಕಪಟ ನಾಟಕ ಮಾಡಬೇಡಿ.

ಕೃಷಿ ಭೂಮಿಯನ್ನು ಉಪಯೋಗಿಸಿಕೊಂಡು ಕೋಟ್ಯಾಧಿಪತಿ DEVELOPER ಗಳಾದಿರಿ. ದಯವಿಟ್ಟು
ಈಗ ಅನ್ನಕ್ಕಾಗಿ ಪರಿತಪ್ಪಿಸುತ್ತಿರುವ ಮಕ್ಕಳಿಗೆ ಆಶ್ರಯದಾತರಾಗಿ, ದುರಹಂಕಾರಿಗಳಾಗಬೇಡಿ.

ವೀಕ್ಷಕರನ್ನು ಉಪಯೋಗಿಸಿಕೊಂಡು ಟಿಆರ್ಪಿ ಹೆಚ್ಚಿಸಿಕೊಂಡು ಅಧಿಕ ಜಾಹೀರಾತು ಗಳಿಸಿ ದುಡ್ಡು ಮಾಡಿಕೊಂಡಿರಿ. ದಯವಿಟ್ಟು
ವಿಕೃತ ಕಾರ್ಯಕ್ರಮ ಮಾಡದೆ ಒಳ್ಳೆಯ ವಾಸ್ತವಿಕ ಸುದ್ದಿ ಪ್ರಸಾರ ಮಾಡಿ.

ಕಾರ್ಮಿಕರ ಶ್ರಮ ಉಪಯೋಗಿಸಿಕೊಂಡು ಬೃಹತ್ ಉದ್ಯಮಿಗಳಾದಿರಿ. ದಯವಿಟ್ಟು
ಮದುವೆ, ಪಾರ್ಟಿಯಲ್ಲಿ ಶ್ರೀಮಂತಿಕೆ ಪ್ರದರ್ಶಿಸದೆ ಇಲ್ಲದವರಿಗೆ ದಾನಮಾಡಿ.ಕ್ರೂರಿಗಳಾಗಬೇಡಿ.

ಸಾರ್ವಜನಿಕರ ತೆರಿಗೆ ಹಣದಿಂದಲೇ ಸಂಬಳ ಪಡೆಯುವ ಅಧಿಕಾರಿಗಳಾದಿರಿ. ದಯವಿಟ್ಟು
ಅವರಿಗಾಗಿ ಬದುಕನ್ನು ಮುಡುಪಿಡಿ. ಜನರನ್ನು ಗೋಳಾಡಿಸುವ ಭ್ರಷ್ಟರಾಗಬೇಡಿ.

ರೈತರು, ಕಾರ್ಮಿಕರು, ಮಹಿಳೆಯರು, ದಲಿತರನ್ನು, ಉಪಯೋಗಿಸಿಕೊಂಡು ನಾಯಕರಾದಿರಿ. ದಯವಿಟ್ಟು,
ಈಗ ಅವರ ಕಣ್ಣೀರೊರೆಸುವ ಕೈಗಳಾಗಿ, ಅಮಾನವೀಯರಾಗಬೇಡಿ.

ಕೋಟ್ಯಾಂತರ ಜನ ಒಟ್ಟಿಗೇ ಬದಲಾಗುವುದು ಕಷ್ಟಸಾಧ್ಯ. ಆದರೆ,…,…..

ನಾಯಕರುಗಳು ಬದಲಾದರೆ, ಈ ಸಮಾಜದ ಬದಲಾವಣೆ ಸುಲಭವಾಗುತ್ತದೆ.

ಜನರ ಆಕ್ರೋಶ, ಅಸಮಾಧಾನ ಭುಗಿಲೇಳುವ ಮೊದಲು ಎಚ್ಚೆತ್ತುಕೊಳ್ಳಿ,

ಸರಳ, ಸುಂದರ, ಸಮ ಸಮಾಜ ನಮ್ಮದಾಗಿಸಿಕೊಳ್ಳೋಣ.

  • ವಿವೇಕಾನಂದ ಹೆಚ್ ಕೆ
Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024