ಧನ್ಕರ್ ಎದುರು ಪ್ರತಿಸ್ಪರ್ಧಿ, ಯುಪಿಎ ಬೆಂಬಲಿತ ಮಾರ್ಗರೆಟ್ ಆಳ್ವ ಪರಾಭವಗೊಂಡಿದ್ದಾರೆ.
ಈ ಮೂಲಕ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನ್ಕರ್, ನೂತನ ಉಪ ರಾಷ್ಟ್ರಪತಿಯಾಗಿ ಆಯ್ಕೆ ಆಗಿದ್ದಾರೆ. ಈ ಚುನಾವಣೆಯಲ್ಲಿ ಜಗದೀಪ್ಗೆ 500 ಹಾಗೂ ಮಾರ್ಗರೆಟ್ಗೆ 200 ಮತಗಳು ಚಲಾವಣೆ ಆಗಿವೆ.ಇದನ್ನು ಓದಿ –ನಾಡಹಬ್ಬ ದಸರಾ – 2022 ಈ ಬಾರಿ ಗೋಲ್ಡ್ ಪಾಸ್ ರದ್ದು: ಸಚಿವ ಸೋಮಶೇಖರ್ ಸ್ಪಷ್ಟನೆ
ಜಗದೀಪ್ ಧನ್ಕರ್ (71) ರಾಜಸ್ಥಾನ ಮೂಲದವರು. 1951ರ ಮೇ 18ರಂದು ಕಿಥನಾ ಗ್ರಾಮದಲ್ಲಿ ಜನಿಸಿದ ಧನ್ಕರ್ ಚಿತ್ತೋರಗಢದ ಸೈನಿಕ ಶಾಲೆಯಲ್ಲಿ ಆರಂಭಿಕ ಶಿಕ್ಷಣ ಪೂರೈಸಿ, ಜೈಪುರದ ರಾಜಸ್ಥಾನ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದಾರೆ. ವಕೀಲಿ ವೃತ್ತಿ ಮಾಡುತ್ತಿದ್ದ ಅವರು, ರಾಜಸ್ಥಾನ ಹೈಕೋರ್ಟ್ ಬಾರ್ ಅಸೋಸಿಯೇಷನ್ನ ಅಧ್ಯಕ್ಷರೂ ಆಗಿದ್ದರು. ಜನತಾ ದಳದ ಮೂಲಕ ರಾಜಕೀಯ ಪ್ರವೇಶ ಪಡೆದ ಧನ್ಕರ್, ಝುುಂಝುುನು ಕ್ಷೇತ್ರದಿಂದ 9ನೇ ಲೋಕಸಭೆಗೆ (1989-91) ಆಯ್ಕೆ ಆಗಿದ್ದರು. 1993-98ರ ಅವಧಿಯಲ್ಲಿ ರಾಜಸ್ಥಾನದ 10ನೇ ವಿಧಾನಸಭೆಗೆ ಕಿಷನ್ಗಢದಿಂದ ಚುನಾಯಿತರಾಗಿದ್ದರು.
ನಂತರದಲ್ಲಿ ಬಿಜೆಪಿ ಜತೆ ಗುರುತಿಸಿಕೊಂಡ ಅವರನ್ನು 2019ರ ಜುಲೈ 30ರಂದು ಪಶ್ಚಿಮ ಬಂಗಾಳದ ರಾಜ್ಯಪಾಲರನ್ನಾಗಿ ನೇಮಿಸಲಾಯಿತು. ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯಪಾಲ ಧನ್ಕರ್ ನಡುವೆ ಆರಂಭದಿಂದಲೂ ಜಟಾಪಟಿ ಇದೆ. ರಾಜ್ಯಪಾಲರ ಅಧಿಕಾರ ವ್ಯಾಪ್ತಿಯನ್ನು ಮಮತಾ ಬಹಿರಂಗವಾಗಿಯೇ ಪ್ರಶ್ನಿಸಿದ್ದಾರೆ. ರಾಜ್ಯಪಾಲರು ಪದನಿಮಿತ್ತವಾಗಿ ರಾಜ್ಯದ ಎಲ್ಲ ವಿವಿಗಳ ಕುಲಾಧಿಪತಿಗಳೂ ಆಗಿರುತ್ತಾರೆ. ಆದರೆ, ಇತ್ತೀಚೆಗೆ ಈ ಅಧಿಕಾರವನ್ನು ಕಿತ್ತುಕೊಂಡು, ಮುಖ್ಯಮಂತ್ರಿಯೇ ಎಲ್ಲ ವಿವಿಗಳ ಕುಲಾಧಿಪತಿ ಎಂಬ ತಿದ್ದುಪಡಿ ಮಸೂದೆಗೆ ಟಿಎಂಸಿ ಸರ್ಕಾರ ವಿಧಾನಸಭೆಯಲ್ಲಿ ಅನುಮೋದನೆ ಪಡೆದಿದೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment