ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ಇದೀಗ ಮತ್ತೆ ಭುಗಿಲೆದ್ದಿದೆ. ಜಾಮಿಯಾ ಮಸೀದಿಯ ಒಳಭಾಗದಲ್ಲಿ ನಡೆಯುತ್ತಿರುವ ಮದರಸಾ ತೆರವಿಗೆ ಹಿಂದೂ ಜಾಗರಣ ವೇದಿಕೆ ಮಂಡ್ಯ ಜಿಲ್ಲಾಡಳಿತಕ್ಕೆ ಗಡುವು ನೀಡಿದೆ.
1934 ರಲ್ಲಿ ಜಾಮಿಯಾ ಮಸೀದಿ ಪ್ರಾಚ್ಯವಸ್ತು ಮತ್ತು ಭಾರತೀಯ ಪರಿವೀಕ್ಷಣಾ ಇಲಾಖೆಗೆ ಸೇರಿದ್ದು, ಈ ಕಟ್ಟಡದಲ್ಲಿ ಮದರಸಾದಂತಹ ಚಟುವಟಿಕೆಗಳನ್ನು ನಡೆಸಲು ಅವಕಾಶವಿಲ್ಲ. ಹೀಗಿದ್ದರೂ ಕೂಡಾ ಜಾಮಿಯಾ ಮಸೀದಿಯಲ್ಲಿ ಅಕ್ರಮವಾಗಿ ಮದರಸಾ ನಡೆಸಲಾಗುತ್ತಿದೆ.ಒಂದೇ ದಿನ 17 ಡಿವೈಎಸ್ಪಿ ವರ್ಗಾವಣೆ -ಕರ್ನಾಟಕ ಲೋಕಾಯುಕ್ತಕ್ಕೆ ಮತ್ತಷ್ಟು ಬಲ
ಕಳೆದ ಹಲವು ವರ್ಷಗಳಿಂದ ಹಿಂದೂಪರ ಸಂಘಟನೆಗಳು ಅಕ್ರಮ ಮದರಸಾ ತೆರವು ಮಾಡಬೇಕೆಂದು ಆಗ್ರಹ ಮಾಡುತ್ತಿವೆ. ಇಷ್ಟಾದರೂ ಕೂಡಾ ಕ್ರಮ ಕೈಗೊಳ್ಳದ ಹಿನ್ನೆಲೆ ಹಿಂದೂ ಜಾಗರಣಾ ವೇದಿಕೆ ಪ್ರಾಚ್ಯವಸ್ತು ಮತ್ತು ಭಾರತೀಯ ಪರಿವೀಕ್ಷಣಾ ಇಲಾಖೆಗೆ ಗಡುವು ನೀಡಿದೆ.
ಐತಿಹಾಸಿಕ ಸ್ಥಳವಾಗಿರುವ ಜಾಮಿಯಾ ಮಸೀದಿ ಅಲ್ಲ, ಅದು ಮಂದಿರ ಎಂದು ಬಜರಂಗಸೇನೆ ಹೈಕೋರ್ಟ್ ಮೆಟ್ಟಿಲೇರುವ ಮೂಲಕ ಕಾನೂನು ಹೋರಾಟವನ್ನು ಆರಂಭಿಸಿದೆ. ಹಿಂದೂ ಜಾಗರಣ ವೇದಿಕೆ ಮಸೀದಿಯಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮದರಸಾ ತೆರವಿಗೆ ಹೋರಾಟವನ್ನು ಆರಂಭಿಸಿದೆ.
ಜಾಮಿಯಾ ಮಸೀದಿಯಲ್ಲಿ ನಡೆಯುತ್ತಿರುವ ಅಕ್ರಮ ಮದರಸಾವನ್ನು 10 ದಿನಗಳ ಒಳಗೆ ತೆರವು ಮಾಡಬೇಕು. ಇಲ್ಲವಾದಲ್ಲಿ ನಮಗೂ ಪ್ರತಿ ಶನಿವಾರ ಹನುಮಾನ್ ಚಾಲೀಸ ಹಾಗೂ ಭಜನೆಗೆ ಅವಕಾಶ ನೀಡಬೇಕು. ಇವೆರಡೂ ಆಗಲಿಲ್ಲ ಎಂದರೆ ಪ್ರಾಚ್ಯವಸ್ತು ಮತ್ತು ಭಾರತೀಯ ಪರಿವೀಕ್ಷಣಾ ಇಲಾಖೆ ಎದುರು ಉಗ್ರ ಪ್ರತಿಭಟನೆ ಮಾಡುವುದಾಗಿ ಹಿಂದೂ ಜಾಗರಣ ವೇದಿಕೆ ಎಚ್ಚರಿಕೆ ನೀಡಿದೆ.
- ಹಾಡ್ಲಿ ಮೇಗಳಪುರ ವೃತ್ತದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ
- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
- ಪದ್ಮಭೂಷಣ ಗಾಯಕಿ ವಾಣಿ ಜಯರಾಂ ಇನ್ನಿಲ್ಲ
- ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
- ನಿರ್ದೇಶಕ ಕೆ . ವಿಶ್ವನಾಥ್ ಇನ್ನಿಲ್ಲ
- ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು
More Stories
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು