ಅಕ್ರಮ ಆಸ್ತಿ ಸಂಪಾದನೆ ಆರೋಪ ಸಾಬೀತಾದ ನಂತರ ಕಳೆದ ನಾಲ್ಕು ವರ್ಷಗಳಿಂದಲೂ ಪರಪ್ಪನ ಅಗ್ರಹಾರ ಜೈಲಿ ನಲ್ಲಿ ಶಿಕ್ಷೆ ಅನುಭವಿಸಿದ ತಮಿಳುನಾಡಿನ ಎಐಡಿಎಂಕೆ ನಾಯಕಿ ವಿ ಕೆ ಶಶಿಕಲಾ ಜ.27 ರಂದು ಬೆಳಗಿನ ಜಾವ ಬಿಡುಗಡೆಯಾಗಲಿದ್ದಾರೆ.
ಶಶಿಕಲಾ ಜ. 27 ರಂದು ಬೆಳಿಗ್ಗೆ ಬಿಡುಗಡೆಯಾಗಲಿದ್ದಾರೆಂದು ಜೈಲಿನ ಮುಖ್ಯ ಅಧೀಕ್ಷಕರು ಮೇಲ್ ಮೂಲಕ ಈ ಮಾಹಿತಿ ನೀಡಿರುವುದಾಗಿ ಶಶಿಕಲಾ ಪರ ವಕೀಲ ಎನ್. ರಾಜಾ ಸೆಂಥೂರ್ ಪಾಂಡಿಯನ್ ತಿಳಿಸಿದ್ದಾರೆ.
ಶಶಿಕಲಾ ಬಿಡುಗಡೆ ಸಂಬಂಧಿಸಿದಂತೆ ವಕೀಲ ರಾಜಾ ಪ್ರಶ್ನೆ ಮಾಡಿ ಜೈಲಾಧಿಕಾರಿಗಳಿಗೆ ಮೇಲ್ ಮಾಡಿದ್ದರು.
ಅಕ್ರಮ ಆಸ್ತಿ ಗಳಿಕೆ ಸಂಬಂಧಿಸಿದಂತೆ 2014 ರಲ್ಲಿ ನ್ಯಾಯಾಲಯವು ನೀಡಿದ್ದ ತೀರ್ಪು ಪ್ರಶ್ನಿಸಿ ಆರೋಪಿಗಳು ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿದ್ದರು. 2017 ರಲ್ಲಿ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯಿತು.
ಶಶಿಕಲಾ ಕಡೆಯಿಂದ ಬರಬೇಕಾಗಿರುವ 10 ಕೋಟಿ 10 ಸಾವಿರ ರುಗಳನ್ನು ಪಾವತಿ ಮಾಡುವಂತೆ ನ್ಯಾಯಾಲಯವು ಕಳೆದ ಸೆಪ್ಟೆಂಬರ್ ಸೂಚನೆ ನೀಡಿತ್ತು.
ಈ ಸೂಚನೆ ಹಿನ್ನೆಲೆಯಲ್ಲಿ ಶಶಿಕಲಾ ಕುಟುಂಬದವರು ನ್ಯಾಯಾಲಯವು ಹೇಳಿದ ದಂಡದ ಹಣವನ್ನು ಪೂರ್ತಿಯಾಗಿ ಪಾವತಿ ಮಾಡಿದೆ. ಅಲ್ಲದೆ ಶಶಿಕಲಾ ಬಿಡುಗಡೆ ನಂತರ ಆಕೆಯ ವಾಸಕ್ಕೆ ಎರಡು – ಮೂರು ಬಂಗಲೆ ಗಳನ್ನೂ ಕೂಡ ಸಿದ್ದ ಮಾಡಿ ಇಟ್ಟುಕೊಂಡಿದ್ದಾರೆಂದು ಗೊತ್ತಾಗಿದೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment