ರಾಜ್ಯ ವಿಧಾನ ಸಭೆ ಅಧಿವಶನವು ಜನವರಿ 28 ರಿಂದ ಫೆ 5 ರವರೆಗೆ
ನಡೆಯಲಿದೆ.
ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, 15ನೇ ವಿಧಾನಸಭೆಯ 9ನೇ ಅಧಿವೇಶನದ ಕುರಿತು ಮಾಹಿತಿ ನೀಡಿದರು.
1) 15ನೇ ವಿಧಾನಸಭೆಯ 9ನೇ ಅಧಿವೇಶನ ನಾಳೆಯಿಂದ 7ದಿನಗಳ ಕಾಲ ನಡೆಯಲಿದೆ. ಅಧಿವೇಶನಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ.
2) ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಆಹ್ವಾನಿಸಿದ್ದೇನೆ. ರಾಜ್ಯಪಾಲರ ಭಾಷಣದ ಬಳಿಕ ಸಂತಾಪ ಸೂಚನೆ ಬಳಿಕ ಕಲಾಪ ಮುಂದೂಡಲಾಗುತ್ತದೆ.
3) ಶುಕ್ರವಾರದಿಂದ ಪ್ರಶ್ನೋತ್ತರ ಕಲಾಪ ಸೇರಿ ಉಳಿದ ಕಲಾಪಗಳು ನಡೆಯು ತ್ತವೆ. ಈ ಬಾರಿ 11 ಮಸೂದೆಗಳು ಅಧಿವೇಶನದಲ್ಲಿ ಮಂಡನೆಯಾಗುತ್ತವೆ.
4) ಗೋ ಹತ್ಯೆ ನಿಷೇಧ ವಿಧೆಯಕ ಇನ್ನೂ ವಿಧಾನ ಪರಿಷತ್ ನಲ್ಲಿ ಅಂಗೀಕಾರ ವಾಗುವುದು ಬಾಕಿ ಇದೆ. ಮೂರು ವಿಶ್ವವಿದ್ಯಾಲಯಗಳ ವಿಧೇಯಕ ಹಾಗೂ ಮೂರು ಸುಗ್ರೀವಾಜ್ಞೆಗಳ ವಿಧೇಯಕಗಳಿವೆ.
5) ಅನಾರೋಗ್ಯ ಇರುವವರು ಸದನಕ್ಕೆ ಹಾಜರಾಗದೇ ಇರುವುದು ಒಳ್ಳೆಯದು. ಲಕ್ಷಣಗಳು ಇದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲೂ ವ್ಯವಸ್ಥೆ ಮಾಡ ಲಾಗಿದೆ. ಆದರೆ ಆರ್ ಟಿಪಿಸಿಆರ್ ಟೆಸ್ಟ್ ಕಡ್ಡಾಯವೇನಲ್ಲ.
6) ಈ ಬಾರಿಯೂ ಅಧಿವೇಶನಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಕಳೆದ ಅಧಿವೇಶನದಲ್ಲಿ ಇದ್ದ ನಿರ್ಬಂಧ, ವ್ಯವಸ್ಥೆಗಳು ಮುಂದುವರಿಯುತ್ತದೆ.
7) ಅಧಿವೇಶನದ ಸಂದರ್ಭದಲ್ಲೇ ಒಂದು ದಿನ ಒನ್ ನೇಷನ್ ಒನ್ ಎಲೆಕ್ಷನ್ ವಿಷಯವೂ ಚರ್ಚೆಯಾಗ ಲಿದೆ. ಶೀಘ್ರದಲ್ಲೇ ಅದಕ್ಕೆ ದಿನಾಂಕ ನಿಗದಿ ಪಡಿಸಲಾಗುತ್ತದೆ.
8) ಯಾವುದೇ ಮಸೂದೆಗಳಿದ್ದರೂ ಸರ್ಕಾರ ಮುಂಚಿತವಾಗಿಯೇ ಸಚಿವಾಲಯಕ್ಕೆ ಕಳುಹಿಸಿಕೊಡಬೇಕು. ಇದರಿಂದ ಸದಸ್ಯರಿಗೆ ಚರ್ಚೆಗೆ ಸಿದ್ಧವಾಗಿ ಬರಲು ಅವಕಾಶವಾಗುತ್ತದೆ.
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
This website uses cookies.
Leave a Comment