ಜಯದೇವ ಆಸ್ಪತ್ರೆ ಹಾಲಿ ನಿರ್ದೇಶಕ ಡಾ. ಸಿ.ಎನ್ ಮಂಜುನಾಥ್ ಅವರ ಸೇವಾ ಅವಧಿ ಜುಲೈ 19 ರಂದು ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಡಾ ಮಂಜುನಾಥ್ ಅವರನ್ನೇ ಮುಂದುವರೆಸುವಂತೆ ವೈದ್ಯರು ಹಾಗೂ ಸಾರ್ವಜನಿಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮುಂದಿನ ನಿರ್ದೇಶಕರನ್ನಾಗಿ ಯಾರನ್ನು ನೇಮಿಸಬೇಕು ಎಂಬ ನಿರ್ಧಾರ ಸರ್ಕಾರ ಇನ್ನಷ್ಟೇ ಕೈಗೊಳ್ಳಬೇಕಿದೆ.ಇದನ್ನು ಓದಿ –ವಿಧಾನಸೌಧದ ಮೂರನೇ ಮಹಡಿಯಲ್ಲಿ ಅಗ್ನಿ ದುರಂತ
ಈ ಮಧ್ಯೆ ಡಾ. ಮಂಜುನಾಥ್ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಿ ಎಂದು ಸರ್ಕಾರದ ಮೇಲೆ ಗಣ್ಯರು ಭಾರೀ ಒತ್ತಡ ಹಾಕುತ್ತಿದ್ದಾರೆ.
ಡಾ. ಮಂಜುನಾಥ್ ಅವರನ್ನೇ ನಿರ್ದೇಶಕರನ್ನಾಗಿ ಮುಂದುವರಿಸೋದು ಬೇಡ ಎಂದು ಕೆಲವು ಸಚಿವರು ಒತ್ತಾಯಿಸಿದ್ದಾರೆ. ಹಾಗಾಗಿ ಸರ್ಕಾರ ಇನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ.
ಹಾಲಿ ನಿರ್ದೇಶಕ ಡಾ. ಮಂಜುನಾಥ್ ಅವರನ್ನೇ ಮುಂದುವರಿಸಿ, ಇಲ್ಲದೇ ಹೋದಲ್ಲಿ ಒಪಿಡಿಯನ್ನು ಬಂದ್ ಮಾಡಿ ಧರಣಿ ಮಾಡುತ್ತೇವೆ ಎಂದು ಜಯದೇವ ಹೃದ್ರೋಗ ಆಸ್ಪತ್ರೆ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಒಪಿಡಿಯನ್ನು ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡಬಾರದು ಎಂದು ಆಸ್ಪತ್ರೆ ಸಿಬ್ಬಂದಿಗೆ ಡಾ. ಮಂಜುನಾಥ್ ಅವರು ಮನವಿ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು