Categories: Main News

ಅಭಿನಯ ಶಾರದೆ ಜಯಂತಿ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ(76) ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನರಾದರು.

ಅಭಿನಯ ಶಾರದೆ ಎಂದೇ ಖ್ಯಾತರಾದ ಜಯಂತಿ ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿ ಪುತ್ರ ಕೃಷ್ಣ ಕುಮಾರ್ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕನ್ನಡ, ತೆಲಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಭಾಷೆಗಳೆಲ್ಲ ಸೇರಿ ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.

ಕಳೆದ ರಾತ್ರಿ ಊಟ ಮಾಡಿ ಮಲಗಿದ್ದ ಜಯಂತಿ ಬೆಳಗ್ಗೆ ಏಳಲಿಲ್ಲ.‌ ರಾತ್ರಿ ಹೇಗೆ ಈ ಘಟನೆ ಸಂಭವಿಸಿತು ಗೊತ್ತಿಲ್ಲ. ಬೆಳಗ್ಗೆ ಎದ್ದೇಳಿಸೋಕೆ ನೋಡಿದೆವು ನಮಗೆ ಆಗಲೇ ತಿಳಿದಿದ್ದು, ಹೃದಯಾಘಾತವಾಗಿರಬಹುದು ಎಂದು ಕುಟುಂಬದ ಮೂಲಗಳು ಹೇಳಿವೆ.

ಬಳ್ಳಾರಿಯಲ್ಲಿ ಜನನ

1950 ರಲ್ಲಿ ಬಳ್ಳಾರಿಯಲ್ಲಿ ಜನಿಸಿದ ಜಯಂತಿ ಅವರ ಮೂಲ ಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಪಕರಾಗಿ ಕಾರ್ಯನಿರ್ವಹಿಸುತ್ತಿದ್ದರೆ, ತಾಯಿ ಸಂತಾನಲಕ್ಷ್ಮೀ ಗೃಹಿಣಿ.

ಹಿರಿಯ ಪುತ್ರಿ ಜಯಂತಿಗೆ ಇಬ್ಬರು ಕಿರಿಯ ಸಹೋದರರಿದ್ದಾರೆ. ಇವರ ತಂದೆ- ತಾಯಿಗಳು ವಿಚ್ಚೇದನ ಪಡೆದ ಕಾರಣ ಜಯಂತಿ ತಮ್ಮ ತಾಯಿಯ ಜೊತೆ ಮದ್ರಾಸ್‍ನಲ್ಲಿ ಬೆಳೆದರು.

ತಾಯಿಗೆ ಜಯಂತಿಯನ್ನು ಶಾಸ್ತ್ರೀಯ ನೃತ್ಯಗಾರ್ತಿಯನ್ನಾಗಿ ಮಾಡಬೇಕೆಂಬ ಬಯಕೆ ಇತ್ತು. ಹೀಗಾಗಿ ಚಂದ್ರಕಲಾರವರ ನೃತ್ಯಶಾಲೆಗೆ ಸೇರಿಸಿದರು.

ಇಲ್ಲಿ ಜಯಂತಿಯವರ ಸಹಪಾಠಿಯಾಗಿದ್ದ ಮನೋರಮಾರವರು ಮುಂದೆ ಪ್ರಖ್ಯಾತ ತಮಿಳು ನಟಿಯಾದರು. ಕನ್ನಡ ನಿರ್ದೇಶಕ ವೈ.ಆರ್.ಸ್ವಾಮಿಯವರು ಒಂದು ನೃತ್ಯಾಭ್ಯಾಸದಲ್ಲಿ ಜಯಂತಿಯವರನ್ನು ನೋಡಿ ತಮ್ಮ `ಜೇನು ಗೂಡು’ ಚಿತ್ರದಲ್ಲಿ ನಟಿಸುವ ಅವಕಾಶ ಕೊಟ್ಟರು. ಇಲ್ಲಿಂದ ಜಯಂತಿಯವರ ಅದೃಷ್ಟವೇ ಬದಲಾಯಿತು.

ಕಮಲಾ ಕುಮಾರಿಗೆ ಜಯಂತಿ ಎಂದು ನಾಮಕರಣ ಮಾಡಿದವರು ಸ್ವಾಮಿಯವರೇ. ಕನ್ನಡದಲ್ಲಿ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ ಇವರು ಡಾ.ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ

ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More

April 27, 2024

14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ

ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More

April 27, 2024

ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More

April 26, 2024